ಯಾದಗಿರಿ: ಲೋಕಸಭಾ ಚುನಾವಣೆಯ (Loksabha Election) ಕಾವು ಈಗಿನಿಂದಲೇ ರಂಗೇರುತ್ತಿದೆ. ಕಾಂಗ್ರೆಸ್ (Congress) ಪಕ್ಷದಿಂದ ಇನ್ನೂ ಅಧಿಕೃತವಾಗಿ ಲೋಕಸಭಾ ಚುನಾವಣೆ ಅಧಿಕೃತ ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್ (BabuRao Chinchanasur) ಅಚ್ಚರಿ ಹೇಳಿಕೆ ನೀಡಿದ್ದಾರೆ.
ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರೇ ನಿಲ್ಲಬಹುದು ಅಂತಾ ಚಿಂಚನಸೂರು ಹೇಳಿದ್ದಾರೆ. ನನ್ನ ಪ್ರಕಾರ ರಾಧಾಕೃಷ್ಣ ಅವರನ್ನು ನಿಲ್ಲಿಸಬಹುದು, ರಾಧಾಕೃಷ್ಣ ಅವರು ನಿಂತರೆ ಅವರಿಗೆ ಹೆಚ್ಚಿನ ಮತ ನೀಡಿ ಎಂಪಿ ಮಾಡುತ್ತೇವೆ. ಇದನ್ನೂ ಓದಿ: ಕರ್ನಾಟಕ ಮತ್ತೊಂದು ಬಿಹಾರ ಆಗ್ತಿದೆ ಅನಿಸುತ್ತಿದೆ: ಆರ್. ಅಶೋಕ್
ಕಲಬುರಗಿ ಎಂಪಿ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸ್ತಾರೆ ಗೊತ್ತಿಲ್ಲ. ನಾವು ರಾಧಾಕೃಷ್ಣ ಅವರಿಗೆ ಟಿಕೆಟ್ ನೀಡಲು ಒತ್ತಾಯ ಮಾಡುತ್ತೇವೆ. ರಾಧಾಕೃಷ್ಣ ಲೋಕಸಭಾ ಚುನಾವಣೆಗೆ ನಿಂತರೆ ಒಳ್ಳೆಯದು ಅಂತಾ ಯಾದಗಿರಿಯ ಗುರುಮಠಕಲ್ ನಲ್ಲಿ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ.
Web Stories