ಈ ವಾರ ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಜೂ.3 ರಂದು ತೆರೆ ಕಾಣುತ್ತಿರುವ ಈ ಸಿನಿಮಾವನ್ನು ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈ ನಡುವೆ ನಿನ್ನೆಯಷ್ಟೇ ಚಿತ್ರಕ್ಕೆ ಸೆನ್ಸಾರ್ ಆಗಿದೆ. ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಈ ಸರ್ಟಿಫಿಕೇಟ್ ಸಿಗಲು ಕಮಲ್ ಹಾಸನ್ ಅಂಡ್ ಟೀಮ್ ಮಾಡಿದ ಸಾಹಸ ಅಷ್ಟಿಷ್ಟಲ್ಲ. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ
ವಿಕ್ರಮ್ ಸಿನಿಮಾದಲ್ಲಿ ಹಿಂಸೆಯಲ್ಲಿ ವೈಭವೀಕರಿಸಲಾಗಿದೆ ಎನ್ನುವ ಮಾಹಿತಿ ಇದೆ. ಹಲವು ದೃಶ್ಯಗಳಲ್ಲಿ ತುಂಬಾ ಹಿಂಸೆಯನ್ನು ತೋರಿಸಿದ್ದಾರಂತೆ. ಹಾಗಾಗಿ 13 ಕಡೆ ಸಿನಿಮಾಗೆ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿತ್ತು ಎನ್ನಲಾಗುತ್ತಿದೆ. ಸೆನ್ಸಾರ್ ಮಂಡಳಿಯು ಸೂಚಿಸಿದ ಎಲ್ಲ ಸಲಹೆಗಳನ್ನು ಚಿತ್ರತಂಡ ಸ್ವೀಕರಿಸಿದ ನಂತರವೇ ಯು/ಎ ಪ್ರಮಾಣ ಪತ್ರವನ್ನು ನೀಡಲಾಗಿದೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ
ಈಗಾಗಲೇ ವಿಕ್ರಮ್ ಸಿನಿಮಾದ ಬಗ್ಗೆ ಕಮಲ್ ಹಾಸನ್ ಒಳ್ಳೆಯ ಮಾತುಗಳನ್ನು ಆಡಿದ್ದಾರೆ. ವಿಜಯ್ ಸೇತುಪತಿ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಸಿನಿಮಾದಲ್ಲಿದೆ. ಅಲ್ಲದೇ, ರಜನಿಕಾಂತ್ ಸೇರಿದಂತೆ ಹಲವು ಕಲಾವಿದರನ್ನು ಸಿನಿಮಾ ವೀಕ್ಷಣೆಗೆ ಕಮಲ್ ಆಹ್ವಾನಿಸಿದ್ದಾರೆ. ಹಾಗಾಗಿ ಸಹಜವಾಗಿಯೇ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ
ಫಹಾದ್ ಫಾಸಿಲ್, ಕಮಲ್ ಹಾಸನ್ ಮತ್ತು ವಿಜಯ್ ಸೇತುಪತಿ ಮೂವರು ಕಾಂಬಿನೇಷನ್ ನ ಮೊದಲ ಚಿತ್ರ ಇದಾಗಿದ್ದು, ಮೂವರು ಅಭಿಮಾನಿಗಳು ಈ ಚಿತ್ರಕ್ಕಾಗಿ ಕಾಯುತ್ತಿದ್ದಾರೆ. ಸ್ವತಃ ಕಮಲ್ ಹಾಸನ್ ಅವರೇ ಈ ಚಿತ್ರದ ನಿರ್ಮಾಪಕರು ಕೂಡ ಆಗಿದ್ದಾರೆ.