79ನೇ ವಸಂತಕ್ಕೆ ಕಾಲಿಟ್ಟ ಗಾನಗಂಧರ್ವ- ಮೂಕಾಂಬಿಕಾ ಸನ್ನಿಧಿಯಲ್ಲಿ ಜೇಸುದಾಸ್ ಹುಟ್ಟುಹಬ್ಬ

Public TV
1 Min Read
Yesudas udupi birthday 1

ಉಡುಪಿ: ಗಾನ ಗಂಧರ್ವ ಜೇಸುದಾಸ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ತಮ್ಮ 79ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಬೆಳಗ್ಗೆ ಪತ್ನಿ ಪ್ರಭಾ ಜೇಸುದಾಸ್ ಅವರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು, ದೇವರ ದರ್ಶನ ಪಡೆದರು.

ಪ್ರತಿ ವರ್ಷ ಕೊಲ್ಲೂರಲ್ಲಿ ಹುಟ್ಟುಹಬ್ಬ ಆಚರಿಸುತ್ತಾ ಬಂದಿರುವ ಜೇಸುದಾಸ್, ಸಂಕಲ್ಪದಂತೆ ಚಂಡಿಕಾ ಹೋಮ ನೆರವೇರಿಸಿ ಪೂರ್ಣಾಹುತಿ ಸಲ್ಲಿಸಿದರು. ಅರ್ಚಕ ಗೋವಿಂದ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು. ಬಳಿಕ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದಲ್ಲಿ ಅಕ್ಷರಾಭ್ಯಾಸ ಸೇವೆ ನಡೆಸಿದರು.

UDP K.J.Yesudas

ದೇವಸ್ಥಾನದ ಪ್ರಾಂಗಣದಲ್ಲಿ ನೆರೆದಿದ್ದ ನೂರಾರು ಅಭಿಮಾನಿಗಳು, ಭಕ್ತರು ಜೇಸುದಾಸ್ ಮೂಲಕ ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿಕೊಂಡರು. ಭಕ್ತಿಯಲ್ಲಿ ಮಿಂದೆದ್ದ ಜೇಸುದಾಸ್ ಇದೇ ಸಂದರ್ಭ ಸ್ವರ್ಣಮುಖಿ ಸಭಾಭವನದಲ್ಲಿ ಭಕ್ತರ ಸಮ್ಮುಖದಲ್ಲಿ ಭಕ್ತಿಗೀತೆಯನ್ನು ಹಾಡಿದರು.

ಸಾವಿರಾರು ಭಕ್ತರು ಜೇಸುದಾಸ್ ಗಾಯನದಿಂದ ಭಾವಪರವಶರಾದರು. ಜೇಸುದಾಸ್ ಹುಟ್ಟುಹಬ್ಬದ ನಿಮಿತ್ತ ಗಾಯಕ ಕಾಂಞಗಾಡ್ ರಾಮಚಂದ್ರನ್ ಆಯೋಜಿಸಿದ್ದ ಸಂಗೀತೋತ್ಸವಕ್ಕೆ ಸ್ವತಃ ಜೇಸುದಾಸ್ ಗಾಯನದ ಮೂಲಕ ಚಾಲನೆ ನೀಡಿದರು. ಧಾರ್ಮಿಕ ವಿಧಿ, ಹುಟ್ಟುಹಬ್ಬ ಪೂರೈಸಿ ಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿ ನಿರ್ಗಮಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *