Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

Kalaburagi Lok Sabha 2024: ಖರ್ಗೆ ತವರಲ್ಲಿ ಮತ್ತೆ ಮೋಡಿ ಮಾಡುತ್ತಾ ಬಿಜೆಪಿ?

Public TV
Last updated: March 17, 2024 8:03 pm
Public TV
Share
5 Min Read
Kalaburagi Main
SHARE

– ಲಕ್ಕಿ ಕ್ಷೇತ್ರ ಕಲಬುರಗಿಯಿಂದಲೇ ‘ಲೋಕ’ಸಮರಕ್ಕೆ ಕಹಳೆ ಊದಿದ ಮೋದಿ
– ಉಮೇಶ್‌ ಜಾಧವ್‌ಗೆ ‘ಕೈ’ ಎದುರಾಳಿ ಯಾರು?

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ತವರು ಕಲಬುರಗಿ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೇ ಕ್ಷೇತ್ರ ಹೆಚ್ಚು ಕುತೂಹಲ ಮೂಡಿಸುತ್ತದೆ. ಸ್ವಾತಂತ್ರ್ಯ ನಂತರದಲ್ಲಿ ನಾಲ್ಕು ದಶಕಗಳ ಕಾಲ ಕಲಬುರಗಿ ಕಾಂಗ್ರೆಸ್ ತೆಕ್ಕೆಯಲ್ಲಿತ್ತು. 1996 ಜೆಡಿಎಸ್ ಅಭ್ಯರ್ಥಿ ಕಮರ್ ಉಲ್ ಇಸ್ಲಾಂ ಗೆಲುವು ದಾಖಲಿಸಿ ‘ಕೈ’ ತೆಕ್ಕೆಯಿಂದ ಕ್ಷೇತ್ರವನ್ನು ಮೊದಲ ಬಾರಿಗೆ ಬಿಡಿಸಿದರು. ಅದಾದ ಬಳಿಕ ಒಮ್ಮೆ ಬಿಜೆಪಿ ಕೂಡ ಕ್ಷೇತ್ರದಲ್ಲಿ ಜಯ ಸಾಧಿಸಿತು. ಮತ್ತೆ ಎರಡು ದಶಕಗಳ ಕಾಲ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಸೇರಿತು. ಈಗ ಬಿಜೆಪಿ ಹಿಡಿತಕ್ಕೆ ಸಿಕ್ಕಿದೆ.

1999 ರಿಂದ ಎರಡು ಅವಧಿಗೆ ಕಾಂಗ್ರೆಸ್‌ನ (Congress) ಇಕ್ಬಾಲ್ ಅಹ್ಮದ್ ಸರಡಗಿ (1999, 2004) ಸಂಸದರಾಗಿದ್ದರು. ನಂತರ 2009 ರಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು. ಮನಮೋಹನ್ ಸಿಂಗ್ (Manmohan Singh) ಸಂಪುಟದಲ್ಲಿ ಕೇಂದ್ರ ಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದರು. ಖರ್ಗೆ 2009, 2014 ಎರಡು ಬಾರಿ ಗೆದ್ದು ಪಾರ್ಲಿಮೆಂಟ್ ಪ್ರವೇಶಿಸಿದ್ದರು. ಆದರೆ 2019 ರಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡರು. ಈಗ ಮತ್ತೆ ಚುನಾವಣೆಗೆ ಅಖಾಡ ಸಜ್ಜಾಗಿದೆ. ಇದನ್ನೂ ಓದಿ: Uttara Kannada Lok Sabha 2024: ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್‌ ಹಾಕುತ್ತಾ ಬ್ರೇಕ್?‌

Kalaburagi Inside

ಕ್ಷೇತ್ರ ಪರಿಚಯ
ಗುಲ್ಬರ್ಗ ಲೋಕಸಭಾ ಕ್ಷೇತ್ರವನ್ನು 1951 ರಲ್ಲಿ ಅಂದರೆ ಸಾರ್ವತ್ರಿಕ ಚುನಾವಣೆಗೂ ಮೊದಲು ರಚಿಸಲಾಯಿತು. 1952 ರಲ್ಲಿ ಕ್ಷೇತ್ರಕ್ಕೆ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ವಾಮಿ ರಮಾನಂದ ತೀರ್ಥರು ಸ್ಪರ್ಧಿಸಿ ಜಯಗಳಿಸಿದ್ದರು.

ವಿಧಾನಸಭಾ ಕ್ಷೇತ್ರಗಳೆಷ್ಟು?
ಕಲಬುರಗಿ (Kalaburagi Lok Sabha 2024) ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಕಲಬುರಗಿ ಉತ್ತರ, ಕಲಬುರಗಿ ದಕ್ಷಿಣ, ಕಲಬುರಗಿ ಗ್ರಾಮೀಣ, ಸೇಡಂ, ಚಿತ್ತಾಪುರ, ಅಫಜಲಪುರ್, ಜೇವರ್ಗಿ ಹಾಗೂ ಗುರುಮಠಕಲ್ ಕ್ಷೇತ್ರಗಳನ್ನು ಒಳಗೊಂಡಿದೆ.

kalaburagi lok sabha

ಒಟ್ಟು ಮತದಾರರು ಎಷ್ಟು?
ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 22,79,426 ಮತದಾರರು ಇದ್ದಾರೆ. ಪುರುಷರು 10,40,615 ಹಾಗೂ ಮಹಿಳೆಯರು 10,38,532 ಮತದಾರರಿದ್ದಾರೆ. ಇದನ್ನೂ ಓದಿ: Haveri-Gadag Lok Sabha 2024: ಬಿಜೆಪಿ v/s ಕಾಂಗ್ರೆಸ್‌ – ಗೆಲುವು ಯಾರಿಗೆ?

ಕಳೆದ ಚುನಾವಣೆಯಲ್ಲಿ ಏನಾಗಿತ್ತು?
2019 ರಲ್ಲಿ ನಡೆದ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪರ್ಧಿಸಿದ್ದರು. ಅವರ ಎದುರಿಗೆ ಆಪರೇಶನ್ ಕಮಲ ಮೂಲಕ ಚಿಂಚೋಳಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಲಬುರಗಿ ಲೋಕಸಭೆಯ ಬಿಜೆಪಿ ಅಭ್ಯರ್ಥಿಯಾಗಿ ಡಾ.ಉಮೇಶ್ ಜಾಧವ್ (Umesh Jadhav) ಸ್ಪರ್ಧಿಸಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೊದಲ ಬಾರಿಗೆ ಸೋಲಿನ ರುಚಿ ತೋರಿಸಿದ್ದರು. ಖರ್ಗೆ 95,457 ಮತಗಳ ಅಂತರದಿಂದ ಸೋತಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿದ್ದರೂ ಜೆಡಿಎಸ್‌ಗೆ ತನ್ನದೆ ಆದ ಅಸ್ವಿತ್ವ ಇಲ್ಲದ ಹಿನ್ನೆಲೆ ಅಷ್ಟು ಪ್ರಮಾಣದಲ್ಲಿ ಕಾಂಗ್ರೆಸ್‌ಗೆ ಲಾಭ ಆಗಲಿಲ್ಲ.

MALLIKARJUN KHARGE 1

ಮೀಸಲು ಕ್ಷೇತ್ರ ಕಲಬುರಗಿ
ಸಂಸದೀಯ ಕ್ಷೇತ್ರಗಳ ವಿಂಗಡಣೆಯ ನಂತರ ಕಲಬುರಗಿ ಲೋಕಸಭಾ ಕ್ಷೇತ್ರ 2008ರಲ್ಲಿ ಎಸ್‌ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟಿತು. ನಂತರ 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಸಂಸದರಾಗಿ ಆಯ್ಕೆಯಾಗಿದ್ದರು. ನಂತರ 2013ರಲ್ಲಿ ಮೋದಿ ಅಬ್ಬರದ ಮಧ್ಯೆಯೂ ಸಹ ಖರ್ಗೆ ಅವರು ಸುಮಾರು 63 ಸಾವಿರ ಮತಗಳ ಅಂತರದಿಂದ ಬಿಜೆಪಿಯ ರೇವುನಾಯಕ ಬೆಳಮಗಿಗೆ ಸೋಲಿನ ರುಚಿ ತೋರಿಸಿದ್ದರು. ಆದರೆ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಳ ಜಗಳ ಹಾಗೂ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಮಾಲೀಕಯ್ಯ ಗುತ್ತೇದಾರ್, ಬಾಬುರಾವ್ ಚಿಂಚನಸೂರ್,ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ್ ಹೆಬ್ಬಾಳ, ಮಾಲಕರೆಡ್ಡಿ ಸೇರಿದಂತೆ ಹಲವು ನಾಯಕರು ಖರ್ಗೆ ವಿರುದ್ಧ ತೊಡೆ ತಟ್ಟಿ ಚಿಂಚೋಳಿಯ ಡಾ.ಉಮೇಶ್ ಜಾಧವ್‌ಗೆ ಶಾಸಕ ಸ್ಥಾನದಿಂದ ರಾಜೀನಾಮೆ ಕೊಡಿಸಿ ಖರ್ಗೆ ವಿರುದ್ಧ ಕಣಕ್ಕೆ ಇಳಿಸಿದ್ದರು. ಪರಿಣಾಮವಾಗಿ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನಾಯ ಸೋಲಾಯಿತು.

ಉಮೇಶ್‌ ಜಾಧವ್‌ ಬಿಜೆಪಿ ಟಿಕೆಟ್‌
ಸೋಲಿಲ್ಲದ ಸರದಾರನನ್ನು 2019 ರ ಚುನಾವಣೆಯಲ್ಲಿ ಮಣಿಸಿದ್ದ ಬಿಜೆಪಿ ಸಂಸದ ಉಮೇಶ್‌ ಜಾಧವ್‌ಗೆ ಬಿಜೆಪಿ ಮತ್ತೆ ಟಿಕೆಟ್‌ ಕೊಟ್ಟಿದೆ. 2019 ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದವು. ಆದರೆ ಈ ಸಲ ಉಲ್ಟಾ ಆಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿವೆ. ಬಿಜೆಪಿಯಿಂದ ಹಾಲಿ ಸಂಸದ ಡಾ.ಉಮೇಶ್ ಜಾಧವ್ ಈಗಾಗಲೇ ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇದನ್ನೂ ಓದಿ: Dharwad Lok Sabha 2024: ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುತ್ತಾ ‘ಕೈ’?

narendra modi 2

‘ಕೈ’ ಟಿಕೆಟ್‌ ಕಗ್ಗಂಟು
ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭ್ಯರ್ಥಿ ಆದರೆ ಮಾತ್ರ ಟಫ್ ಫೈಟ್ ಆಗುವುದರಲ್ಲಿ ಎರಡು ಮಾತಿಲ್ಲ. ಆದರೆ ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆ ದೇಶ ಸುತ್ತಿ ಪಕ್ಷವನ್ನು ಅಧಿಕಾರಕ್ಕೆ ತರಲು ಖರ್ಗೆ ಪಣ ತೊಟ್ಟಿದ್ದು, ಕಲಬುರಗಿ ಲೋಕಸಭೆಯಿಂದ ಸ್ಪರ್ಧಿಸಲು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ಅವರು ಸ್ಪರ್ಧೆಗೆ ನಿರಾಕರಿಸಿದರೆ ಅವರ ಅಳಿಯ ರಾಧಾಕೃಷ್ಣ, ಪುತ್ರ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರೇವುನಾಯಕ, ಬೆಳಮಗಿ ಬಂಜಾರಾ ಮುಖಂಡ ಸುಭಾಶ್ ರಾಠೋಡ್ ಪೈಕಿ ಯಾರಾದರು ಒಬ್ಬರಿಗೆ ಟಿಕೆಟ್‌ ಪಕ್ಕ ಎನ್ನಲಾಗುತ್ತಿದೆ. ಖರ್ಗೆ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ಸಿಗಬಹುದು ಎಂಬ ಮಾತು ಕೇಳಿಬರುತ್ತಿದೆ.

ಮೈತ್ರಿಯಿಂದ ಬಿಜೆಪಿಗೆ ಲಾಭ?
ಕಾಂಗ್ರೆಸ್ ಭದ್ರಕೋಟೆಯಾಗಿರುವ ಕಲಬುರಗಿ ಲೋಕಸಭೆಯಲ್ಲಿ ಜೆಡಿಎಸ್ ಹೇಳಿಕೊಳ್ಳುವಷ್ಟು ತಳಮಟ್ಟದಲ್ಲಿ ಪಕ್ಷ ಸಂಘಟನೆ ಇಲ್ಲ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೇವರ್ಗಿಯಿಂದ ದೊಡಪ್ಪಗೌಡ ಪಾಟೀಲ್ ಹಾಗೂ ಸೇಡಂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಾಲರಾಜ್ ಗುತ್ತೇದಾರ್ ತಮ್ಮದೆ ಆದ ಛಾಪು ಹೊಂದಿದ್ದಾರೆ. ಹೀಗಾಗಿ ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದೆ. ಇದನ್ನೂ ಓದಿ: Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್‌ ಕಸರತ್ತು!

umesh jadhav 2

ಯಾವ ಅವಧಿಯಲ್ಲಿ ಯಾವ ಪಕ್ಷ ಗೆದ್ದಿತ್ತು?
2009: ಮಲ್ಲಿಕಾರ್ಜುನ ಖರ್ಗೆ – ಕಾಂಗ್ರೆಸ್ (13,404 ಮತ, ಗೆಲುವಿನ ಅಂತರ)
2014: ಮಲ್ಲಿಕಾರ್ಜುನ ಖರ್ಗೆ – ಕಾಂಗ್ರೆಸ್ (74,733 ಮತ, ಗೆಲುವಿನ ಅಂತರ)
2019: ಡಾ.ಉಮೇಶ್ ಜಾಧವ್ – ಬಿಜೆಪಿ (95,452 ಗೆಲುವಿನ ಅಂತರ)

ಜಾತಿವಾರು ಲೆಕ್ಕಾಚಾರ
ಲಿಂಗಾಯತ – 5,30,000
ಎಸ್‌ಸಿ/ಎಸ್‌ಟಿ – 3,80,000
ಮುಸ್ಲಿಂ – 3,10,000
ಕೊಲಿ – 2,70,000
ಲಂಬಾಣಿ – 2,20,000
ಕುರುಬ – 1,90,000
ಬ್ರಾಹ್ಮಣ – 90,000
ಗಾಣಿಗ – 80,000
ರೆಡ್ಡಿ – 75,000
ಇತರೆ – 1,23,000

TAGGED:Dr Umesh JadhavKalaburagiKalaburagi Lok SabhaLok Sabha Election 2024mallikarjun kharge
Share This Article
Facebook Whatsapp Whatsapp Telegram

Cinema News

Bigg Boss Kannada season 12 date and teaser release soon
ಕಿಚ್ಚನ ಬರ್ತ್‍ಡೇಗೆ ಅಭಿಮಾನಿಗಳಿಗೆ `ಬಿಗ್’ ನ್ಯೂಸ್!
Cinema Latest Sandalwood Top Stories
Virat Kohli 1
ಕೊಹ್ಲಿಯಿಂದ ಫೋಟೋಗೆ ಲೈಕ್ ಗಿಟ್ಟಿಸಿಕೊಂಡ ಹಾಲ್ಗೆನ್ನೆ ಬ್ಯೂಟಿಯ ಫಸ್ಟ್ ರಿಯಾಕ್ಷನ್
Cinema Cricket Latest Sports Top Stories
sudeep 3
ರಾತ್ರಿನೇ ಸಿಗೋಣವಾ ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood

You Might Also Like

Biklu Shiva Murder Case 1
Bengaluru City

ಬಿಕ್ಲು ಶಿವ ಹತ್ಯೆ ಕೇಸ್ – ಎ1 ಆರೋಪಿ ಜಗ್ಗ ಅರೆಸ್ಟ್

Public TV
By Public TV
21 minutes ago
Sujatha Bhat 4
Dakshina Kannada

ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌!

Public TV
By Public TV
44 minutes ago
dharmasthala Case There is a division among the Sowjanya Pro activist Girish Mattannavar Mahesh Shetty Thimarody
Dakshina Kannada

ಮಟ್ಟಣ್ಣನವರ್‌ನಿಂದ ಹೋರಾಟ ಹಳ್ಳ ಹಿಡಿಯಿತು – ಸೌಜನ್ಯ ಪರ ಹೋರಾಟಗಾರರಲ್ಲೇ ಒಡಕು!

Public TV
By Public TV
50 minutes ago
KR Market Ganesha Chaturthi
Bengaluru City

ನಾಡಿನಾದ್ಯಂತ ಗೌರಿ-ಗಣೇಶ ಹಬ್ಬದ ಸಂಭ್ರಮ – ಗಗನಕ್ಕೇರಿದ ಹೂವುಗಳ ದರ

Public TV
By Public TV
1 hour ago
Parliament
Latest

ಮೋದಿ ಸರ್ಕಾರದ ಕ್ರಾಂತಿಕಾರಿ ನಡೆ – ರಾಜಕಾರಣ ಶುದ್ಧೀಕರಣಕ್ಕೆ ಹೊಸ ಮಸೂದೆ!

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-08-2025

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?