ಕಿರುತೆರೆ ಮತ್ತು ಸ್ಯಾಂಡಲ್ವುಡ್ನಲ್ಲಿ ಛಾಪೂ ಮೂಡಿಸಿರುವ ನಟ ಚಂದನ್ ಕುಮಾರ್ ಮತ್ತೆ ಸುದ್ದಿಯಲ್ಲಿದ್ದಾರೆ. ತೆಲುಗು ಸೀರಿಯಲ್ ವಿವಾದ ಬೆನ್ನಲ್ಲೇ ಇದೀಗ ಮತ್ತೆ ಚಂದನ್ ಸುದ್ದಿಯಲ್ಲಿದ್ದಾರೆ. ಚಂದನ್ ಕುಮಾರ್ ಬಿರಿಯಾನಿ ಹೋಟೆಲ್ನಲ್ಲಿ ಕಳ್ಳತನವಾಗಿದೆ.
ಚಂದನ್ ಕುಮಾರ್ ನಟನೆಯ ಜೊತೆ ಉದ್ಯಮ ಕ್ಷೇತ್ರದಲ್ಲೂ ತಮ್ಮನ್ನ ತೊಡಗಿಸಿಕೊಂಡಿದ್ದಾರೆ. ಇನ್ನು ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನ ಸಹಕಾರ ನಗರದಲ್ಲಿ ಬಿರಿಯಾನಿ ಹೋಟೆಲ್ ತೆರೆದಿದ್ದರು. ನಿನ್ನೆ ರಾತ್ರಿ ಈ ಹೋಟೆಲ್ನಲ್ಲಿ ಕಳ್ಳತನ ಆಗಿದೆ. ನಿನ್ನೆ ತಡರಾತ್ರಿ ನಟ ಚಂದನ್ ದೊನ್ನೆ ಬಿರಿಯಾನಿ ಹೋಟೆಲ್ ಸೇರಿ ನಾಲ್ಕೈದು ಅಂಗಡಿಗಳಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ. ಖದೀಮರ ದುಷ್ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಿಂದ ಉದಯ್ ಸೂರ್ಯ ಔಟ್
ಇನ್ನು ಬಿರಿಯಾನಿ ಹೋಟೆಲ್ನಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಚಂದನ್ ಕುಮಾರ್ ದೂರು ದಾಖಲಿಸಿದ್ದಾರೆ.