ಬಳ್ಳಾರಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ಎಚ್ ಡಿ ಕುಮಾರಸ್ವಾಮಿ ಅವರು ಒಂದಲ್ಲ ಒಂದು ರೀತಿಯಲ್ಲಿ ಮಾಧ್ಯಮದ ವಿರುದ್ಧ ಗರಂ ಆಗುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಕಂಪ್ಲಿ ಶಾಸಕ ಗಣೇಶ್ ಮೀಡಿಯಾ ವಿರುದ್ಧ ಗರಂ ಆಗಿದ್ದಾರೆ.
ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಜೈಲು ಸೇರಿದ್ದ ಗಣೇಶ್, ಬಿಡುಗಡೆಯಾದ ಬಳಿಕ ಮೊದಲ ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಬಸವ ಜಯಂತಿ ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಪಾಲ್ಗೊಂಡಿದ್ದ ನವದಂಪತಿಗಳಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಮಾಧ್ಯಮಗಳ ಮೇಲೆ ಮತ್ತೆ ಸಿಎಂ ಮುನಿಸು – ನಿಮ್ಮ ಜೊತೆ ಮಾತನಾಡ್ಬಾರದೆಂದು ತೀರ್ಮಾನಿಸಿದ್ದೇನೆ ಎಂದ ಎಚ್ಡಿಕೆ
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರ ಸುಭದ್ರವಾಗಿದೆ. ಆದರೆ ಮಾಧ್ಯಮಗಳಿಂದಲೇ ಸರ್ಕಾರ ಅಸ್ಥಿರವಾಗುತ್ತಿದೆ. ಮಾಧ್ಯಮದವರಿಂದ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗುತ್ತಿದೆ. ಸರ್ಕಾರವನ್ನು ಕೆಡವಲು ಯಾರಿಂದಲೂ ಸಾಧ್ಯವಿಲ್ಲ. ನಾನು ಕಾಂಗ್ರೆಸ್ನಲ್ಲೇ ಇರುವೆ. ಇಲ್ಲಿಯೇ ಇದ್ದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಹೇಳಿದರು.