ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶರು

Public TV
1 Min Read
Rebel MLA 6 e1562492941234

ನವದೆಹಲಿ: ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠದ ಪೈಕಿ ಕರ್ನಾಟಕ ಮೂಲದ ಓರ್ವ ನ್ಯಾಯಾಧೀಶರು ಹಿಂದಕ್ಕೆ ಸರಿದ ಪರಿಣಾಮ ಅನರ್ಹ ಶಾಸಕರ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗಿದೆ.

ಸುಪ್ರೀಂಕೋರ್ಟಿನ ತ್ರಿ ಸದಸ್ಯ ಪೀಠದ ಕರ್ನಾಟಕ ಮೂಲದ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಅರ್ಜಿಯನ್ನು ಮುಂದೂಡಲಾಗಿದೆ. ನ್ಯಾ.ಎನ್.ವಿ.ರಮನ್, ನ್ಯಾ. ಮೋಹನ್ ಶಾಂತನಗೌಡರ್ ಮತ್ತು ನ್ಯಾ.ಅಜಯ್ ರಸ್ತೋಗಿ ತ್ರಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ನ್ಯಾಯಾಧೀಶರು ಹಿಂದೆ ಸರಿದ ಪರಿಣಾಮ ಮತ್ತೊಬ್ಬರನ್ನು ನೇಮಕ ಮಾಡಿ ಮರುಪೀಠ ರಚನೆಯಾಗಬೇಕು.

mohan shantangowdar

ಅನರ್ಹ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ, ನಮ್ಮ ಕಕ್ಷಿದಾರರು ಆಗಸ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಸಾಕಷ್ಟು ಸಮಯವಾಗಿದ್ದು, ಆದಷ್ಟು ಬೇಗ ಅರ್ಜಿಯ ವಿಚಾರಣೆ ನಡೆಸಬೇಕೆಂದು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡರು. ವಿಚಾರಣೆ ಮುಂದೂಡುವುದರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಕೆಪಿಸಿಸಿ ಪರ ವಕೀಲ ಕಪಿಲ್ ಸಿಬಲ್ ತಿಳಿಸಿದ್ದಾರೆ.

ನ್ಯಾ.ಮೋಹನ್ ಶಾಂತನಗೌಡರು ಕರ್ನಾಟಕದ ಹಾವೇರಿ ಜಿಲ್ಲೆಯವರು. ಅರ್ಜಿ ಸಲ್ಲಿಸಿರುವ ಶಾಸಕರ ಪೈಕಿ ಬಿ.ಸಿ.ಪಾಟೀಲ್ ಸಹ ಹಾವೇರಿ ಮೂಲದವರಾಗಿದ್ದರಿಂದ ನಾವೇ ಅರ್ಜಿಯನ್ನು ಕೈಗೆತ್ತಿಕೊಳ್ಳುವುದು ಉತ್ತಮ ಅಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *