Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ತಬ್ಲಿಘಿಗೆ ಹೋಗಿದ್ದ ಸ್ನೇಹಿತನಿಂದ ಸೋಂಕು, ವೃದ್ಧ ಬಲಿ – ಕಲಬುರಗಿಯ ನಿದ್ದೆಗೆಡಿಸಿದೆ ಮೂರು ಸಾವು

Public TV
Last updated: April 14, 2020 9:09 am
Public TV
Share
2 Min Read
851527 corona testing kit
SHARE

ಕಲಬುರಗಿ: ತೊಗರಿ ಕಣಜ ಕಲಬುರಗಿ ಜಿಲ್ಲೆಯಲ್ಲಿಗ ಕೊರೊನಾ ಸೋಂಕು ತನ್ನ ಅಟ್ಟಹಾಸ ಮೆರೆಯುತ್ತಿದೆ. ಇದರ ಪರಿಣಾಮ ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟು ಮೂರು ಜನ ಸೋಂಕಿನಿಂದ ಸಾವನಪ್ಪಿದ್ದಾರೆ. ಇದು ಇದೀಗ ಅಲ್ಲಿನ ಜಿಲ್ಲಾಡಳಿತ ಹಾಗೂ ಜನರ ನಿದ್ದೆಗೆಡಿಸಿದೆ.

ದೇಶದಲ್ಲಿಯೇ ಮೊದಲ ಸಾವು ಸಂಭವಿಸಿದ ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಪರಿಣಾಮ ಸೋಮವಾರ ಸಾಯಂಕಾಲ ಕಲಬುರಗಿ ನಗರದ ಮೊಮ್ಮಿನಪುರ ಬಡಾವಣೆಯ 55 ವರ್ಷದ ವ್ಯಕ್ತಿ ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಹೋಗಿರಲಿಲ್ಲ. ಆದರೆ ಸ್ನೇಹಿತ ತಬ್ಲಿಘಿಗೆ ಹೋಗಿ ಬಂದ ಹಿನ್ನೆಲೆಯಲ್ಲಿ ವೃದ್ಧನಿಗೂ ಸೋಂಕು ಹರಡಿ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಎಸ್‍ಐ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

Corona Virus 2

ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು ಮೂರು ಜನ ಸಾವನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಅತೀ ಹೆಚ್ವು ಸಾವನ್ನಪ್ಪಿದ ಕುಖ್ಯಾತಿಗೇ ಕಲಬುರಗಿ ಜಿಲ್ಲೆ ಸೇರಿಕೊಂಡಿದೆ.

ತಬ್ಲಿಘಿ ಮೂಲಕ ಮೃತನ ಮನೆಯವರಿಗೂ ಸಹ ಸೋಂಕಿನ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮೃತನ ಕುಟುಂಬದ 18 ಜನರನ್ನು ಸಹ ಇದೀಗ ಕಲಬುರಗಿಯ ಇಎಸ್‍ಐ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದೆ. ಅದರಲ್ಲಿ ಮೂರು ಜನರಿಗೆ ಜ್ವರದ ಲಕ್ಷಣಗಳು ಪ್ರಾಥಮಿಕ ಹಂತದಲ್ಲಿ ಕಂಡು ಬಂದಿದ್ದು, ಅವರ ವರದಿಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಈ ಮೂಲಕ ಕಲಬುರಗಿ ಜಿಲ್ಲೆ ಇದೀಗ ಕೆಂಪು ವಲಯಕ್ಕೆ ಹೋಗಿದೆ.

Corona Ward a

ಕಲಬುರಗಿಯಲ್ಲಿ ಮೃತಪಟ್ಟ ಮೂರು ಜನ ಸಹ ಕಲಬುರಗಿ ಉತ್ತರ ಮತ ಕ್ಷೇತ್ರದವರಾಗಿದ್ದಾರೆ. ಬಹುತೇಕ ಕೊರೊನಾ ಪಾಸಿಟಿವ್ ಪ್ರಕರಣ ಸಹ ಅದೇ ಕ್ಷೇತ್ರದಲ್ಲಿಯೇ ಹೆಚ್ಚಾಗಿರುವ ಹಿನ್ನಲೆಯಲ್ಲಿ ಸಂಪೂರ್ಣವಾಗಿ ಕ್ಷೇತ್ರವನ್ನು ಸೀಲ್ ಡೌನ್ ಮಾಡಿದರೆ ಮಾತ್ರ ಕಲಬುರಗಿಯಲ್ಲಿ ಕೊರೋನಾ ಸೋಂಕಿಗೆ ಒಂದಿಷ್ಟು ಬ್ರೇಕ್ ಹಾಕಬಹುದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.

ಜಿಲ್ಲೆಯಲ್ಲಿ ಒಟ್ಟು 13 ಮಂದಿಗೆ ಕೊರೊನಾ ಬಂದಿದ್ದು, 2 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 8 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದೆ ಮೃತಪಟ್ಟವರು:
ಮಾರ್ಚ್ 11 ರಂದು ಚಿಕಿತ್ಸೆ ಫಲಕಾರಿಯಾಗದೇ ಸೌದಿಯಿಂದ ಬಂದಿದ್ದ 76 ವರ್ಷದ ವೃದ್ಧ ಹೈದರಾಬಾದ್ ನಲ್ಲಿ ಸಾವನ್ನಪ್ಪಿದ್ದರು. ಇದಾದ ಬಳಿಕ ಏ.9 ರಂದು ಕಲಬುರಗಿ ಹಣ್ಣಿನ ವ್ಯಾಪಾರಿ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದರು. ಯಾವುದೇ ಸಂಪರ್ಕ ಇಲ್ಲದ ಈ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿತ್ತು. ಕುಟುಂಬದವರ ವಿಚಾರಣೆಯ ಸಂದರ್ಭದಲ್ಲಿ ಪುಣೆಯಲ್ಲಿದ್ದ ಸಹೋದರಿಯ ಮನೆಗೆ ತೆರಳಿದ್ದರು ಎಂದು ತಿಳಿಸಿದ್ದರು. ಆದರೆ ವ್ಯಕ್ತಿಯ ಫೋನ್ ನಂಬರ್ ಟ್ರ್ಯಾಕ್‍ಗೆ ಮಾಡಿದಾಗ ಪುಣೆಗೆ ತೆರಳದ ವಿಚಾರ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬದವರನ್ನು ಜಿಲ್ಲಾಡಳಿತ ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ತಬ್ಲಿಘಿಗೆ ಹೋಗಿದ್ದ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು.

coronavirus 1 1000x600 1

ಕಲಬುರಗಿ ಜಿಲ್ಲೆಯಿಂದ 26 ಜನ ತಬ್ಲಿಘಿಗೆ ಹೋಗಿದ್ದು, ಎಲ್ಲರ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಆದರೆ ಮೂಲಗಳ ಪ್ರಕಾರ ಜಿಲ್ಲೆಯಿಂದ 50ಕ್ಕೂ ಹೆಚ್ಚು ಜನ ತಬ್ಲಿಘಿಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಈಗಲೂ ತಬ್ಲಿಘಿಗೆ ತೆರಳಿದ ವ್ಯಕ್ತಿಗಳು ಆಸ್ಪತ್ರೆಗೆ ಬಂದು ಪರೀಕ್ಷೆಗೆ ಹಾಜರಾಗಬೇಕೆಂದು ಕೇಳಿಕೊಳ್ಳುತ್ತಿದೆ.

ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50ಕ್ಕೂ ಹೆಚ್ಚು ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ ಜಿಲ್ಲೆಗಳಲ್ಲಿ 472 ಮಂದಿ ಸೇರಿ ಒಟ್ಟು 801 ಮಂದಿ ಕ್ವಾರಂಟೈನ್‍ನಲ್ಲಿದ್ದು 581 ಮಂದಿ ಇನ್ನೂ ಪತ್ತೆಯಾಗಿಲ್ಲ. 50 ವಿದೇಶಿ ತಬ್ಲಿಘಿಯರ ವಿರುದ್ಧ ಪ್ರಕರಣ ದಾಖಲಾಗಿದೆ.

TAGGED:Covid 19delhiKalaburagikannda newskarnatakaಕರ್ನಾಟಕಕಲಬುರಗಿಕೊರೊನಾಕೊರೊನಾ ವೈರಸ್ತಬ್ಲಿಘಿತಬ್ಲಿಘಿ ಜಮಾತ್
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
3 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
3 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
3 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
4 hours ago
Narendra Modi Putin
Latest

ಭಾರತಕ್ಕೆ 5% ರಿಯಾಯಿತಿಯಲ್ಲಿ ತೈಲ ಪೂರೈಕೆ: ರಷ್ಯಾ

Public TV
By Public TV
4 hours ago
Agni 5 Missile
Latest

ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?