ಅಮರಾವತಿ: ಹೊಸ ವರ್ಷದ ದಿನದಂದು ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಿರುಪತಿಯ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸುತ್ತಿರುವ ಪೋಟೋವನ್ನು ಕಂಗನಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಎಲ್ಲರಿಗೂ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ನ್ಯೂ ಇಯರ್ ಶುಭಾಶಯ ಹೇಳಿದ ಬಾಲಿವುಡ್ ಮಂದಿ
- Advertisement 2
- Advertisement 3
ಜಗತ್ತಿನಲ್ಲಿ ಒಂದೇ ಒಂದು ರಾಹು ಕೇತು ದೇವಾಲಯ ಇದೆ. ತಿರುಪತಿಯ ಬಾಲಾಜಿ ದೇವಸ್ಥಾನಕ್ಕೆ ತುಂಬಾ ಹತ್ತಿರದಲ್ಲಿದೆ. ಅಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು ಎಂದು ಕಂಗನಾ ತಿಳಿಸಿದ್ದಾರೆ.
- Advertisement 4
View this post on Instagram
ನನ್ನ ಪ್ರೀತಿಯ ಶತ್ರುಗಳ ಕರುಣೆ ಹೊಂದಲು ನಾನು ದೇವಸ್ಥಾನಕ್ಕೆ ಹೋಗಿದ್ದೆ. ಈ ವರ್ಷ ನನ್ನ ಮೇಲೆ ಹೆಚ್ಚಿನ ನನ್ನ ಮೇಲೆ ಕಡಿಮೆ ಪೊಲೀಸ್ ದೂರುಗಳು ಮತ್ತು ಎಫ್ಐಆರ್ಗಳು ದಾಖಲಾಗಲಿ. ಹೆಚ್ಚಿನ ಪ್ರೇಮ ಪತ್ರಗಳು ಬರಲಿ. ಜೈ ರಾಹು ಕೇತು ಎಂದು ಕಂಗನಾ ಪೋಸ್ಟ್ ಹಾಕಿದ್ದಾರೆ. ಇದನ್ನೂ ಓದಿ: New Year 2022 – ಅಭಿಮಾನಿಗಳಿಗೆ ಸಂದೇಶ ನೀಡಿದ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು
ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಹೆಚ್ಚು ಟೀಕೆಗೆ ಗುರಿಯಾಗಿರುವ ಕಂಗನಾ ಅವರು ಹೊಸ ವರ್ಷದಲ್ಲಿ ಶತ್ರುಗಳಿಗಾಗಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.