ಸ್ಯಾಂಡಲ್‍ವುಡ್ ನಟನ ಮೇಲೆ ಕಬಡ್ಡಿ ಆಟಗಾರರಿಂದ ಹಲ್ಲೆ

Public TV
0 Min Read
HERO ATTACK 1 1

ಬೆಂಗಳೂರು: ಕಬಡ್ಡಿ ಸೋತಿದ್ದಕ್ಕೆ ಹತಾಶೆಗೊಂಡು ಸ್ಯಾಂಡಲ್‍ವುಡ್ ನಟನಿಗೆ ಮತ್ತೊಂದು ತಂಡ ಥಳಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದ ಬಿಬಿಎಂಪಿ ಪಾರ್ಕ್ ನಲ್ಲಿ ನಡೆದಿದೆ.

18 ಪ್ಲಸ್ ಸಿನಿಮಾದ ನಾಯಕ ನಟ ಭರತ್ ಮೇಲೆ ಹಲ್ಲೆ ನಡೆಸಲಾಗಿದೆ. ಕಬಡ್ಡಿ ಟೂರ್ನಿಯಲ್ಲಿ ಭಾಗವಹಿಸಿದ್ದ ಭರತ್ ತಂಡ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಫೈನಲ್ ಪಂದ್ಯದಲ್ಲಿ ಸೋತಿದ್ದಕ್ಕೆ ಸಿಟ್ಟಾಗಿ ಕಿಟ್ಟಿ, ಪ್ರೇಮ್, ನಂದು ಎಂಬವರು ನಟ ಭರತ್ ಹಾಗೂ ನವೀನ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ.

2 ದಿನಗಳ ಹಿಂದೆ ನಟನ ಮೇಲೆ ಹಲ್ಲೆ ನಡೆದಿದೆ. ಹಲ್ಲೆಯ ನಂತರ ಭರತ್ ಮುಖ ಊದಿಕೊಂಡಿದೆ. ಅನ್ನಪೂರ್ಣೆಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HERO ATTACK 1 2

 

HERO ATTACK 4

HERO ATTACK 1

HERO ATTACK 3

Share This Article
Leave a Comment

Leave a Reply

Your email address will not be published. Required fields are marked *