Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ| ಸಂಸತ್‌ನಲ್ಲಿ ಮಹಾಭಿಯೋಗಕ್ಕೆ ತಯಾರಿ – ಸುಪ್ರೀಂ ಮೆಟ್ಟಿಲೇರಿದ ನ್ಯಾ.ಯಶವಂತ್ ವರ್ಮಾ

Public TV
Last updated: July 18, 2025 12:16 pm
Public TV
Share
3 Min Read
Delhi Judge House Fire
SHARE

ನವದೆಹಲಿ: ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪತ್ತೆಯಾದ ಕಂತೆ ಕಂತೆ ನೋಟು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ (Allahabad High Court) ನ್ಯಾಯಾಧೀಶ ನ್ಯಾ.ಯಶವಂತ್ ವರ್ಮಾ (Yashwant Varma) ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧದ ಆಂತರಿಕ ಸಮಿತಿ ನೀಡಿದ ವರದಿಯನ್ನು ಅವರು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ವರ್ಮಾ ಅವರನ್ನು ಅಧಿಕಾರದಿಂದ ತೆಗೆದುಹಾಕಲು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಾಭಿಯೋಗ (Impeachment – ಸರ್ಕಾರಿ ಸೇವೆಯಲ್ಲಿರುವ ವ್ಯಕ್ತಿಯ ಮೇಲೆ ಗಂಭೀರ ಆರೋಪ ಬಂದಾಗ ಅವರನ್ನು ಅಧಿಕಾರದಿಂದ ತೆಗೆದುಹಾಕಲು ಸಂಸತ್ತಿಗೆ ಇರುವ ಅಧಿಕಾರವನ್ನು ಮಹಾಭಿಯೋಗ ಎನ್ನುತ್ತಾರೆ) ನಿರ್ಣಯ ಮಂಡಿಸಲು ತಯಾರಿ ಆರಂಭಿಸಿದೆ ಎಂಬ ವರದಿಗಳು ಬಂದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ,ನ್ಯಾ. ವರ್ಮಾ ಅವರು ನಿವೃತ್ತ ಸಿಜೆಐ ಸಂಜೀವ್ ಖನ್ನಾ ಅವರು ಹೈಕೋರ್ಟ್ ನ್ಯಾಯಾಧೀಶ ಸ್ಥಾನದಿಂದ ತಮ್ಮನ್ನು ವಜಾಗೊಳಿಸುವಂತೆ ಮಾಡಿದ ಶಿಫಾರಸನ್ನು ಅಸಾಂವಿಧಾನಿಕ ಮತ್ತು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿದ್ದಾರೆ. ಇದನ್ನೂ ಓದಿ: ಜಡ್ಜ್‌ ಮನೆಯಲ್ಲಿ ಕಂತೆ ಕಂತೆ ನೋಟು – ಸಿಜೆಐ ಅನುಮತಿ ನೀಡದ ಹೊರತು ಎಫ್‌ಐಆರ್‌ ದಾಖಲಾಗಲ್ಲ: ಅಮಿತ್‌ ಶಾ

ನ್ಯಾಯಾಧೀಶರ ವಿರುದ್ಧದ ದೂರುಗಳ ವಿಚಾರಣೆಯ ಆಂತರಿಕ ಕಾರ್ಯವಿಧಾನವನ್ನು ನ್ಯಾಯಮೂರ್ತಿ ವರ್ಮಾ ಪ್ರಶ್ನಿಸಿದ್ದಾರೆ. ಇದು ಸಂಸತ್ತಿನಲ್ಲಿ (Parliament) ಹೈಕೋರ್ಟ್ ನ್ಯಾಯಾಧೀಶರನ್ನು ತೆಗೆದುಹಾಕುವ ಅಧಿಕಾರವನ್ನು ಪ್ರತ್ಯೇಕವಾಗಿ ಹೊಂದಿರುವ ಕಾನೂನಿನಿಂದ ಅವಮಾನಿಸುವ ಸಮಾನಾಂತರ, ಸಾಂವಿಧಾನಿಕವಲ್ಲದ ಕಾರ್ಯವಿಧಾನವನ್ನು ಸೃಷ್ಟಿಸುತ್ತದೆ ಎಂದು ವಾದಿಸಿದ್ದಾರೆ.

ನ್ಯಾಯಾಧೀಶರ (ವಿಚಾರಣಾ) ಕಾಯ್ದೆ, 1968 ರ ಅಡಿಯಲ್ಲಿ ಒದಗಿಸಲಾದ ಸುರಕ್ಷತಾ ಕ್ರಮಗಳನ್ನು ಆಂತರಿಕ ಕಾರ್ಯವಿಧಾನವು ಹೊಂದಿಲ್ಲ. ಯಾವುದೇ ಔಪಚಾರಿಕ ದೂರು ದಾಖಲಾಗದೇ ಇದ್ದಾಗ ತನ್ನ ವಿರುದ್ಧ ಆಂತರಿಕ ವಿಚಾರಣೆ ನಡೆಸಲಾಗಿದೆ. ಇದು ಅನುಚಿತ ಮತ್ತು ಅಮಾನ್ಯವಾಗಿದೆ. ಸುಪ್ರೀಂ ಕೋರ್ಟ್ ಪತ್ರಿಕಾ ಪ್ರಕಟಣೆಯ ಮೂಲಕ ಆರೋಪಗಳನ್ನು ಬಹಿರಂಗಪಡಿಸಿದ್ದರಿಂದ ಅವರು ಮಾಧ್ಯಮ ವಿಚಾರಣೆಗೆ ಒಳಪಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.  ಇದನ್ನೂ ಓದಿ: ಕಂತೆ ಕಂತೆ ನೋಟು ಪತ್ತೆಯಾದ ಜಡ್ಜ್‌ ಮೇಲೆ ದಾಖಲಾಗಿತ್ತು ಸಿಬಿಐ ಎಫ್‌ಐಆರ್‌

PARLIAMENT 1

ಮನೆಯಲ್ಲಿ ಕಂತೆ ಕಂತೆ ನೋಟು (Cash) ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ನ್ಯಾ.ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರನ್ನು ವಜಾಗೊಳಿಸುವಂತೆ ಮೂವರು ಹಿರಿಯ ನ್ಯಾಯಾಧೀಶರ ಸಮಿತಿ ಶಿಫಾರಸು ಮಾಡಿತ್ತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು, ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಧಾವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶಿವರಾಮನ್‌ ಇದ್ದ ಸಮಿತಿ ತನ್ನ ಅಂತಿಮ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿತ್ತು. ಇದನ್ನೂ ಓದಿ: ಬಂದ್‌ಗೆ ಮುಂದಾಗಿದ್ದ ಸಾರಿಗೆ ಸಂಘಟನೆಗಳಿಗೆ ಶಾಕ್‌ – ಎಸ್ಮಾ ಜಾರಿ, 6 ತಿಂಗಳು ಪ್ರತಿಭಟನೆಗೆ ನಿಷೇಧ

ನ್ಯಾ. ಯಶವಂತ್ ವರ್ಮಾ ಅವರ ನಿವಾಸದೊಳಗೆ ನೋಟುಗಳ ದೊಡ್ಡ ರಾಶಿ ಇರುವುದನ್ನು ಹಲವು ಮಂದಿ ನೋಡಿದ್ದಾರೆ. ಆದರೆ ವರ್ಮಾ ಅವರು ಎಂದಿಗೂ ದೂರು ದಾಖಲಿಸಿಲ್ಲ ಅಥವಾ ನ್ಯಾಯಾಂಗದ ಅಧಿಕಾರಿಗಳಿಗೆ ತಿಳಿಸಿಲ್ಲ ಎಂದು ಸಮಿತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಈ ನಡವಳಿಕೆಯನ್ನು ಅಸ್ವಾಭಾವಿಕ ಎಂದು ಕರೆದಿರುವ ಸಮಿತಿಯು ಅವರನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ವರ್ಮಾ ಅವರು ಸಮರ್ಥನೀಯ ವಿವರಣೆಯನ್ನು ನೀಡಿಲ್ಲ. ಯಾವುದೇ ಪಿತೂರಿ ಇದ್ದರೆ ಅವರು ದೂರು ದಾಖಲಿಸಿಲ್ಲ ಯಾಕೆ? ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅಥವಾ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಮಾಹಿತಿ ನೀಡಿಲ್ಲ ಯಾಕೆ ಎಂದು ಸಮಿತಿ ಪ್ರಶ್ನಿಸಿತ್ತು.

ನ್ಯಾ. ವರ್ಮಾ ಅವರ ಮಗಳು ಸೇರಿದಂತೆ 55 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಸಮಿತಿ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿಯಿಂದ ಕೋಣೆಯ ನೆಲದಾದ್ಯಂತ ಹರಡಿರುವ 500 ರೂ. ನೋಟುಗಳ ದೊಡ್ಡ ರಾಶಿಯನ್ನು ವಿಡಿಯೋ ಮತ್ತು ಫೋಟೋಗಳನ್ನು ಪರಿಶೀಲಿಸಿದೆ. ಇಷ್ಟು ದೊಡ್ಡ ಮೊತ್ತದ ಹಣವನ್ನು ನೋಡಿ ನನಗೆ ಆಘಾತ ಮತ್ತು ಆಶ್ಚರ್ಯವಾಯಿತು. ನನ್ನ ಜೀವನದಲ್ಲಿ ಇಷ್ಟೊಂದು ಹಣವನ್ನು ನಾನು ಮೊದಲ ಬಾರಿಗೆ ನೋಡಿದ್ದೇನೆ ಎಂದು ಒಬ್ಬ ಸಾಕ್ಷಿ ಸಮಿತಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿತ್ತು.

TAGGED:Allahabad High CourtparliamentSupreme CourtYashwant Varmaಅಲಹಾಬಾದ್ನ್ಯಾ.ಯಶವಂತ್ ವರ್ಮಾಮಹಾಭಿಯೋಗಸಂಸತ್ತುಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Cocaine Seized in kempegowda airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್ ಜಪ್ತಿ

Public TV
By Public TV
2 minutes ago
DK Shivakumar priyanka kharge in kamakhya temple
Latest

ಸಂಸದೆ ಪ್ರಿಯಾಂಕಾ ಗಾಂಧಿ ಜೊತೆ ಕಾಮಾಕ್ಯ ದೇಗುಲಕ್ಕೆ ಡಿಕೆಶಿ ಭೇಟಿ

Public TV
By Public TV
17 minutes ago
Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
35 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
57 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
1 hour ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?