ಕಾಳಿ ನದಿಯಲ್ಲಿ ಕೈ ತೊಳೆಯಲು ಹೊದ ಯುವಕನನ್ನು ಎಳೆದೊಯ್ದ ಮೊಸಳೆ

Public TV
1 Min Read
Kali River man

ಕಾರವಾರ: ಕಾಳಿ ನದಿಯಲ್ಲಿ ಕೈ ತೊಳೆಯಲು ಹೊದ ಯುವಕನನ್ನು ಮೊಸಳೆ ಎಳೆದೊಯ್ದ ಘಟನೆ ನಡೆದಿದೆ.

ಆರ್ಷದ್ ಖಾನ್ (22) ಮೃತನಾಗಿದ್ದಾನೆ. ದಾಂಡೇಲಿಯ ಪಟೇಲ್ ನಗರದ ನಿವಾಸಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ ಇಂದು ರಾತ್ರಿ ನಡೆದಿದೆ. ಇದನ್ನೂ ಓದಿ: ಖಡ್ಗ, ಭಯ, ದಬ್ಬಾಳಿಕೆಯಿಂದ ತನ್ವೀರ್ ಸೇಠ್ ಆಗಿದ್ದಾರೆ: ಪ್ರತಾಪ್ ಸಿಂಹ

River

ಮೊಸಳೆ ದಾಳಿಗೆ ಬಲಿಯಾದ ಯುವಕನಾಗಿದ್ದು ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋಗಿದ್ದ. ಈ ವೇಳೆ ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ಆತನನ್ನು ಎಳೆದೊಯ್ದಿದೆ. ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳದಿಂದ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸುತಿದ್ದು, ದಾಂಡೇಲಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಇದನ್ನೂ ಓದಿ: ದೇಶವನ್ನು ಒಡೆದು ಆಳುವ ಕಾಂಗ್ರೆಸ್‌ ತುಕ್ಡೆ ತುಕ್ಡೆ ಗ್ಯಾಂಗ್‌ ಲೀಡರ್‌: ನರೇಂದ್ರ ಮೋದಿ

Share This Article
Leave a Comment

Leave a Reply

Your email address will not be published. Required fields are marked *