ನವದೆಹಲಿ: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ (K.Kavitha) ಅವರನ್ನು ದೆಹಲಿ (New Delhi) ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ.
ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು. ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಇದನ್ನೂ ಓದಿ: ಉಗ್ರನ ಬಿಡುಗಡೆಗೆ ಕೇಜ್ರಿವಾಲ್ಗೆ 133 ಕೋಟಿ ರೂ. ಪಾವತಿಸಿದ್ದೇವೆ: ಖಲಿಸ್ತಾನಿ ಉಗ್ರ ಪನ್ನು
ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್ನಲ್ಲಿ ಇರಿಸುವ ಬದಲು ಇ.ಡಿ ತಿಹಾರ್ ಜೈಲಿಗೆ ವರ್ಗಾಯಿಸುವ ಸಾಧ್ಯತೆ ಇದೆ. ಬಿಆರ್ಎಸ್ ನಾಯಕಿ ನಿಜವಾಗಿ 100 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನು ಎಎಪಿ ನಾಯಕರಿಗೆ ಪಾವತಿಸಲಾಗಿದೆ ಎಂದು ಆರೋಪವನ್ನು ಕವಿತಾ ಹೊತ್ತಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿ ಸರ್ಕಾರದ ಅಡಿಯಲ್ಲಿ ಮದ್ಯದ ಪರವಾನಗಿಗಾಗಿ ಎಎಪಿಗೆ 100 ಕೋಟಿ ಲಂಚವನ್ನು ಪಾವತಿಸಿದ ‘ಸೌತ್ ಗ್ರೂಪ್’ ನ ಪ್ರಮುಖ ಸದಸ್ಯೆ ಎಂದು ಇಡಿ ಆರೋಪಿಸಿದೆ. ಎಎಪಿ ಗೋವಾ ಮತ್ತು ಪಂಜಾಬ್ ಚುನಾವಣಾ ಪ್ರಚಾರಕ್ಕಾಗಿ ಈ ಹಣವನ್ನು ಬಳಸಿದೆ ಎಂದು ಇಡಿ ಆರೋಪ ಮಾಡಿದೆ. ಇದನ್ನೂ ಓದಿ: ತೆಲಂಗಾಣದಲ್ಲಿ ಫೋನ್ ಕದ್ದಾಲಿಕೆ ಕೇಸ್ – ಇಂಟಲಿಜೆನ್ಸ್ ಬ್ಯೂರೋ ಮಾಜಿ ಮುಖ್ಯಸ್ಥ ಆರೋಪಿ ನಂ.1