ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಖ್ಯಾತ ನಟ ಕಮಲ್ ಹಾಸನ್ ಒಟ್ಟಿಗೆ ಸಿನಿಮಾ ರಂಗಕ್ಕೆ ಬಂದವರು. ಅದರಲ್ಲೂ ಅನೇಕ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅದರಲ್ಲೂ ರಜನಿಯ ಮೊದಲ ಸಿನಿಮಾ ಅಪೂರ್ವ ರಾಗಂಗಳ್ ಚಿತ್ರದಲ್ಲಿ ಕಮಲ್ ಹಾಸನ್ ಕೂಡ ಪಾತ್ರ ನಿರ್ವಹಿಸಿದ್ದಾರೆ. ಇಷ್ಟಿದ್ದೂ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುವುದಿಲ್ಲ ಎನ್ನುವ ಸುದ್ದಿ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನೂ ಓದಿ : ಹಾಲಿವುಡ್ ಖ್ಯಾತ ನಟ ರೇ ಲಿಯೊಟ್ಟಾ ಮಲಗಿದ್ದಾಗಲೇ ನಿಧನ
ರಜನಿ ಮತ್ತು ಕಮಲ್ ಹಾಸನ್ ಸಿನಿಮಾಗಳು ಒಟ್ಟಿಗೆ ರಿಲೀಸ್ ಆದಾಗ, ಇಬ್ಬರ ಅಭಿಮಾನಿಗಳು ಹೊಡೆದಾಡಿಕೊಂಡಿದ್ದುಇದೆ. ಫ್ಯಾನ್ಸ್ ವಾರ್ ಗೆ ಹೆಸರಾದ ನಟರು ಇವರು. ಇಂತಿಪ್ಪ ರಜನಿ ಮತ್ತು ಕಮಲ್ ಹಾಸನ್ ಯಾವತ್ತು ವೈರತ್ವ ಸಾಧಿಸಿಲ್ಲ ಎನ್ನುವುದನ್ನು ಕಮಲ್ ಹಾಸನ್ ಹೇಳಿದ್ದಾರೆ. ಅವರ ವಿಕ್ರಮ್ ಸಿನಿಮಾದ ರಿಲೀಸ್ ಇವೆಂಟ್ ನಲ್ಲಿ ಮಾತನಾಡಿದ ಕಮಲ್ ಹಾಸನ್, ‘ನಾನು ಯಾವತ್ತೂ ರಜನಿಯನ್ನು ವೈರಿ ಎಂದು ಪರಿಗಣಿಸಿಲ್ಲ. ವೃತ್ತಿಯಲ್ಲಿ ಸ್ಪರ್ಧೆ ಇರುವುದು ಸಹಜ’ ಎಂದಿದ್ದಾರೆ. ಇದನ್ನೂ ಓದಿ : ಸಿನಿಮಾವಾಗಲಿದೆ ‘ಟೈಂಪಾಸ್’ ಬೆಡಗಿ ಪ್ರೋತಿಮಾ ಬೇಡಿ ಬಯೋಪಿಕ್
ಇಂಥದ್ದೇ ಮಾತನ್ನು ರಜನಿಕಾಂತ್ ಕೂಡ ಈ ಹಿಂದೆ ಹೇಳಿದ್ದರು. ‘ಕಮಲ್ ಹಾಸನ್ ಬಗ್ಗೆ ನಾನ್ಯಾಕೆ ವೈರತ್ವ ಬೆಳೆಸಿಕೊಳ್ಳಲಿ? ಅವರು ನನ್ನ ಉತ್ತಮ ಸ್ನೇಹಿತ. ನಾವಿಬ್ಬರೂ ಒಳ್ಳೆಯ ಬಾಂಧವ್ಯ ಹೊಂದಿದ್ದೇವೆ. ವೈರಿ ಅಂತ ಹೇಳ್ತಿರೋದು ಯಾರು? ನಾವು ಯಾವತ್ತಿಗೂ ಸ್ನೇಹವನ್ನು ಬಿಟ್ಟ ಕೊಡುವುದಿಲ್ಲ’ ಎಂದು ಹೇಳಿದ್ದರು.
ರಜನಿಕಾಂತ್ ಮತ್ತು ಕಮಲ್ ಹಾಸನ್ ಏನೇ ಹೇಳಿದರೂ, ಅಭಿಮಾನಿಗಳು ಮಾತ್ರ ತಮ್ಮ ನಟರೇ ಮೇಲು ಎಂದು ಯಾವಾಗಲೂ ಫ್ಯಾನ್ಸ್ ವಾರ್ ನಡೆಸುತ್ತಲೇ ಇರುತ್ತಾರೆ. ಅಲ್ಲದೇ, ರಾಜಕೀಯ ಭಿನ್ನಾಭಿಪ್ರಾಯಗಳು ಇರುವುದರಿಂದ ಸ್ನೇಹಿತರಾಗಲು ಸಾಧ್ಯವೇ ಇಲ್ಲ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.