Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್

Bengaluru City

ಅಂಬುಲೆನ್ಸ್ ಸೇವೆಗೆ ಹೊಸ ರೂಪ, ಆರೋಗ್ಯ ಕವಚ-108 ಉನ್ನತೀಕರಣಕ್ಕೆ ಆಡಳಿತಾತ್ಮಕ ಅನುಮೋದನೆ: ಡಾ.ಕೆ.ಸುಧಾಕರ್

Public TV
Last updated: February 19, 2022 3:03 pm
Public TV
Share
3 Min Read
DR K SUDHAKAR
SHARE

– ನೂತನ ತಂತ್ರಜ್ಞಾನಗಳ ಮೂಲಕ ಅಂಬುಲೆನ್ಸ್ ಸೇವೆಯ ಪುನಶ್ಚೇತನ

ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

ambulance 1

ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಅಂಬುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಅಂಬುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಅಂಬುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ. ರೋಗಿಯ ಜೀವ ಉಳಿಸಲು ಗೋಲ್ಡನ್ ಅವರ್ ತುಂಬಾ ಮಹತ್ವದ್ದಾಗಿರುತ್ತದೆ. ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಆತನ/ಆಕೆಯ ಜೀವ ಉಳಿಯುತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಅಂಬುಲೆನ್ಸ್ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್

FotoJet 6 9

ಸರ್ಕಾರ ಆರೋಗ್ಯ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲಾ ಆಯಾಮಗಳಿಂದ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಅಂಬುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಪ್ರಕಾರ, ಒಂದು ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೋರ್ಟ್ (ಬಿ.ಎಲ್.ಎಸ್.) ಅಂಬುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ( ಎ.ಎಲ್.ಎಸ್) ಆಂಬ್ಯುಲೆನ್ಸ್ ಇರಬೇಕು. ಒಂದು ಆಂಬ್ಯುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ. ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಅಂಬುಲೆನ್ಸ್ ಒದಗಿಸಬೇಕಾಗುತ್ತದೆ. ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಮಹತ್ವಕಾಂಕ್ಷೆ ಸರ್ಕಾರಕ್ಕಿದೆ. ಹೀಗಾಗಿ ಅಂಬ್ಯುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710 ರಿಂದ 750 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಪೈಕಿ, 40% ಎ.ಎಲ್.ಎಸ್ ಮತ್ತು 60% ಬಿ.ಎಲ್.ಎಸ್.ಆಗಿರಲಿವೆ. ಸರ್ಕಾರ ಹೊಸದಾಗಿ 380 ಅಂಬುಲೆನ್ಸ್ ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಅಂಬುಲೆನ್ಸ್‌ಗಳ ಹಳೆಯ ಅಂಬುಲೆನ್ಸ್‌ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಅಂಬುಲೆನ್ಸ್‌ಗಳಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರೆ ಕೇಂದ್ರದ ಉನ್ನತೀಕರಣ: ಅಂಬುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್‍ನ ಸೀಟುಗಳ ಸಂಖ್ಯೆಯನ್ನು 54 ರಿಂದ 75 ಕ್ಕೆ ಏರಿಸಲಾಗುತ್ತದೆ. ಈ ಕಮಾಂಡ್ ಸೆಂಟರ್, ಅಂಬುಲೆನ್ಸ್ ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ, ಅಂಬುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್ ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.

ಹಿಂದೆ ಅಂಬುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿಯನ್ನು ದರದ ಆಧಾರದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣಮಟ್ಟದ ಕಾರ್ಯನಿರ್ವಹಣೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರ್ಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್ ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರ್ಕಾರಕ್ಕೆ 500 ಅಂಬುಲೆನ್ಸ್ ಗಳ ಸೇವೆ ನೀಡಿರುವುದು ಸೇರಿದಂತೆ ಹಲವು ನಿಗದಿತ ಷರತ್ತುಗಳನ್ನು ಹೊಸ ಟೆಂಡರ್ ನಲ್ಲಿ ವಿಧಿಸಲಾಗುತ್ತಿದೆ. ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರಬೇಕು. ಅಂಬುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

TAGGED:ambulanceAmbulance servicesK Sudhakarಅಂಬುಲೆನ್ಸ್ಆರೋಗ್ಯಆರೋಗ್ಯ ಸೇವೆಡಾ ಕೆ ಸುಧಾಕರ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

America Passport
Latest

ಅಮೆರಿಕದ ಪಾಸ್‌ಪೋರ್ಟ್‌ಗಳಲ್ಲಿ ಡೊನಾಲ್ಡ್ ಟ್ರಂಪ್ ಚಿತ್ರ

Public TV
By Public TV
25 seconds ago
PM Modi 6
Latest

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪೂಜಾ ಕೈಂಕರ್ಯ – ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

Public TV
By Public TV
2 minutes ago
Yathindra Siddaramaiah 1
Districts

ಕುರ್ಚಿ ಕದನಕ್ಕೆ ದಲಿತ ಸಿಎಂ ಚೆಕ್‌ಮೇಟ್ ಕೊಟ್ಟ ಯತೀಂದ್ರ

Public TV
By Public TV
12 minutes ago
ALCOHOL
Districts

ಹೆಚ್ಚಾದ ಬಿಸಿಲಿನ ಅಬ್ಬರ – ಬಿಯರ್‌, ಲಿಕ್ಕರ್ ಮಾರಾಟದಲ್ಲಿ ಹೆಚ್ಚಳ

Public TV
By Public TV
41 minutes ago
Ganga Expressway PM Modi
Latest

ಗಂಗಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

Public TV
By Public TV
44 minutes ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?