ನಾವು ಜಾತಿ ಮೇಲೆ ಅಲ್ಲ, ನೀತಿ ಮೇಲೆ ರಾಜಕೀಯ ಮಾಡುತ್ತೇವೆ: ಡಿಕೆಶಿ

Public TV
1 Min Read
DK Shivakumar 2

ಕಲಬುರಗಿ: ನಾವು ಜಾತಿ ಮೇಲೆ ಲೆಕ್ಕಾಚಾರ ಇಟ್ಟು ರಾಜಕೀಯ ಮಾಡಲ್ಲ. ನಾವು ನೀತಿ ಮೇಲೆ ರಾಜಕೀಯ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಅಲ್ಪಸಂಖ್ಯಾತರು ಪ್ರಜ್ಞಾವಂತರಿದ್ದಾರೆ. ಯಾರಿಗೆ ಮತ ಹಾಕಿದ್ರೆ ಉತ್ತಮ ಅನ್ನೋದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು.

CM Ibrahim 4

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ನಲ್ಲಿ ಬೆಲೆ ಇಲ್ಲ ಅನ್ನೋ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ಈ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್

ಇದೇ ವೇಳೆ ಮಾಜಿ ಸಚಿವ ಮನಗೂಳಿ ಸಾಯುವ ಮೊದಲು ಡಿ.ಕೆ.ಭೇಟಿ ಮಾಡಿರಲಿಲ್ಲ ಅನ್ನೋ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೂ ಡಿಕೆಶಿ ಪ್ರತಿಕ್ರಿಯಿಸಿದರು. ಮನಗೂಳಿ ಇವತ್ತು ಇಲ್ಲಾ, ಅವರ ಮಗ ಇದ್ದಾರೆ. ಮನಗೂಳಿ ಅವರೇ ನಮ್ಮ ಮಗನ ಜವಾಬ್ದಾರಿ ನಿಮ್ಮದು ಅಂತ ನನಗೆ ಹೇಳಿದ್ದರು. ನಿಮ್ಮ ಮಡಿಲಿಗೆ ನನ್ನ ಮಗನನ್ನು ಹಾಕಿದ್ದೇನೆ ಅಂತ ಹೇಳಿದ್ರು. ಸಾಯುವ ಮುನ್ನ ಸ್ವತ ಮನಗೂಳಿ ಅವರೇ ಹೇಳಿದ್ದರು ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *