ಸೇನಾ ಐಡಿ ಕಾರ್ಡನ್ನು ದುರುಪಯೋಗ ಮಾಡಿಕೊಳ್ಳುತ್ತಿರಲಿಲ್ಲ- ಗುರು ಪತ್ನಿ

Public TV
1 Min Read
GURU WIFE 1

– ಭಾರತೀಯ ಸೇನೆಗೆ ಧನ್ಯವಾದ ಸಲ್ಲಿಕೆ

ಮಂಡ್ಯ: ನನ್ನ ಪತಿಯ ಸಾವಿಗೆ ಕಾರಣನಾದ ಮಾಸ್ಟರ್ ಮೈಂಡ್ ಉಗ್ರನ ಹತ್ಯೆ ಖುಷಿ ತಂದಿದೆ ಎಂದು ಗುಡಿಗೆರೆ ಕಾಲೋನಿಯಲ್ಲಿ ಹುತಾತ್ಮ ಯೋಧ ಗುರು ಪತ್ನಿ ಕಲಾವತಿ ಸೇನೆಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಕಲಾವತಿ ಅವರು, ಉಗ್ರನ ಹತ್ಯೆಗೆ ಖುಷಿ ಪಡುತ್ತೇನೆ. ಈ ದೇಶದಲ್ಲಿ ಉಗ್ರ ಎಂಬ ಪದ ಇತಿಹಾಸ ಸೇರಬೇಕು. ಉಗ್ರರು ಇದ್ದರು ಎಂಬುದಷ್ಟೇ ಮಾತನಾಡಬೇಕು. ಆದರೆ ಉಗ್ರರು ಇನ್ನೂ ಇದ್ದಾರೆ ಎಂಬ ಪದ ಇರಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

vlcsnap 2019 02 18 13h54m19s878

ನಾವು ಕೆಆರ್‍ಎಸ್‍ಗೆ ಹೋಗಿದ್ದೇವು. ಅಲ್ಲಿ ನಾನು ಕನ್ನಂಬಾಡಿ ಕಟ್ಟೆಯ ಮೇಲೆ ನೋಡಬೇಕು ಅಲ್ಲಿಗೆ ಕರೆದುಕೊಂಡು ಹೋಗಿ ಎಂದು ಕೇಳಿದ್ದೆ. ಅದಕ್ಕೆ ನನ್ನ ಪತಿ ಆ ರೀತಿಯೆಲ್ಲ ಹೋಗಬಾರದು ಎಂದು ಹೇಳಿದ್ದರು. ಈ ವೇಳೆ ನಮ್ಮ ಜೊತೆ ಬಂದಿದ್ದ ಸ್ನೇಹಿತರು ನಿಮ್ಮ ಐಡಿ ಕಾರ್ಡ್ ತೋರಿಸಿ ಕರೆದುಕೊಂಡು ಹೋಗಿ ಎಂದು ಕೇಳಿದ್ದರು. ಆಗ ನನ್ನ ಪತಿ ಸೇನೆಯ ಕಾರ್ಡನ್ನು ದುರುಪಯೋಗ ಮಾಡಿಕೊಳ್ಳಬಾರದು ಎಂದು ಹೇಳಿದ್ದರು. ನಾನು ದೇವಸ್ಥಾನಕ್ಕೆ ಹೋದಾಗ ತುಂಬಾ ಜನರಿದ್ದರೂ, ಅಲ್ಲೂ ಕಾರ್ಡ್ ತೋರಿಸುತ್ತಿರಲಿಲ್ಲ. ಲೈನಿನಲ್ಲೇ ನಿಂತು ಹೋಗುತ್ತಿದ್ದರು. ಅವರು ಕುಟುಂಬದವರಿಗಾಗಿ ಸೇನೆ ಐಡಿ ಕಾರ್ಡನ್ನು ದುರುಪಯೋಗ ಮಾಡಿಕೊಳ್ಳುತ್ತಿರಲಿಲ್ಲ ಎಂದು ಪತಿಯ ಕರ್ತವ್ಯ ನಿಷ್ಠೆಯ ಬಗ್ಗೆ ಹೇಳಿದ್ದಾರೆ.

GURU copy

ದೇಶದ ಜನ ಕೇಳುತ್ತಿದ್ದಾರೆ ಎಂದು ಸೈನಿಕರು ಈಗಷ್ಟೇ ಉಗ್ರರ ವಿರುದ್ಧ ದಾಳಿ ಮಾಡಿ ಸುಮ್ಮನಾಗಬಾರದು. ಉಗ್ರರ ಮೇಲಿನ ದಾಳಿ ಅವರ ನಾಶವಾಗುವವರೆಗೂ ನಿರಂತರವಾಗಿರಬೇಕು. ಉಗ್ರರ ವಿರುದ್ಧ ಹೋರಾಡುತ್ತಿರುವ ಯೋಧರು ಸುರಕ್ಷಿತವಾಗಿರಲಿ. ನನ್ನ ಪರಿಸ್ಥಿತಿ ಅವರ ಮನೆಯವರಿಗೆ ಬಾರದಿರಲಿ. ಸರ್ಕಾರ ನಮ್ಮ ಸೈನಿಕರಿಗೆ ಹೆಚ್ಚಿನ ರಕ್ಷಣೆ ನೀಡಲಿ ಎಂದು ಹುತಾತ್ಮ ಯೋಧನ ಪತ್ನಿ ಕಲಾವತಿ ಹೇಳಿದರು.

https://www.youtube.com/watch?v=5LubBl3CkXQ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *