Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

Districts

ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

Public TV
Last updated: August 15, 2025 10:55 am
Public TV
Share
3 Min Read
Sharanabasappa Appa 3
SHARE

– ಇಂದು ದೇವಾಲಯದ ಎದುರು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ
– ಶರಣಬಸಪ್ಪ ಅಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಕಲಬುರಗಿ: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಕಲಬುರಗಿ (Kalaburagi) ಜನರ ಆರಾಧ್ಯ ದೈವ ಶ್ರೀ ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ. ತಮ್ಮ ಕೊನೆಯಾಸೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದಿದ್ದಾರೆ.

90 ವರ್ಷದ ಶರಣಬಸಪ್ಪ ಅಪ್ಪ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾಸಂಸ್ಥಾನ ಪೀಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಕಳೆದ ತಿಂಗಳು ಜು.26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

 

ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ಮೂಲಕ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ (ಆ.14) ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಅವರನ್ನು ಮಠಕ್ಕೆ ಸ್ಥಳಾಂತರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಗೃಹ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ರಾತ್ರಿ ಕಲಬುರಗಿಯ ಖಾಸಗಿ ಆಸ್ಪತ್ರೆಯಿಂದ ಶರಣಬಸಪ್ಪ ಅಪ್ಪ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಜೊತೆಗೆ ಶರಣಬಸಪ್ಪ ಅಪ್ಪ ಅವರ ಅಂತಿಮ ಆಸೆ ಕೂಡ ಮಠಕ್ಕೆ ಹೋಗಬೇಕೆನ್ನುವುದಿತ್ತು. ತಮ್ಮ ಅಂತಿಮ ಇಚ್ಛೆಯಂತೆ, ಅಪ್ಪಾಜಿಯವರನ್ನು ಶರಣಬಸವೇಶ್ವರ ದೇವಾಲಯಕ್ಕೆ ಆರೋಗ್ಯಕರ ಉಸಿರಾಟದ ಸ್ಥಿತಿಯಲ್ಲಿ ಕೊಂಡೊಯ್ಯಲಾಯಿತು. ಅಲ್ಲಿ ಅಪ್ಪಾಜಿಯವರು ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು. ಅದೇ ವೇಳೆ ಆರತಿ ಕೂಡ ನಡೆಯಿತು. ನಂತರ ವೈದ್ಯಕೀಯ ಮೇಲ್ವಿಚಾರಣೆಯ ವಾಹನದಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಮಾಡಲಾಯಿತು.

ಸಂಜೆ ಸುಮಾರು 7:30ಕ್ಕೆ ಅಪ್ಪಾಜಿಯವರನ್ನು ದಾಸೋಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ತಾತ್ಕಾಲಿಕ ಐಸಿಯು ಸಿದ್ಧಪಡಿಸಲಾಗಿತ್ತು. ಅಂತಿಮ ಉಸಿರಿನವರೆಗೂ ಸಮರ್ಪಿತ ವೈದ್ಯಕೀಯ ತಂಡದ ಕಾಳಜಿಯಲ್ಲಿ ಎಲ್ಲಾ ಚಿಕಿತ್ಸಾ ಮತ್ತು ಸಹಾಯಕ ಔಷಧೋಪಚಾರಗಳನ್ನು ಮುಂದುವರೆಸಲಾಯಿತು. ರಾತ್ರಿ 9:23ಕ್ಕೆ ಮಹಾಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದಲ್ಲಿಯೇ ಅಂತಿಮ ಉಸಿರೆಳೆದರು.

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ 200 ವರ್ಷಗಳಿಗೂ ಹೆಚ್ಚಿನ ಶ್ರೀಮಂತ ಇತಿಹಾಸ ಹೊಂದಿರುವ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಯಾಗಿದೆ. ಇದನ್ನು 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರು ಸ್ಥಾಪಿಸಿದರು. ಇದು ಈ ಪ್ರದೇಶದ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಉನ್ನತಿಗೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ. ಪೂಜ್ಯ ದೊಡ್ಡಪ್ಪ ಅಪ್ಪ ಹಾಗೂ ಮಾತೋಶ್ರೀ ಗೋದುತಾಯಿಯವ್ರಿಗೆ 1935ರಲ್ಲಿ ಜನಿಸಿದ ಶರಣಬಸಪ್ಪ ಅಪ್ಪ ಅವರು ತಮ್ಮ ತಂದೆ ದೊಡ್ಡಪ್ಪ ಅಪ್ಪಾರನ್ನೇ ಮಾದರಿಯಾಗಿಸಿಕೊಂಡಿದ್ದರು. ಆಧ್ಯಾತ್ಮ, ಧರ್ಮಚಿಂತನೆ, ತತ್ವಜ್ಞಾನದತ್ತ ಹೆಚ್ಚಿನ ಆಸಕ್ತಿ ಹೊಂದಿದ್ದರು. ಶಿಕ್ಷಣವನ್ನೇ ಉಸಿರಾಗಿಸಿಕೊಂಡಿದ್ದ ಡಾ.ಶರಣಬಸಪ್ಪ ಅಪ್ಪ, ಅನ್ನ ದಾಸೋಹ ಜೊತೆಗೆ ಶಿಕ್ಷಣ ದಾಸೋಹ ನೀಡಿದ್ದರು. ಕಲ್ಯಾಣ ನಾಡಿನಲ್ಲಿ ಶಿಕ್ಷಣ ಕ್ರಾಂತಿಗೈದ ಕೀರ್ತಿ ಅಪ್ಪಾರಿಗೆ ಸಲ್ಲುತ್ತದೆ. 1973 ರಿಂದ 2017ರವರೆಗೆ ಬರೋಬ್ಬರಿ 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಪ್ರಾರಂಭಿಸಿದ್ದರು.

ಇನ್ನೂ ಶರಣಬಸಪ್ಪ ಅಪ್ಪ ಅವರ ನಿಧನ ವಿಚಾರ ತಿಳಿಯುತ್ತಿದ್ದಂತೆ ಇಲ್ಲಿನ ಭಕ್ತರು ಮಠಕ್ಕೆ ದೌಡಾಯಿಸಿ ಕಂಬನಿ ಮಿಡಿದಿದ್ದಾರೆ. ಇನ್ನು ಸಿಎಂ ಸಿದ್ದರಾಮುಯ್ಯ ಸೇರಿ ಅನೇಕ ಗಣ್ಯರು ಅಪ್ಪ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ (ಆ.15) ಮಧ್ಯಾಹ್ನ 2 ಗಂಟೆವರೆಗೆ ದೇವಸ್ಥಾನದ ಆವರಣದಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಯಂಕಾಲ 5 ಗಂಟೆಗೆ ದೇವಸ್ಥಾನದ ಮುಂಭಾಗದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಶರಣಬಸವಪ್ಪ ಅಪ್ಪ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿ 7ಕ್ಕೂ ಹೆಚ್ಚು ಪ್ರಶಸ್ತಿ, ಡಾಕ್ಟರೇಟ್ ಗೌರವಕ್ಕೆ ಅಪ್ಪ ಪಾತ್ರರಾಗಿದ್ದಾರೆ. ಶರಣರ ನಾಡಿನ ಮಹಾದಾಸೋಹಿ, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸಪ್ಪ ಅಪ್ಪ ಅವರ ಅಗಲಿಕೆ ಈ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.ಇದನ್ನೂ ಓದಿ: ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

TAGGED:KalaburagiSharana Basappaಕಲಬುರಗಿಶರಣಬಸಪ್ಪ
Share This Article
Facebook Whatsapp Whatsapp Telegram

Cinema news

bigg boss season 12 kannada Dhanush becomes captain for the second time
ನಿಯಮ ಉಲ್ಲಂಘಿಸಿದ್ರೂ ಮನೆ ಮಂದಿಯ ಸಹಾಯದಿಂದ ಮತ್ತೆ ನಾಯಕನಾದ ಧನುಷ್‌
Cinema Latest Top Stories TV Shows
Akshay Kumar Rani Mukerji
ʻOh My God 3ʼ ಸಿನಿಮಾಗಾಗಿ ಒಂದಾದ ರಾಣಿ ಮುಖರ್ಜಿ – ಅಕ್ಷಯ್‌ ಕುಮಾರ್
Bollywood Cinema Latest
Ashwini Gowda and Gilli Nata Talk Fight
ಉಣ್ಕೊಂಡ್‌ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬಂದಿದ್ಯಾ? – ಗಿಲ್ಲಿ ವಿರುದ್ಧ ಅಶ್ವಿನಿ ಕೆಂಡಾಮಂಡಲ
Cinema Latest Sandalwood
Dear Comrade
ವಿಜಯ್ ದೇವರಕೊಂಡ-ರಶ್ಮಿಕಾ ನಟನೆಯ ಸಿನಿಮಾ ಹಿಂದಿಯಲ್ಲಿ ರಿಮೇಕ್
Bollywood Cinema Latest Top Stories

You Might Also Like

Ballari 1
Bellary

Video | ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ

Public TV
By Public TV
5 hours ago
Madikeri
Districts

Kodagu | ಕಾವೇರಿ ನದಿ ತಟದಲ್ಲಿರೋ ನಿವಾಸಿಗಳ ಬದುಕು ಇಂದಿಗೂ ಅತಂತ್ರ

Public TV
By Public TV
6 hours ago
Park
Bengaluru City

ಬೆಂಗಳೂರಿನಲ್ಲಿ 250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್‌ ಒಪ್ಪಿಗೆ

Public TV
By Public TV
6 hours ago
elon musk and x
Latest

ಅಶ್ಲೀಲ ವಿಚಾರ ಪೋಸ್ಟ್‌ಗಳಿಗೆ ವೇದಿಕೆ – ಎಕ್ಸ್‌ಗೆ ಕೇಂದ್ರದಿಂದ ನೋಟಿಸ್‌

Public TV
By Public TV
6 hours ago
Siddaramaiah 10
Bengaluru City

ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Public TV
By Public TV
7 hours ago
Siddaramaiah
Latest

Ballari Clash | ಘಟನಾ ಸ್ಥಳದಲ್ಲಿ ಇರದಿದ್ದಕ್ಕೆ ಎಸ್ಪಿ ಸಸ್ಪೆಂಡ್‌ ಮಾಡಿದ್ದೇನೆ – ಸಿಎಂ ಸಮರ್ಥನೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?