ಸ್ವಾತಂತ್ರ್ಯ ಹೋರಾಟದ ಗಂಧ ಗಾಳಿ ಗೊತ್ತಿಲ್ಲದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು: ರವಿಕುಮಾರ್

Public TV
1 Min Read
N. Ravikumar

– ಭಾರತ ರತ್ನವನ್ನು ಗಾಂಧಿ ಫ್ಯಾಮಿಲಿಗೆ ಬರೆದುಕೊಟ್ಟಿದ್ದಾರಾ?

ಕಲಬುರಗಿ: ಮಹಾತ್ಮ ಗಾಂಧಿ ಹತ್ಯೆಗೆ ವೀರ ಸಾವರ್ಕರ್ ಸಂಚು ರೂಪಿಸಿದ್ದರು, ಅಂಥವರಿಗ್ಯಾಕೆ ಭಾರತ ರತ್ನ ಕೊಡ್ತಿದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ಮುಖಂಡ ಎನ್ ರವಿಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಸಿದ್ದರಾಮಯ್ಯ ಅವರು ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಸ್ಟಡಿ ಮಾಡಿದ್ದಾರಾ? ಮಹಾತ್ಮ ಗಾಂಧಿ ಹತ್ಯೆ ವಿಚಾರದಲ್ಲಿ ಆರ್‍ಎಸ್‍ಎಸ್ ಹಾಗೂ ವೀರ ಸಾವರ್ಕರ್ ಪಾತ್ರವಿಲ್ಲ ಎಂದು ನ್ಯಾಯಲಯವೇ ಹೇಳಿದ್ದು, ಸ್ವಾತಂತ್ರ್ಯ ಹೋರಾಟದ ಗಂಧ ಗಾಳಿ ಗೊತ್ತಿಲ್ಲದ ಸಿದ್ದರಾಮಯ್ಯಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.

MNG SIDDARAMAIAH

ಸ್ವಾತಂತ್ರ್ಯ ಹೋರಾಟದಲ್ಲಿ ವೀರ ಎಂದು ಹೆಸರು ಬಂದಿದ್ದು ಸಾವರ್ಕರ್ ಗೆ ಮಾತ್ರ. ಹೀಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಓದಿ ತಿಳಿದುಕೊಳ್ಳಲಿ ಎಂದು ಹೇಳಿದರು. ಭಾರತ ರತ್ನ ಗಾಂಧಿ ಫ್ಯಾಮಿಲಿಗೆ ಮಾತ್ರ ಕೊಡಬೇಕು ಅಂತಾ ಬರೆದುಕೊಟ್ಟಿದ್ದಾರಾ? ಅಂಬೇಡ್ಕರ್‍ರವರಿಗೆ ಕಾಂಗ್ರೆಸ್ ಪಕ್ಷ ಯಾಕೆ ಭಾರತ ರತ್ನ ನೀಡಲಿಲ್ಲ ಎಂದು ರವಿಕುಮಾರ್ ಪ್ರಶ್ನಿಸಿದರು. ಇದನ್ನು ಓದಿ: ಅಧಿಕಾರದಲ್ಲಿ ಮುಂದುವರಿದಿದ್ರೆ ಕೊಲೆಗಡುಕರಿಗೆ ಪ್ರಶಸ್ತಿ ಕೊಡ್ತಿದ್ರು: ಸಿದ್ದುಗೆ ಸಿಟಿ ರವಿ ತಿರುಗೇಟು

ಕೆಲ ವಿಷಯಗಳಲ್ಲಿ ಸಿದ್ದರಾಮಯ್ಯ ನೀಚ ರಾಜಕಾರಣ ಮಾಡುತ್ತಿದ್ದು, ಆತ್ಮ ಇಲ್ಲದ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದರು. ಮಹಾರಾಷ್ಟ್ರ ಚುನಾವಣೆಯಲ್ಲಿ ಐವತ್ತಕ್ಕಿಂತ ಜಾಸ್ತಿ ಸಿಟ್ ಬಂದರೆ ನಾನು ರಾಜೀನಾಮೆ ಕೊಡುತ್ತೇನೆ. ಕಡಿಮೆ ಸಿಟ್ ಬಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಸವಾಲ್ ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *