ಮಂಡ್ಯ: ಆಧುನಿಕ ಭಗೀರಥನ ಸಾಮಾಜಿಕ ಸೇವೆಗೆ ಅಧಿಕಾರಿಗಳು ಅಡ್ಡಿಯಾದ ಹಿನ್ನೆಲೆ ಬೇಸರಗೊಂಡು ಕಲ್ಮನೆ ಕಾಮೇಗೌಡರು ಅನ್ನನೀರು ಬಿಟ್ಟಿದ್ದಾರೆ.
- Advertisement 2
ಅಂತರ್ಜಲ ಅಭಿವೃದ್ಧಿಗೆ ಕೆರೆ ಕಟ್ಟೆ ನಿರ್ಮಿಸಿ ಲಕ್ಷಾಂತರ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾಯಕ ಯೋಗಿ ಆಗಿದ್ದರು. ಕಳೆದ 40-50 ವರ್ಷಗಳಿಂದ ಸ್ವಂತ ಖರ್ಚಿನಲ್ಲಿ ಮರಗಿಡಗಳ ಪೋಷಣೆ ಮಾಡುತ್ತಿದ್ದರು. ಪರಿಸರ ಪ್ರೇಮಿ, ಆಧುನಿಕ ಭಗೀರಥ ಕಾಮೇಗೌಡರ ಕಾರ್ಯವನ್ನು ಪ್ರಧಾನಿ ಮಂತ್ರಿ ಮೋದಿಯವರು ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಶಂಸಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ
- Advertisement 3
- Advertisement 4
ಮಾಜಿ ಸಿಎಂ ಯಡಿಯೂರಪ್ಪ ಕಾಮೇಗೌಡರಿಗೆ ಮನೆ, ಮಕ್ಕಳಿಗೆ ಉದ್ಯೋಗ ಹಾಗೂ ತಮ್ಮ ಸೇವೆಗೆ ಆರ್ಥಿಕ ನೆರವು ಭರವಸೆ ನೀಡಿದ್ದರು. ಆದರೆ ಈ ವರೆಗೂ ಅವರಿಗೆ ನೀಡಿರುವ ಯಾವುದೇ ಭರವಸೆಗಳು ಈಡೇರಲಿಲ್ಲ. ಕೆಲ ಮಂದಿ ಗೌಡರ ವಿರುದ್ಧ ಮರಳು ಗಣಿಗಾರಿಕೆ ಆರೋಪ ಹೊರಿಸಿದ್ದು, ಇಳಿ ವಯಸ್ಸಿನಲ್ಲೂ ಅವರಿಗೆ ತನಿಖೆ ಎದುರಿಸಬೇಕಾದ ಸ್ಥಿತಿ ಬಂದಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು
ಸಾಮಾಜಿಕ ಸೇವೆ ಮುಂದುವರೆಸಲು ಅಧಿಕಾರಿಗಳಿಂದ ಅಡ್ಡಿಯಾದ ಹಿನ್ನೆಲೆ ಕಾಮೇಗೌಡರು ಅಧಿಕಾರಿಗಳ ವರ್ತನೆಗೆ ಬೇಸತ್ತು ಆಹಾರ ತ್ಯಜಿಸಿದ್ದರು. ಮಳವಳ್ಳಿ ತಾಲೂಕು ಆಡಳಿತ ಮಂಡಳಿಯು ಅನಾರೋಗ್ಯದಿಂದ ಬಳಲುತ್ತಿದ್ದ ಗೌಡರನ್ನ ಆಸ್ಪತ್ರೆಗೆ ದಾಖಲಿಸಿದೆ.