ಉತ್ತರ ಪ್ರದೇಶ ಸರ್ಕಾರದ ಯೋಜನೆಯ ರಾಯಭಾರಿಯಾದ ಕಂಗನಾ

Public TV
1 Min Read
kangana ranaut

ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ಒಂದು ಜಿಲ್ಲೆ-ಒಂದು ಉತ್ಪನ್ನ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಹೆಸರನ್ನು ಘೋಷಿಸಿದೆ. ಇದನ್ನೂ ಓದಿ: ಗಾಂಧಿ ಜಯಂತಿ ವಿಶೇಷ – ವಿಜಯಪುರದ ಗ್ರಾಮ ಸಭೆ ವೀಕ್ಷಣೆ ಮಾಡಲಿದ್ದಾರೆ ಮೋದಿ

ಶುಕ್ರವಾರ ನಟಿ ಕಂಗನಾ ರಣಾವತ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮನೆಗೆ ಭೇಟಿ ನೀಡಿದ್ದರು. ರಾಜ್ಯದ 75 ಜಿಲ್ಲೆಗಳಾದ್ಯಂತ ಉತ್ಪನ್ನ – ನಿರ್ದಿಷ್ಟ ಸಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಉತ್ತರ ಪ್ರದೇಶ ಸರ್ಕಾರ ಒಂದು ಜಿಲ್ಲೆ-ಒಂದು ಉತ್ಪನ್ನ(ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.

KANGANA 1

ಈ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಲ್ ಟ್ವಿಟ್ಟರ್‍ನಲ್ಲಿ, ಖ್ಯಾತ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿಯಾದರು. ಅವರಿಗೆ ಒಡಿಒಪಿ ಉತ್ಪನ್ನವನ್ನು ನೀಡಿದರು. ಕಂಗನಾ ಅವರು ಒಡಿಒಪಿಗೆ ನಮ್ಮ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇಲ್ಲದ ಮೇಲೆ ಬದುಕಿ ಪ್ರಯೋಜನವಿಲ್ಲ – ಡೆತ್‍ನೋಟ್ ಬರೆದು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಇದೇ ವೇಳೆ ಕಂಗನಾ ರಣಾವತ್ ಯೋಗಿ ಆದಿತ್ಯನಾಥ್ ಅವರು ಮಾಡುತ್ತಿರುವ ಕೆಲಸಗಳ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಯೋಗಿ ಆದಿತ್ಯನಾಥ್ ಅವರು ಕೂಡ ಅಯೋಧ್ಯೆ ಮಂದಿರಕ್ಕೆ ಭೇಟಿ ನೀಡುವಂತೆ ಕಂಗನಾಗೆ ವಿನಂತಿಸಿದರು.

Share This Article
Leave a Comment

Leave a Reply

Your email address will not be published. Required fields are marked *