ಬೆಂಗಳೂರು: ಕಮಲ್ ಹಾಸನ್ (Kamal Haasan) ಆಗ ಒಳ್ಳೆಯ ನಟ. ಈಗ ಚಾಲ್ತಿಯಲ್ಲಿ ಇಲ್ಲದ ನಾಣ್ಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಮಲ್ ಹಾಸನ್ ಅವರ ಕನ್ನಡ (Kannada) ವಿರೋಧಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಈ ವೇಳೆ, ಕಮಲ್ ಹಾಸನ್ಗೆ ಈಗ ಮೌಲ್ಯ ಇಲ್ಲ. ಸಿನಿಮಾಗಳು ಇಲ್ಲ, ರಾಜಕೀಯದಲ್ಲೂ ಸಕ್ಸಸ್ ಇಲ್ಲ. ಪ್ರಚಾರಕ್ಕಾಗಿ ಕಮಲ್ ಹಾಸನ್ ಅವಮಾನ ಮಾಡುವ ಕೆಲಸ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
ಕರ್ನಾಟಕ, ತಮಿಳುನಾಡು ನಡುವೆ ಭಾಷೆ, ನೀರಿನ ವಿಷಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡ್ತಾರೆ. ನಾನು ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸುತ್ತೇನೆ. ಭಾಷಾ ತಜ್ಞರು, ಕನ್ನಡ ಮತ್ತು ತಮಿಳು ಭಾಷೆ ಅವಳಿ ಮಕ್ಕಳು ಎಂದು ಕರೆದಿದ್ದಾರೆ. ಅದೇ ನಮ್ಮ ನಿಲುವು ಎಂದಿದ್ದಾರೆ.
ಏನಿದು ವಿವಾದ?
ಮೇ 27ರಂದು `ಥಗ್ ಲೈಫ್’ (Thug Life) ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ವೇಳೆ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಹುಟ್ಟುಹಾಕಿದ್ದರು. ಇದನ್ನೂ ಓದಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್