ಗಾಂಧಿನಗರ: ಭಾನುವಾರ ಗುಜರಾತಿನ ಜುನಾಗಢದ ಮಲಂಕಾ ಗ್ರಾಮದಲ್ಲಿ ಭಾರೀ ಮಳೆಗೆ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ವಾಹನಗಳು ಕುಸಿದ ಸೇತುವೆ ಮಧ್ಯೆ ಸಿಲುಕಿದ್ದು, ಅದರಲ್ಲಿದ್ದ ಪ್ರಾಯಾಣಿಕರು ಗಾಯಗೊಂಡಿದ್ದರು. ಈ ಮಧ್ಯೆ ಸೇತುವೆಯ ಕುಸಿದ ಭಾಗದಿಂದ ವಾಹನಗಳನ್ನು ಜನರು ಹೊರತಗೆಯುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಸೇತುವೆ ಮಧ್ಯ ಭಾಗ ಕುಸಿದು ಬಿದ್ದ ತಕ್ಷಣ ಅದರ ಮೇಲೆ ಸಂಚರಿಸುತ್ತಿದ್ದ ವಾಹನಗಳು ಸೇತುವೆ ಮಧ್ಯೆ ಸಿಲುಕಿಕೊಂಡಿದೆ. ಮಳೆಗೆ ಸೇತುವೆ ಬಿರುಕು ಬಿಟ್ಟುಕೊಂಡಿತ್ತು. ಆದರೆ ಯಾರು ಕೂಡ ಅದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಭಾನುವಾರ ಸೇತುವೆ ಮೇಲೆ ವಾಹನಗಳ ಓಡಾಟಕ್ಕೆ ಅದು ಕುಸಿದು ಬಿದ್ದಿದೆ. ಈ ಘಟನೆ ನಡೆಯುತ್ತಿದ್ದಂತೆ ಸೇತುವೆ ಆಸು-ಪಾಸಿನಲ್ಲಿದ್ದ ಇತರೆ ವಾಹನ ಸವಾರರು ಹಾಗೂ ಸ್ಥಳೀಯರು ಸೇತುವೆ ಮಧ್ಯೆ ಸಿಲುಕಿದ್ದ ಜನರ ರಕ್ಷಣೆ ಮಾಡಿದರು.
Gujarat: Many cars damaged after a bridge collapsed near Malanka village in Junagadh in Gujarat yesterday. No casualties reported. More details awaited. pic.twitter.com/S1gKhyP7Oi
— ANI (@ANI) October 7, 2019
ಜೊತೆಗೆ ಸೇತುವೆ ಕುಸಿದ ಭಾಗದಲ್ಲಿ ಸಿಲುಕಿಕೊಂಡಿದ್ದ ಕಾರುಗಳನ್ನು ಹಗ್ಗ ಕಟ್ಟಿ ಎಳೆದು ಮೇಲಕ್ಕೆ ಎತ್ತಿದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸದ್ಯ ಗಾಯಗೊಂಡವರನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸೇತುವೆ ಕುಸಿದ ಹಿನ್ನೆಲೆ ಜುನಾಗಢ ಹಾಗೂ ಮಂಡ್ರಾ ಪ್ರದೇಶದ ಸಂಚಾರ ಸ್ಥಗಿತಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಡಳಿತ, ಮಳೆಗೆ ಸೇತುವೆ ಕುಸಿದು ಬಿದ್ದಿದೆ ಎನ್ನಲಾಗುತ್ತಿದೆ. ಆದರೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದರು. ಹಾಗೆಯೇ ಹಲವು ಕಾರುಗಳು ಸೇತುವೆ ಮಧ್ಯೆ ಸಿಲುಕಿಕೊಂಡಿತ್ತು, ಸುಮಾರು 4 ಕಾರು ನದಿಗೆ ಬಿದ್ದಿದೆ ಎಂದು ತಿಳಿಸಿದರು.
As received as forward the bridge collapsed in Gujarat at village Malanaka, Taluka Mendarda Junagadh @nitin_gadkari @PMOIndia Sir people don't want this type of quality work, please look in this regard. People of India have much expectations from your government. pic.twitter.com/rKvBzd8yxw
— Yogesh Joshi ???????? (@YlJoshi) October 6, 2019
ಸೇತುವೆ ಸುತ್ತಮುತ್ತಲ ಪ್ರದೇಶದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು, ನಾವು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಜೋರಾದ ಶಬ್ದ ಬಂತು. ಆಗ ನಾವು ತಕ್ಷಣ ಸ್ಥಳಕ್ಕೆ ಹೋಗಿ ನೋಡಿದಾಗ, ಸೇತುವೆ ಕುಸಿದು ಬಿದ್ದಿತ್ತು. ಕೆಲವು ಕಾರುಗಳು ಅದರಲ್ಲಿ ಸಿಲುಕಿಕೊಂಡಿತ್ತು. ತಕ್ಷಣ ನಾವೆಲ್ಲಾ ಕುಸಿದ ಭಾಗದಲ್ಲಿ ಸಿಲುಕಿಕೊಂಡಿದ್ದ ಕಾರುಗಳಲ್ಲಿ ಇದ್ದ ಜನರನ್ನು ರಕ್ಷಣೆ ಮಾಡಿದೆವು. ಬಳಿಕ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಕೊಟ್ಟೆವು ಎಂದು ಹೇಳಿದರು.