ನಿನ್ನೆಯಷ್ಟೇ ಬೆಂಗಳೂರಿಗೆ ಕಮಲ್ ಹಾಸನ್ ಆಗಮಿಸಿ, ತಮ್ಮ ‘ವಿಕ್ರಮ್’ ಸಿನಿಮಾದ ಭರ್ಜರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಅವರು ಕನ್ನಡ ಮತ್ತು ಕರ್ನಾಟಕದ ಜೊತೆಗಿನ ಸಂಬಂಧವನ್ನು ಹಂಚಿಕೊಂಡರು. ಡಾ.ರಾಜ್ ಕುಮಾರ್ ತಮಗೆಷ್ಟು ಸ್ಫೂರ್ತಿ ಎಂದೆಲ್ಲ ಮಾತನಾಡಿದರು. ಅಲ್ಲದೇ, ಅವರು ರಾಮಾ ಭಾಮಾ ಶಾಮಾ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಕುರಿತು ಮಾತನಾಡಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು
ಇಂದು ಕಮಲ್ ಹಾಸನ್ ನಟಿಸಿ, ನಿರ್ಮಾಣ ಮಾಡಿರುವ ‘ವಿಕ್ರಮ್ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ನೂರಾರು ಸ್ಕ್ರೀನ್ ಗಳಲ್ಲಿ ತೆರೆಕಂಡಿದೆ. ಆದರೆ, ಈ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡಿ ರಿಲೀಸ್ ಮಾಡಿಲ್ಲ ಎನ್ನುವ ಕಾರಣಕ್ಕಾಗಿ ಡಬ್ಬಿಂಗ್ ಪರ ಹೋರಾಟಗಾರರು ‘ಬೈಕಾಟ್ ವಿಕ್ರಮ್’ ಅಭಿಯಾನವನ್ನು ಶುರು ಮಾಡಿದ್ದಾರೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ
ನಿನ್ನೆಯಿಂದಲೇ ಕೆಲವು ಡಬ್ಬಿಂಗ್ ಪರ ಹೋರಾಟಗಾರರು ವಿಕ್ರಮ್ ಸಿನಿಮಾದ ಪೋಸ್ಟರ್ ಮೇಲೆ ಬೈಕಾಟ್ ವಿಕ್ರಮ್ ಎಂದು ಬರೆಯಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚುತ್ತಿದ್ದಾರೆ. ನೀವು ಕನ್ನಡದಲ್ಲಿ ಡಬ್ ಮಾಡಿ ಸಿನಿಮಾ ರಿಲೀಸ್ ಮಾಡದೇ ಇದ್ದರೆ, ನಾವು ಈ ಚಿತ್ರವನ್ನೇ ನೋಡುವುದಿಲ್ಲ ಎಂದು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ
ಈ ಕುರಿತು ವಿತರಕರಾಗಲಿ ಅಥವಾ ಕಮಲ್ ಹಾಸನ್ ಆಗಲಿ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಆದರೆ, ವಿಕ್ರಮ್ ಸಿನಿಮಾ ಕರ್ನಾಟಕದಲ್ಲಿ ತಮಿಳು ಭಾಷೆಯಲ್ಲೇ ರಿಲೀಸ್ ಆಗಿದ್ದು, ಒಂದೊಳ್ಳೆ ಪ್ರತಿಕ್ರಿಯೆ ಸಿಕ್ಕಿದೆ. ಕಮಲ್ ಅಭಿಮಾನಿಗಳು ಥಿಯೇಟರ್ ಮುಂದೆ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.