Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಇಲ್ಲ: ಕೆ. ಎಸ್. ಈಶ್ವರಪ್ಪ

Public TV
Last updated: January 24, 2022 12:53 pm
Public TV
Share
3 Min Read
K.S Eshwarappa
SHARE

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲು ಸಾಧ್ಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಮಾಡಲು ಸಾಧ್ಯವೇ ಇಲ್ಲ. ರಾಜ್ಯದ ಅಧ್ಯಕ್ಷರ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಮಂತ್ರಿ ಮಂಡಲದ ಬಗ್ಗೆ ಚರ್ಚೆ ಮಾಡುತ್ತಾರೆ ಅಂದರೆ 4 ಸ್ಥಾನ ಖಾಲಿ ಇದೆ. ಆದರೆ ರಾಜ್ಯದ ಅಧ್ಯಕ್ಷರ ಸ್ಥಾನ ಖಾಲಿ ಇಲ್ಲ. ಹೀಗಾಗಿ ಬದಲಾವಣೆ ಮಾಡುವ ಪ್ರಶ್ನೆ ಉದ್ಭವ ಆಗುವುದಿಲ್ಲ. ನಳಿನ್ ಕುಮಾರ್ ಕಟೀಲ್ ಅವರು ಅಧ್ಯಕ್ಷರಾದ ನಂತರ ಎಲ್ಲಾ ಚುನಾವಣೆ ಗೆದ್ದುಕೊಂಡು ಬಂದಿದ್ದು, ಉಪ ಚುನಾವಣೆಯಲ್ಲಿ ಗೆದ್ದಿದ್ದೇವೆ ಎಂದರು.

BJP LOGO

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದಿದ್ದೇವೆ. ಎಂಎಲ್‍ಸಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆದು, ವಿಧಾನ ಪರಿಷತ್ ನಲ್ಲಿ ಬಹುಮತ ಪಡೆದಿದ್ದೇವೆ. ನಳಿನ್ ಕುಮಾರ್ ಕಟೀಲ್ ಅವರು ಸಂಘಟನಾ ಚತುರರು. ಕಟೀಲ್ ಅವರು ಅಧ್ಯಕ್ಷರಾಗಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ಬದಲಾವಣೆ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ. ನಾನು ಸಹ ಪಕ್ಷ ಏನು ಜವಾಬ್ದಾರಿ ಕೊಡುತ್ತದೋ ಅದನ್ನು ಮುಂಚಿನಿಂದಲೂ ಮಾಡಿಕೊಂಡು ಬಂದಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ನೇತಾಜಿ ಕಾರ್ಯಕ್ರಮದಲ್ಲಿ TMC, BJP ಬೆಂಬಲಿಗರ ನಡುವೆ ಘರ್ಷಣೆ – ಕಲ್ಲು ತೂರಾಟ, 2 ಕಾರು ಧ್ವಂಸ

ಮಂತ್ರಿ ಆಗು ಅಂದಾಗ ಮಂತ್ರಿ ಆಗಿದ್ದೇನೆ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಪಕ್ಷದ ಅಧ್ಯಕ್ಷನಾಗು ಅಂದಾಗ, ಅಧ್ಯಕ್ಷ ಸಹ ಆಗಿದ್ದೇನೆ. ಕೇಂದ್ರದ ನಾಯಕರು, ರಾಜ್ಯದ ನಾಯಕರು, ಸಂಘ ಪರಿವಾರದ ನಾಯಕರು ಏನು ಸ್ಥಾನ ತೆಗೆದುಕೊಳ್ಳಬೇಕು ಅಂತಾರೋ ಅದಕ್ಕೆ ನಾನು ಸಿದ್ಧ. ಪಕ್ಷದ ಸಂಘಟನೆ ನೀಡಿದರೆ ಅದನ್ನು ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ. ಮಂತ್ರಿ ಸ್ಥಾನಕ್ಕಿಂತ ನನಗೆ ಪಕ್ಷದ ಸಂಘಟನೆ ಹೆಚ್ಚು ಖುಷಿ ನೀಡುತ್ತದೆ. ಮುಂದಿನ ವಿಧಾನಸಭೆ ಗೆಲ್ಲಬೇಕು, ಮುಂದಿನ ಬಾರಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ದೇಶದಲ್ಲಿ ಮತ್ತೊಮ್ಮೆ ಪಕ್ಷ ಅಧಿಕಾರಕ್ಕೆ ಬರುವ ಜೊತೆಗೆ ಮೋದಿಯವರು ಪ್ರಧಾನಿ ಆಗಬೇಕು. ಮತ್ತೊಮ್ಮೆ ಮೋದಿ ಅವರು ಪ್ರಧಾನಿ ಆಗುವವರೆಗೂ ನಾವು ಬಿಡುವುದಿಲ್ಲ ಎಂದರು.

Nalin kumar katil

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯ ವೈಖರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಇಡೀ ರಾಜ್ಯವನ್ನು ಸುತ್ತಿ ಏನೇನು ಕೆಲಸ ಆಗಬೇಕಿತ್ತೋ ಅದೆಲ್ಲಾ ಚೆನ್ನಾಗಿ ಆಗುತ್ತಿದೆ. ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಒಳ್ಳೆಯ ಪ್ರಯತ್ನ ನಡೆಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪುಷ್ಪ ಸಿನಿಮಾ ನೋಡಿ 24 ವರ್ಷದ ಯುವಕನ ಬರ್ಬರ ಹತ್ಯೆ – ಮೂವರು ಅರೆಸ್ಟ್

ಶಾಲೆ ಆರಂಭ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಶಾಲೆಯಲ್ಲಿ ಕೋವಿಡ್ ಸಮಸ್ಯೆ ಇದೆಯೋ, ಆ ಶಾಲೆಯನ್ನು ನಡೆಸುವುದು ಬಿಡುವ ವಿಚಾರವನ್ನು ಅವರಿಗೆ ಬಿಟ್ಟಿದ್ದೇವೆ. ಮಕ್ಕಳಿಗೆ ಕೋವಿಡ್ ಜಾಸ್ತಿ ಇದ್ದರೆ, ರಜೆ ಘೋಷಿಸಬೇಕು ಅನಿಸಿದರೆ ಜಿಲ್ಲಾಧಿಕಾರಿ ಅವರ ಒಪ್ಪಿಗೆ ಪಡೆದು ರಜೆ ನೀಡಬೇಕು. ನಾವು ಶಾಲೆ ನಡೆಸುತ್ತೇವೆ ಅಂದರೆ ನಮ್ಮ ಅಭ್ಯಂತರ ಇಲ್ಲ. ಪೋಷಕರ ಒಪ್ಪಿಗೆ ಪಡೆದು ಶಾಲಾ ಆಡಳಿತ ಮಂಡಳಿ ಏನು ಬೇಕಾದರೂ ತೀರ್ಮಾನ ಮಾಡುವ ಅವಕಾಶ ಅವರಿಗೆ ಕೊಟ್ಟಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಕೋವಿಡ್ ಸಮಸ್ಯೆ ಅಷ್ಟು ಇಲ್ಲ. ಅಧಿಕಾರಿಗಳು ಕೋವಿಡ್ ನಿರ್ವಹಣೆಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ ಎಂದರು.

bommai bengaluru

ಸಚಿವ ಸಂಪುಟ ರಚನೆ ವಿಚಾರವಾಗಿ ಮಾತನಾಡಿ, ಆಕಾಂಕ್ಷಿಗಳು ಹೆಚ್ಚಾಗುವುದು ಸ್ವಾಭಾವಿಕವಾಗಿದೆ. ಹುದ್ದೆ ಇದೆ ಅಂದಾಕ್ಷಣ ರಾಜಕಾರಣದಲ್ಲಿ ಇರುವವರು ನಾನು ಮಂತ್ರಿ ಆಗಬೇಕು ಅಂತಾ ಯೋಚನೆ ಮಾಡೋದು ತಪ್ಪಲ್ಲ. ಎಂಎಲ್‍ಎ ಹಾಗೂ ಎಂಎಲ್‍ಸಿ ಇರಬಹುದು, ಯಾವುದೇ ರಾಜಕಾರಣಿ ನಾನು ಮಂತ್ರಿ ಆಗಬೇಕು ಅಂತಾ ಯೋಚನೆ ಮಾಡೋದು ತಪ್ಪಲ್ಲ. ಯಾರಿಗೆ ಮಂತ್ರಿ ಸ್ಥಾನಕ್ಕೆ ಕೇಂದ್ರದ ನಾಯಕರು ಆಯ್ಕೆ ಮಾಡುತ್ತಾರೋ ಅವರಿಗೆ ಉಳಿದವರು ಸಹಕಾರ ಕೊಡುತ್ತಾರೆ. ಇಲ್ಲಿಯವರೆಗೆ ಸಹ ಅದೇ ನಡೆದುಕೊಂಡು ಬಂದಿರುವುದು. ಹೀಗಾಗಿಯೇ ಸರ್ಕಾರ ಇಲ್ಲಿಯವರೆಗೆ ನಡೆದುಕೊಂಡು ಬಂದಿದೆ. ಉಳಿದ ವರ್ಷಗಳ ಅವಧಿಗೂ ಸಹ ಸರ್ಕಾರ ತುಂಬ ಚೆನ್ನಾಗಿ ನಡೆಯುತ್ತದೆ ಎಂದು ನುಡಿದರು.

TAGGED:Basavaraja Bommaibjpk s eshwarappaNalin Kumar Kateelshivamoggaಕೆ.ಎಸ್.ಈಶ್ವರಪ್ಪನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬಿಜೆಪಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Bigg Boss
ಗಿಲ್ಲಿ ಜೊತೆ ಕಿರಿಕ್ ಮಾಡ್ಕೊಂಡ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳು
Cinema Latest Sandalwood Top Stories
Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood
Mango Pachcha
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್ : ಕಿಚ್ಚನ ಅಳಿಯನ ಸಿನಿಮಾ
Cinema Latest Sandalwood Top Stories
gilli rajat bigg boss
ತಿಂದಾಕೋ ಇವ್ರಿಗೆ ಇಷ್ಟು ಇರಬೇಕಾದ್ರೆ, ಇನ್ನು ತಂದಾಕೋ ನಮಗೆಷ್ಟು ಇರ್ಬೇಡ: ಗೆಸ್ಟ್‌ಗಳಿಗೆ ಗಿಲ್ಲಿ ಹೀಗನ್ನೋದಾ?
Cinema Latest Main Post TV Shows

You Might Also Like

Odanadi Parashu
Chitradurga

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

Public TV
By Public TV
14 minutes ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
20 minutes ago
Gautam Gambhir
Cricket

ಭಾರತೀಯ ಕ್ರಿಕೆಟ್‌ ಮುಖ್ಯ, ನಾನಲ್ಲ – ಕೋಚ್‌ ಹುದ್ದೆಗೆ ಗುಡ್‌ ಬೈ ಹೇಳ್ತಾರಾ ಗಂಭೀರ್‌?

Public TV
By Public TV
29 minutes ago
Piyush Goyal HDK
Bidar

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

Public TV
By Public TV
34 minutes ago
Al Falah University
Latest

ಅಲ್ ಫಲಾಹ್ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗುವ ಭೀತಿ

Public TV
By Public TV
38 minutes ago
railway food 1
Latest

ರೈಲ್ವೆಗಳಲ್ಲಿ ಕೇವಲ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ NHRC ನೋಟಿಸ್

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?