Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಪ್ರವಾಹದಂತೆ ಹರಿಯುತ್ತಿದ್ದ ಕಲ್ಲತ್ತಿಗಿರಿ ಜಲಪಾತ

Public TV
Last updated: September 18, 2019 8:40 am
Public TV
Share
2 Min Read
ckm kallatigiri falls collage
SHARE

ಚಿಕ್ಕಮಗಳೂರು: ತಿಂಗಳ ಹಿಂದೆ ಬರಬೇಡಿ ಎಂದು ಹೇಳುತ್ತಿದ್ದ ಈ ಸುಂದರ ತಾಣ ಈಗ ಪ್ರವಾಸಿಗರನ್ನು ಬನ್ನಿ ಎಂದು ಕೈಬೀಸಿ ಕರೆಯುತ್ತಿದೆ. ವರ್ಷಪೂರ್ತಿ ಧಾರಾಕಾರವಾಗಿ ಹರಿಯುವ ಆ ನೀರು ಎಲ್ಲಿಂದ ಬರುತ್ತೆ ಎನ್ನುವುದೇ ನಿಗೂಢ. ಆನೆಯ ಆಕಾರದಲ್ಲಿ ಧುಮ್ಮಿಕ್ಕುವ ಆ ಜಲಧಾರೆಗೆ ಧಾರ್ಮಿಕ ನಂಬಿಕೆಯೂ ಉಂಟು. ತಿಂಗಳ ಹಿಂದೆ ಪ್ರವಾಹದಂತೆ ಹರಿಯುತ್ತಿದ್ದ ಆ ಸುಂದರ ತಾಣವೀಗ ನಯನ ಮನೋಹರ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗರಿ ಜಲಪಾತವೀಗ ಪ್ರಕೃತಿಯ ಮಾನಸ ಪುತ್ರಿಯಂತಾಗಿದೆ. ಗುಡ್ಡದ ತುದಿಯಿಂದ ಹರಿಯುವ ಈ ಹಾಲ್ನೋರೆಯ ಜಲಕ್ಕೆ ಕಲ್ಲತ್ತಿಗರಿ ಜಲಪಾತ ಎಂಬ ಹೆಸರಿದೆ. ಈ ಜಲಪಾತ ಇತಿಹಾಸದಲ್ಲಿ ಬತ್ತಿದ ಉದಾಹರಣೆ ಇಲ್ಲ. ಬೆಟ್ಟ-ಗುಡ್ಡಗಳ ಔಷಧಿ ಶಕ್ತಿಯುಳ್ಳ ಮರ-ಗಿಡಗಳ ನಡುವೆ ಹರಿಯುವ ಈ ನೀರಲ್ಲಿ ಸ್ನಾನ ಮಾಡಿದರೆ ಕೆಲವು ಕಾಯಿಲೆಗಳು ದೂರವಾಗುತ್ತೆ ಎಂಬುದು ಜನರ ನಂಬಿಕೆ. ಆನೆ ಆಕಾರದಲ್ಲಿರುವ ಈ ಜಲಪಾತಕ್ಕೆ ಧಾರ್ಮಿಕ ಇತಿಹಾಸವೂ ಇದೆ. ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಶಾಲಾ ಮಕ್ಕಳೇ ಹೆಚ್ಚು. ಈ ತಾಣ ಇಡೀ ರಾಜ್ಯಕ್ಕೆ ಗೊತ್ತು. ಈಗ ಮಕ್ಕಳಷ್ಟೇ ಅಲ್ಲದೆ ಕುಟುಂಬ ಸಮೇತರಾಗಿ ಬಂದು ಎಲ್ಲರೂ ಎಂಜಾಯ್ ಮಾಡುತ್ತಿದ್ದಾರೆ.

ckm kallatigiri falls 4

ಶತಮಾನಗಳಿಂದ ಹೀಗೆ ನಿರಂತರವಾಗಿ ಹರಿಯುತ್ತಿರುವ ಈ ಜಲಪಾತದ ಬಳಿ ದತ್ತಾತ್ರೇಯ, ಈಶ್ವರ-ಪಾರ್ವತಿ, ಗಣಪತಿ, ಬೇಲೂರು ಚನ್ನಕೇಶವನ ಜೊತೆ ಶಿಲಾಬಾಲಿಕೆಯರ ಉದ್ಭವ ಮೂರ್ತಿಗಳಿವೆ. ಪುರಾಣದ ಪ್ರಕಾರ ನರ ಮನುಷ್ಯರು ಇಲ್ಲಿಗೆ ಬಂದು ಈ ಪವಿತ್ರ ಗಂಗೆಯಲ್ಲಿ ಸ್ನಾನ ಮಾಡಿ, ಇಲ್ಲಿನ ವೀರಭದ್ರೇಶ್ವರನಿಗೆ ಪೂಜೆ ಸಲ್ಲಿಸಿದರೆ ಅವರ ಪಾಪ-ಕರ್ಮಗಳೆಲ್ಲಾ ಪರಿಹಾರವಾಗುತ್ತೆ ಎನ್ನುವುದು ಸ್ಥಳೀಯರ ನಂಬಿಕೆ.

ckm kallatigiri falls 1

ಪವಿತ್ರ ಗಂಗೆಯಾಗಿರುವ ಈ ಕ್ಷೇತ್ರದಲ್ಲಿ ಕಲ್ಲಿನ ಗುಹೆಯೊಳಗೆ ವೀರಭದ್ರಸ್ವಾಮಿ ಮೂರ್ತಿ ಕೂಡ ಉದ್ಭವವಾಗಿದೆ. ಇಲ್ಲಿ ಸ್ನಾನ ಮಾಡಿ, ಪೂಜೆ ಸಲ್ಲಿಸಿದರೆ ಜನರ ಮೈಮೇಲೆ ಬರುವ ದುಷ್ಟಶಕ್ತಿಗಳನ್ನು ವೀರಭದ್ರಸ್ವಾಮಿ ನಾಶ ಮಾಡುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಆದ್ದರಿಂದ, ಪ್ರತಿದಿನ ಹತ್ತಾರು ಜನ ಈ ಕ್ಷೇತ್ರಕ್ಕೆ ದೇವರುಗಳನ್ನು ಕರೆ ತಂದು ಪೂಜಾ-ಕೈಂಕರ್ಯ ಕೈಗೊಳ್ಳುತ್ತಾರೆ. ಪೂಜೆಯ ಬಳಿಕ ಇಲ್ಲಿನ ಬೆಟ್ಟ-ಗುಡ್ಡಗಳ ಪ್ರಕೃತಿ ಸೌಂದರ್ಯ ಕಂಡು ಪುಳಕಿತರಾಗುತ್ತಾರೆ.

ckm kallatigiri falls 2

ಕಲ್ಲತ್ತಿಗಿರಿ ಕ್ಷೇತ್ರದ ಜಲಪಾತ ಹತ್ತಾರು ಆಶ್ಚರ್ಯಗಳಿಗೆ ಸಾಕ್ಷಿಯಾಗಿದೆ. ಮೂಲವೇ ಗೊತ್ತಿಲ್ಲದ ಗಂಗೆಯ ಉಗಮ ಸ್ಥಾನ ಒಂದೆಡೆಯಾದರೆ, ದುಷ್ಟಶಕ್ತಿಗಳನ್ನು ದೂರ ಮಾಡುವ ದೈವಶಕ್ತಿಗೆ ಈ ಕ್ಷೇತ್ರ ಹೆಸರುವಾಸಿ. ಪ್ರವಾಸಕ್ಕೂ ಸೈ, ಧಾರ್ಮಿಕ ನಂಬಿಕೆಗೂ ಸೈ ಎನ್ನುವ ಈ ಕ್ಷೇತ್ರ ಕಾಫಿನಾಡಿನ ವೈಭವಕ್ಕೆ ಹಿಡಿದ ಕೈಗನ್ನಡಿ ಎಂದರು ತಪ್ಪಿಲ್ಲ. ಆದರೆ ಇಲ್ಲಿನ ಮೂಲಭೂತ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕು ಎಂದು ಪ್ರವಾಸಿಗರು ಒತ್ತಾಯಿಸುತ್ತಿದ್ದಾರೆ.

TAGGED:ChikkamagaluruKallathigiri FallsPoojePublic TVrainTouristಕಲ್ಲತ್ತಿಗಿರಿ ಜಲಪಾತಚಿಕ್ಕಮಗಳೂರುಪಬ್ಲಿಕ್ ಟಿವಿಪೂಜೆಪ್ರವಾಸಿಗರುಮಳೆ
Share This Article
Facebook Whatsapp Whatsapp Telegram

You Might Also Like

CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
2 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
38 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
44 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?