ಬೆಂಗ್ಳೂರು ಆಸ್ಪತ್ರೆಯಲ್ಲಿ ಕಾಗೋಡು ತಿಮ್ಮಪ್ಪಗೆ ಚಿಕಿತ್ಸೆ

Public TV
1 Min Read
SMG KAGODU AVB copy

ಶಿವಮೊಗ್ಗ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಾಗೋಡು ತಿಮ್ಮಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ ಅವರು ಯಾರ ಸಹಾಯ ಇಲ್ಲದೆ ತಾವೇ ನಡೆದುಕೊಂಡು ಬಂದು ಕಾರಿನಲ್ಲಿ ಕುಳಿತುಕೊಂಡಿದ್ದಾರೆ.

smg kagodu

ಪೊಲೀಸ್ ಎಸ್ಕಾರ್ಟ್ ಮೂಲಕ ಕಾಗೋಡು ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

smg kagodu 1

ಗುರುವಾರ ರಾತ್ರಿ ಸಾಗರದ ಮನೆಯಲ್ಲಿ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಹೀಗಾಗಿ ಅವರನ್ನು ಐಸಿಯುನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *