Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

Districts

ಅಂತಿಮ ಇಚ್ಛೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದ ಮಹಾದಾಸೋಹಿ

Public TV
Last updated: August 15, 2025 10:55 am
Public TV
Share
3 Min Read
Sharanabasappa Appa 3
SHARE

– ಇಂದು ದೇವಾಲಯದ ಎದುರು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ
– ಶರಣಬಸಪ್ಪ ಅಪ್ಪ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಕಲಬುರಗಿ: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಶೈಕ್ಷಣಿಕ ಕ್ರಾಂತಿಯ ಹರಿಕಾರ, ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಕಲಬುರಗಿ (Kalaburagi) ಜನರ ಆರಾಧ್ಯ ದೈವ ಶ್ರೀ ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ. ತಮ್ಮ ಕೊನೆಯಾಸೆಯಂತೆ ಶರಣಬಸವೇಶ್ವರರ ದರ್ಶನ ಪಡೆದು ಕೊನೆಯುಸಿರೆಳೆದಿದ್ದಾರೆ.

90 ವರ್ಷದ ಶರಣಬಸಪ್ಪ ಅಪ್ಪ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಲಬುರಗಿಯ ಶ್ರೀ ಶರಣಬಸವೇಶ್ವರ ಮಹಾಸಂಸ್ಥಾನ ಪೀಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಕಳೆದ ತಿಂಗಳು ಜು.26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

 

ಆಸ್ಪತ್ರೆಯಲ್ಲಿ ಕೃತಕ ಉಸಿರಾಟ ಮೂಲಕ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ (ಆ.14) ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಹೀಗಾಗಿ ಅವರನ್ನು ಮಠಕ್ಕೆ ಸ್ಥಳಾಂತರಿಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಗೃಹ ಆರೈಕೆಗೆ ಕುಟುಂಬಸ್ಥರು ನಿರ್ಧರಿಸಿದ್ದರು. ರಾತ್ರಿ ಕಲಬುರಗಿಯ ಖಾಸಗಿ ಆಸ್ಪತ್ರೆಯಿಂದ ಶರಣಬಸಪ್ಪ ಅಪ್ಪ ಅವರನ್ನು ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಜೊತೆಗೆ ಶರಣಬಸಪ್ಪ ಅಪ್ಪ ಅವರ ಅಂತಿಮ ಆಸೆ ಕೂಡ ಮಠಕ್ಕೆ ಹೋಗಬೇಕೆನ್ನುವುದಿತ್ತು. ತಮ್ಮ ಅಂತಿಮ ಇಚ್ಛೆಯಂತೆ, ಅಪ್ಪಾಜಿಯವರನ್ನು ಶರಣಬಸವೇಶ್ವರ ದೇವಾಲಯಕ್ಕೆ ಆರೋಗ್ಯಕರ ಉಸಿರಾಟದ ಸ್ಥಿತಿಯಲ್ಲಿ ಕೊಂಡೊಯ್ಯಲಾಯಿತು. ಅಲ್ಲಿ ಅಪ್ಪಾಜಿಯವರು ಗರ್ಭಗುಡಿಗೆ ಪ್ರವೇಶಿಸಿ ಶ್ರೀ ಶರಣಬಸವೇಶ್ವರರ ದರ್ಶನ ಪಡೆದರು. ಅದೇ ವೇಳೆ ಆರತಿ ಕೂಡ ನಡೆಯಿತು. ನಂತರ ವೈದ್ಯಕೀಯ ಮೇಲ್ವಿಚಾರಣೆಯ ವಾಹನದಲ್ಲಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಮಾಡಲಾಯಿತು.

ಸಂಜೆ ಸುಮಾರು 7:30ಕ್ಕೆ ಅಪ್ಪಾಜಿಯವರನ್ನು ದಾಸೋಹಕ್ಕೆ ಕರೆದೊಯ್ಯಲಾಯಿತು. ಅಲ್ಲಿ ತಾತ್ಕಾಲಿಕ ಐಸಿಯು ಸಿದ್ಧಪಡಿಸಲಾಗಿತ್ತು. ಅಂತಿಮ ಉಸಿರಿನವರೆಗೂ ಸಮರ್ಪಿತ ವೈದ್ಯಕೀಯ ತಂಡದ ಕಾಳಜಿಯಲ್ಲಿ ಎಲ್ಲಾ ಚಿಕಿತ್ಸಾ ಮತ್ತು ಸಹಾಯಕ ಔಷಧೋಪಚಾರಗಳನ್ನು ಮುಂದುವರೆಸಲಾಯಿತು. ರಾತ್ರಿ 9:23ಕ್ಕೆ ಮಹಾಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದಲ್ಲಿಯೇ ಅಂತಿಮ ಉಸಿರೆಳೆದರು.

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ 200 ವರ್ಷಗಳಿಗೂ ಹೆಚ್ಚಿನ ಶ್ರೀಮಂತ ಇತಿಹಾಸ ಹೊಂದಿರುವ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಯಾಗಿದೆ. ಇದನ್ನು 18ನೇ ಶತಮಾನದ ಸಂತ ಶ್ರೀ ಶರಣಬಸವೇಶ್ವರರು ಸ್ಥಾಪಿಸಿದರು. ಇದು ಈ ಪ್ರದೇಶದ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಉನ್ನತಿಗೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ. ಪೂಜ್ಯ ದೊಡ್ಡಪ್ಪ ಅಪ್ಪ ಹಾಗೂ ಮಾತೋಶ್ರೀ ಗೋದುತಾಯಿಯವ್ರಿಗೆ 1935ರಲ್ಲಿ ಜನಿಸಿದ ಶರಣಬಸಪ್ಪ ಅಪ್ಪ ಅವರು ತಮ್ಮ ತಂದೆ ದೊಡ್ಡಪ್ಪ ಅಪ್ಪಾರನ್ನೇ ಮಾದರಿಯಾಗಿಸಿಕೊಂಡಿದ್ದರು. ಆಧ್ಯಾತ್ಮ, ಧರ್ಮಚಿಂತನೆ, ತತ್ವಜ್ಞಾನದತ್ತ ಹೆಚ್ಚಿನ ಆಸಕ್ತಿ ಹೊಂದಿದ್ದರು. ಶಿಕ್ಷಣವನ್ನೇ ಉಸಿರಾಗಿಸಿಕೊಂಡಿದ್ದ ಡಾ.ಶರಣಬಸಪ್ಪ ಅಪ್ಪ, ಅನ್ನ ದಾಸೋಹ ಜೊತೆಗೆ ಶಿಕ್ಷಣ ದಾಸೋಹ ನೀಡಿದ್ದರು. ಕಲ್ಯಾಣ ನಾಡಿನಲ್ಲಿ ಶಿಕ್ಷಣ ಕ್ರಾಂತಿಗೈದ ಕೀರ್ತಿ ಅಪ್ಪಾರಿಗೆ ಸಲ್ಲುತ್ತದೆ. 1973 ರಿಂದ 2017ರವರೆಗೆ ಬರೋಬ್ಬರಿ 60ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ ಪ್ರಾರಂಭಿಸಿದ್ದರು.

ಇನ್ನೂ ಶರಣಬಸಪ್ಪ ಅಪ್ಪ ಅವರ ನಿಧನ ವಿಚಾರ ತಿಳಿಯುತ್ತಿದ್ದಂತೆ ಇಲ್ಲಿನ ಭಕ್ತರು ಮಠಕ್ಕೆ ದೌಡಾಯಿಸಿ ಕಂಬನಿ ಮಿಡಿದಿದ್ದಾರೆ. ಇನ್ನು ಸಿಎಂ ಸಿದ್ದರಾಮುಯ್ಯ ಸೇರಿ ಅನೇಕ ಗಣ್ಯರು ಅಪ್ಪ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ (ಆ.15) ಮಧ್ಯಾಹ್ನ 2 ಗಂಟೆವರೆಗೆ ದೇವಸ್ಥಾನದ ಆವರಣದಲ್ಲಿಯೇ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಯಂಕಾಲ 5 ಗಂಟೆಗೆ ದೇವಸ್ಥಾನದ ಮುಂಭಾಗದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಶರಣಬಸವಪ್ಪ ಅಪ್ಪ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಸೇರಿ 7ಕ್ಕೂ ಹೆಚ್ಚು ಪ್ರಶಸ್ತಿ, ಡಾಕ್ಟರೇಟ್ ಗೌರವಕ್ಕೆ ಅಪ್ಪ ಪಾತ್ರರಾಗಿದ್ದಾರೆ. ಶರಣರ ನಾಡಿನ ಮಹಾದಾಸೋಹಿ, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಕ್ರಾಂತಿಯ ಹರಿಕಾರ ಶರಣಬಸಪ್ಪ ಅಪ್ಪ ಅವರ ಅಗಲಿಕೆ ಈ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.ಇದನ್ನೂ ಓದಿ: ಸರ್ವಸಮರ್ಪಣೋತ್ಸವದೊಂದಿಗೆ ರಾಯರ 354 ನೇ ಆರಾಧನಾ ಮಹೋತ್ಸವಕ್ಕೆ ತೆರೆ

TAGGED:KalaburagiSharana Basappaಕಲಬುರಗಿಶರಣಬಸಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
5 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
5 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
6 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
6 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
6 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?