Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ಮನೆ, ಮಸೀದಿಯಲ್ಲಿ.. ಸಮಾಜದಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ಮನೆ, ಮಸೀದಿಯಲ್ಲಿ.. ಸಮಾಜದಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Districts

ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ಮನೆ, ಮಸೀದಿಯಲ್ಲಿ.. ಸಮಾಜದಲ್ಲಲ್ಲ: ಕಲ್ಲಡ್ಕ ಪ್ರಭಾಕರ್ ಭಟ್

Public TV
Last updated: December 24, 2023 5:16 pm
Public TV
Share
3 Min Read
Kalladka Prabhakar Bhat
SHARE

ಮಂಡ್ಯ: ಅಲ್ಲಾ ಹು ಅಕ್ಬರ್ ಎನ್ನಬೇಕಾಗಿರುವುದು ನಿಮ್ಮ ಮನೆ ಮತ್ತು ಮಸೀದಿಯಲ್ಲಿಯೇ ಹೊರತು ಸಮಾಜದಲ್ಲಿ ಅಲ್ಲ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಹೇಳಿದ್ದಾರೆ.

ಶ್ರೀರಂಗಪಟ್ಟಣದಲ್ಲಿ (Srirangapatna) ಹನುಮಂತನ ಶೋಭಾಯಾತ್ರೆಯಲ್ಲಿ (Hanuman Shobha Yatra) ಮಾತನಾಡಿದ ಅವರು, ಮುಸ್ಕಾನ್ ಎಂಬ ವಿದ್ಯಾರ್ಥಿನಿ ಅಲ್ಲಾ ಹು ಅಕ್ಬರ್ ಎಂದು ಇಲ್ಲೇ ಕೂಗಿದ್ದು. ಇಂತಹ ಹೆಣ್ಣುಮಕ್ಕಳಿಗೆ ಹಣ ಕೊಟ್ಟು, ಶಹಬ್ಬಾಸ್‍ಗಿರಿ ಕೊಟ್ಟು ಅಲ್ಕೈದಾ ಭಯೋತ್ಪಾದಕ ಸಂಸ್ಥೆ ಬೆಳೆಸುತ್ತಿದೆ. ಈಕೆ ಅವರ ಸಂಪರ್ಕದಲ್ಲಿದ್ದು, ಮಂಡ್ಯದ ಜನ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಉತ್ಸಾಹಭರಿತ ವಾಸ್ತುಶಿಲ್ಪ ನಗರಿ: ಪ್ರಧಾನಿ ಮೋದಿ ಬಣ್ಣನೆ

ಮೊನ್ನೆ ನಮ್ಮ ಸಿಎಂ ಹತ್ತು ಸಾವಿರ ಕೋಟಿ ರೂ.ಗಳನ್ನು ಮುಸಲ್ಮಾನರಿಗೆ ಕೊಡುತ್ತೇವೆ ಎಂದಿದ್ದರು. ಇದು ಯಾರಪ್ಪನ ದುಡ್ಡು ಎಂದು ಕೊಡ್ತೀರಿ? ಕಂದಾಯ ಕಟ್ತಿರೋದು ಹಿಂದೂಗಳು. ಅಲ್ಲದೇ ಹಿಜಬ್‍ನ್ನು ಮತ್ತೆ ಜಾರಿ ಮಾಡ್ತಿವಿ ಎಂದು ಹೊಸ ವಿವಾದ ಹುಟ್ಟು ಹಾಕಿದ್ದಾರೆ. ಈ ಮೂಲಕ ಶಾಲಾ ಮಕ್ಕಳಲ್ಲಿ ಪ್ರತ್ಯೇಕತೆ ತರುತ್ತಿದ್ದಾರೆ. ಸಮವಸ್ತ್ರದ ಉದ್ದೇಶವನ್ನು ಕೊಂದು ಹಾಕುತ್ತಿದ್ದಾರೆ. ಹಿಜಬ್ ತರೋಕೆ ಸಿದ್ದರಾಮಯ್ಯಗೆ  (Siddaramaiah) ತಾಕತ್ ಇದೆಯಾ ಎಂದು ಸವಾಲು ಹಾಕಿದ್ದಾರೆ.

Hanuman Shobha Yatra

ಭಾರತ ಅತ್ಯಂತ ಸಂಪತ್ತಿರುವ ದೇಶ, ಅದಕ್ಕಾಗಿ ನೂರಾರು ರಾಜರು ನಮ್ಮ ಮೇಲೆ ಆಕ್ರಮಣ ಮಾಡಿದ್ದರು. ಕಾಲಕ್ರಮೇಣ ನಮ್ಮಲ್ಲೇ ಒಂದಷ್ಟು ಗೊಂದಲ ಉಂಟಾಯ್ತು. ಅದರ ಪರಿಣಾಮ ಕೆಲ ವರ್ಷಗಳು ನಾವು ಗುಲಾಮಗಿರಿ ಅನುಭವಿಸಬೇಕಾಗಿ ಬಂತು. ನಮಗೆ ಪಾಠದಲ್ಲಿ ಹೇಳ್ತಾರೆ ಮುಸಲ್ಮಾನ ರಾಜರು ಸಂಪತ್ತಿಗೋಸ್ಕರ ದಾಳಿ ಮಾಡಿದ್ರು ಎಂದು. ಆದರೆ ಅವರು ಮತಾಂತರ ಮಾಡಿದ್ದನ್ನ ಯಾರೂ ಹೇಳುತ್ತಿಲ್ಲ ಎಂದಿದ್ದಾರೆ.

ಯಾವಾಗ ಮುಸಲ್ಮಾನ ಹಾಗೂ ಕ್ರೈಸ್ತ ರಾಜರು ಇಲ್ಲಿಗೆ ಕಾಲಿಟ್ಟರೋ ಆಗ ಮತಾಂತರ ಮಾಡಲು ಮುಂದಾದರು. ಆಗಲೇ ಮುಸ್ಲಿಂ ಲೀಗ್ ಪ್ರಾರಂಭ ಆಯ್ತು. ಅದಕ್ಕೆ ಕಾಂಗ್ರೆಸ್ ಕೂಡಾ ಬೆಂಬಲ ಕೊಡುತ್ತಿದೆ. ಕಾಂಗ್ರೆಸ್ ನಾಯಕರು ಹಿಂದೂಗಳ ಕೈಬಿಟ್ಟಿದ್ದಕ್ಕೆ ದೇಶ ವಿಭಜನೆ ಆಯ್ತು, ಪಾಕಿಸ್ತಾನ ನಿರ್ಮಾಣ ಆಯ್ತು. ಅಖಂಡ ಭಾರತ ತ್ರಿಖಂಡ ಆಯ್ತು. ನೆಹರೂ ಈ ಭೂಮಿಯನ್ನ ಮಾತೃಭೂಮಿ ಎಂದು ತಿಳಿಯದೇ, ದೇಶ ವಿಭಜನೆ ಮಾಡಿ ತಲೆನೋವು ಕಮ್ಮಿ ಮಾಡಿಕೊಳ್ತೀವಿ ಎಂದಿದ್ದರು. ಈಗ ಪಾಕಿಸ್ತಾನವೇ ತಲೆನೋವಾಗಿ ಪರಿಣಮಿಸಿದೆ. ನೆಹರೂ ಅವರೇ ನಮಗೆ ಅನ್ಯಾಯ ಮಾಡಿದ್ದು ಎಂದು ಕಾಂಗ್ರೆಸ್ ವಿರುದ್ಧ ಅವರು ಕಿಡಿಕಾರಿದ್ದಾರೆ.

HanumanShobhaYatra

ಹಿಜಬ್ ಧರಿಸಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು, ಟೋಪಿ ಧರಿಸುತ್ತೇವೆ. ನಾವು ಶಾಲೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗ್ತೀವಿ. ನೀವು ತಾಕತ್ತಿದ್ದರೆ ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿ ಎಂದು ಸವಾಲು ಹಾಕಿದ್ದಾರೆ.

ದಿ ಕೇರಳ ಸ್ಟೋರಿ ಹಾಗೂ ಕಾಶ್ಮೀರ ಫೈಲ್ಸ್ ಸಿನಿಮಾ ನೋಡಿ, ಮುಸಲ್ಮಾನರು ಯಾವ ರೀತಿ ಮೋಸ ಮಾಡ್ತಾರೆ ಎಂದು ತಿಳಿಯುತ್ತದೆ. ಮುಸಲ್ಮಾನ ಹುಡುಗರು ಮಾತ್ರವಲ್ಲ, ಹುಡುಗಿಯರೂ ಮತಾಂತರ ಮಾಡ್ತಿದ್ದಾರೆ. ಅವರೂ ಲವ್ ಜಿಹಾದ್ ಮಾಡುವ ಕೆಲಸ ಮಾಡ್ತಿದ್ದಾರೆ. ಯಾವ ರೀತಿ ಮತಾಂತರ ಮಾಡ್ತಾರೆ, ಹಿಂದೂ ಹುಡುಗಿಯರನ್ನು ಹೇಗೆ ಟಾರ್ಗೆಟ್ ಮಾಡ್ತಾರೆ ಎಂಬುವುದನ್ನು ಕೆಲವು ಸಿನಿಮಾಗಳಲ್ಲಿ ತೋರಿಸಿದ್ದಾರೆ ಎಂದಿದ್ದಾರೆ.

ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ ಎಂದು ಅವರು ಹೇಳಿದ್ದಾರೆ.

ಅಂಬೇಡ್ಕರ್ ಮಾತು ಕೇಳಿದ್ದರೆ ನಾವು ಜಗತ್ತಿನ ಅತ್ಯಂತ ಶ್ರೇಷ್ಠವಾಗಿ ಬದುಕುತ್ತಿದ್ದೆವು. ಮುಸಲ್ಮಾನರನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ರೆ ನಾವು ನೆಮ್ಮದಿಯಾಗಿ ಇರಬಹುದಿತ್ತು. ಆದರೆ ಕಾಂಗ್ರೆಸ್‍ನವರು ಅಂಬೇಡ್ಕರ್ ಅವರ ಮಾತು ಕೇಳ್ತಿರಲಿಲ್ಲ. ಹಿಂದೂಗಳಿಗೆ ಭಾರತ ಬಿಟ್ರೆ ಬೇರೆ ಜಾಗ ಇಲ್ಲ, ಹಿಂದೂಗಳಿಗೆ ಇರುವ ಏಕೈಕ ದೇಶ ಭಾರತ ಎಂದು ಅವರು ಹೇಳಿದ್ದಾರೆ.

ಜೀವನದ ಯಾವುದೇ ಯುಗದಲ್ಲಿ ರಾಮ ಶ್ರೇಷ್ಠ, ಅಂತಹ ರಾಮನ ಅತ್ಯಾಪ್ತ ಭಂಟ, ಅಂತಹ ಹನುಮಂತನ ಹೃದಯದಲ್ಲಿ ರಾಮ ನೆಲೆಸಿದ್ದಾನೆ. ಇಂದು ಹನುಮಂತನ ಶೋಭಾಯಾತ್ರೆ ನಡೆಯುತ್ತಿದೆ. ಅಯೋಧ್ಯೆಯಲ್ಲಿ ಕೆಲವೇ ದಿನಗಳಲ್ಲಿ ರಾಮಮಂದಿರ ಉದ್ಘಾಟನೆ ಆಗಲಿದೆ. ಜಗತ್ತಿನ ಎಲ್ಲಾ ಜನರಿಗೆ ಜೀವ, ಬದುಕು ಜ್ಞಾನ ಕೊಟ್ಟ ದೇಶ ಭಾರತವಾಗಿದೆ. ಜಗತ್ತಿನ ಕೇಂದ್ರ ಭಾರತ, ಭಾರತದ ಕೇಂದ್ರ ಅಯೋಧ್ಯೆ, ಅಯೋಧ್ಯೆಯ ಕೇಂದ್ರ ರಾಮ. ಜ.22 ಹಿಂದೂ ಸಮಾಜಕ್ಕೆ ಮತ್ತೊಂದು ದೀಪಾವಳಿ ಇದ್ದಂತೆ. ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಅದ್ದೂರಿಯಾಗಿ ಜರುಗಲಿದೆ. ಹಿಂದೂ ಸಮಾಜ ಎದ್ದರೆ ನಮಗೆ ಅನ್ಯಾಯ ಮಾಡಲು ಯಾವ ಸಮಾಜಕ್ಕೆ ತಾಕತ್ತಿದೆ? ನಮಗೆ ಎದ್ದೇಳಲು ಸಮಯ ಬೇಕಷ್ಟೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಉಚಿತ ಭರವಸೆ ಈಡೇರಿಸಲು RBI ಬಳಿ 2,000 ಕೋಟಿ ರೂ. ಸಾಲ ಕೇಳಿದ ಮಧ್ಯಪ್ರದೇಶ

TAGGED:Hanuman Shobha YatraHijabKalladka Prabhakar BhatmandyaSrirangapatnaಕಲ್ಲಡ್ಕ ಪ್ರಭಾಕರ್ ಭಟ್ಮಂಡ್ಯರಾಜಕೀಯಶ್ರೀರಂಗ ಪಟ್ಟಣ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
7 seconds ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
17 minutes ago
Pakistan Cricket Team
Cricket

T20 World Cup | ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ನಿರ್ಧಾರ ಪೆಂಡಿಂಗ್‌ ಇಟ್ಟ ಪಾಕ್‌!

Public TV
By Public TV
24 minutes ago
Serial accident on Belagavi
Belgaum

ಬೆಳಗಾವಿ ಹೈವೇಯಲ್ಲಿ ಸರಣಿ ಅಪಘಾತ – ಅದೃಷ್ಟವಶಾತ್‌ ಪ್ರಾಣಹಾನಿ ಇಲ್ಲ

Public TV
By Public TV
43 minutes ago
Kanneri Shri
Districts

ನಿರ್ಬಂಧ ಹೇರಿದ್ದ ಊರಲ್ಲಿ ಕನ್ನೇರಿ ಶ್ರೀಗಳಿಗೆ ಅದ್ದೂರಿ ಸ್ವಾಗತ

Public TV
By Public TV
48 minutes ago
man quits a Rs 40000 job in Bengaluru and works as a areca nut tree climber in his hometown Kalasa 1
Districts

ಬೆಂಗಳೂರಿನಲ್ಲಿ 40 ಸಾವಿರದ ಉದ್ಯೋಗಕ್ಕೆ ಗುಡ್‌ಬೈ – ಊರಿನಲ್ಲಿ ಅಡಿಕೆ ಕೊನೆಕಾರನ ಕೆಲಸಕ್ಕೆ ಜೈ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?