ರಾಯಚೂರು: ಅಧಿಕಾರದಲ್ಲಿದ್ದಾಗ ನಾನು ತಪ್ಪು ಮಾಡಿದ್ರೆ ಆಗ ಪ್ರಿಯಾಂಕಾ ಖರ್ಗೆ ಅವರು ನಿದ್ದೆ ಮಾಡುತ್ತಿದ್ದರಾ? ನಾನು ತಪ್ಪು ಮಾಡಿದ್ದರೆ ಈ ಬಗ್ಗೆ ಬಯಲು ಮಾಡಲಿ ಎಂದು ನಿವೃತ್ತ ಐಎಎಸ್ ಅಧಿಕಾರಿ, ಬಿಜೆಪಿ ನಾಯಕಿ ರತ್ನಪ್ರಭಾ ಸವಾಲು ಹಾಕಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹೇಳಿಕೊಟ್ಟ ಹಾಗೆ ಹೇಳಿಕೆ ನೀಡಿದರೆ ಅಧಿಕಾರದಲ್ಲಿದ್ದಾಗ ಮಾಡಿದ್ದ ತಪ್ಪುಗಳನ್ನ ಹೊರಹಾಕುತ್ತೇವೆ ಎಂದಿದ್ದ ಪ್ರಿಯಾಂಕಾ ಖರ್ಗೆ ಅವರಿಗೆ ತಿರುಗೇಟು ನೀಡಿದರು.
- Advertisement 2
- Advertisement 3
ನಿವೃತ್ತಿ ಆದ ಮೇಲೆ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ಮತ ನೀಡಿ ಎಂದು ಜನರಲ್ಲಿ ಬೇಡಿಕೊಳ್ಳುತ್ತಿದ್ದೇವೆ. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ವೇಗವಾಗಿ ಅಭಿವೃದ್ಧಿ ಆಗಬೇಕು, ಹಾಗಾಗಿ ಬಿಜೆಪಿ ಮೂಲಕ ರಾಜಕೀಯಕ್ಕೆ ಬಂದಿದ್ದೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
- Advertisement 4
ಈ ಭಾಗದಲ್ಲಿ ಅಭಿವೃದ್ಧಿ ವೇಗ ಕಡಿಮೆ ಇದೆ. ನಾನು ಅಧಿಕಾರದಲ್ಲಿದ್ದಾಗ ಸಾಕಷ್ಟು ಕೆಲಸಗಳನ್ನ ಮಾಡಲು ಆಗಲಿಲ್ಲ. ಈಗ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾದ್ಯಂತ ಓಡಾಡುತ್ತೇನೆ. ಸದಾಶಿವ ಆಯೋಗ ವರದಿ ವಿಚಾರದಲ್ಲಿ ರಾಜಕೀಯ ನಿರ್ಣಯ ತೆಗೆದುಕೊಳ್ಳಬೇಕು. ನನ್ನ ಅವಧಿ ವೇಳೆ ಸದನದಲ್ಲಿ ಈ ಬಗ್ಗೆ ಚರ್ಚೆ ಆಗಿತ್ತು. ಆದರೆ ಆ ವೇಳೆಗೆ ಚುನಾವಣಾ ದಿನಾಂಕ ಘೋಷಣೆ ಆಗಿ ನೀತಿ ಸಂಹಿತೆ ಜಾರಿ ಆಗಿತ್ತು. ಅದ್ದರಿಂದ ಅದನ್ನು ಕೈ ಬಿಡಲಾಯಿತು. ಸದ್ಯ ಈ ಬಗ್ಗೆ ಚರ್ಚೆ ನಡೆಸಬೇಕು. ಸದಾಶಿವ ಆಯೋಗ ವರದಿ ಜಾರಿ ಆಗಲೇಬೇಕು ಎಂದು ಹೇಳಿದರು.