ರಾಯಚೂರು/ಬಳ್ಳಾರಿ: ಬಳ್ಳಾರಿಯಲ್ಲಿ ಕಾಳಾ ಚಿತ್ರ ಬಿಡುಗಡೆಯಾಗಿದ್ದು, ಕರ್ನಾಟಕ ಜನಶಕ್ತಿ ಸಂಘದಿಂದ ಪ್ರತಿಭಟನೆ ನಡೆಸಿದಾರೆ. ರಾಧಿಕಾ ಚಿತ್ರಮಂದರಕ್ಕೆ ನುಗ್ಗಿ ಚಿತ್ರ ಪ್ರದರ್ಶನ ಮಾಡದಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಪ್ರತಿಭಟನೆ ಮಧ್ಯೆಯೇ ಥಿಯೇಟರ್ ಮಾಲೀಕರು ಚಿತ್ರ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬೆಳಗ್ಗೆ 10:30ರಿಂದ ಚಿತ್ರದ ಮೊದಲ ಶೋ ಆರಂಭವಾಗಿದೆ. ಇನ್ನೂ ಕಾಳಾ ಚಿತ್ರಕ್ಕೆ ಅಡ್ಡಿಪಡಿಸಿದ ಕರ್ನಾಟಕ ಜನಶಕ್ತಿ ಸಂಘದ 20 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಕಾಳಾ’ ಸಿನಿಮಾ ಪ್ರದರ್ಶನ ರದ್ದಾಗಿದೆ. ಪದ್ಮನಾಭ ಚಿತ್ರಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಕಾಳಾ ಸಿನಿಮಾ ಪ್ರದರ್ಶನವಾಗಬೇಕಿತ್ತು. ಆದರೆ ಚಿತ್ರವಿತರಕರ ಸಂಘದ ಸೂಚನೆ ಮೇರೆಗೆ ಪ್ರದರ್ಶನ ರದ್ದುಗೊಳಿಸಲಾಗಿದೆ.
ಚಿತ್ರ ಪ್ರದರ್ಶನದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಅಲ್ಲದೇ ಅಹಿತಕರ ಘಟನೆ ನಡೆಯದಂತೆ ಮುನ್ನೇಚ್ಚರಿಕೆ ವಹಿಸಲಾಗಿತ್ತು. ಸುಮಾರು 50 ಜನ ಪ್ರೇಕ್ಷಕರು ಮಾತ್ರ ಚಿತ್ರಮಂದಿರಕ್ಕೆ ಬಂದಿದ್ದರು. ಆದರೆ ಈಗ ಚಿತ್ರಮಂದಿರದ ಮಾಲೀಕರು ಟಿಕೆಟ್ ಮರಳಿ ಪಡೆದು ಹಣ ವಾಪಸ್ ಕೊಡುತ್ತಿದ್ದಾರೆ.