ರಾಜ್ಯ ಸರ್ಕಾರದ ವಿರುದ್ಧ ನಟ ಜಗ್ಗೇಶ್ ವಾಗ್ದಾಳಿ

Public TV
0 Min Read
CM JAGGESH

ಬೆಂಗಳೂರು: ಬಾವುಟದ ವಿಷಯ ಎಳೆದು ತಂದು ಕನ್ನಡಿಗರಿಗೆ ಕೇಂದ್ರದ ಮೇಲೆ ಕೋಪತರಿಸಲು ರಾಜ್ಯಸರ್ಕಾರ ಮುಂದಾಗುತ್ತಿದೆ ಎಂದು ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ರೂಪಿಸಲು ರಾಜ್ಯ ಸರ್ಕಾರ ಮುಂದಾಗುತ್ತಿರುವುದನ್ನು ವಿರೋಧಿಸಿ ನಟ ಜಗ್ಗೇಶ್ ಟ್ವಿಟ್ಟರ್ ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಟ್ವೀಟ್ ಮಾಡಿರೋ ನವರಸ ನಾಯಕ, ಇದು ಚುನಾವಣೆ ಹತ್ತಿರವಿರಬೇಕಾದರೆ ನಡೆಯುವ ವ್ಯೂಹ. ತಮ್ಮ ಸರ್ಕಾರದ ಹುಳುಕು ಮುಚ್ಚಲು ಹಾಗೂ ಜನರ ಗಮನ ಬೇರೆಡೆ ಸೆಳೆಯಲು ಬಾವುಟದ ಭಾವನೆಯನ್ನು ಬಳಸುತ್ತಿದ್ದಾರೆ. ಇದು ಚಾಣಕ್ಯ ತಂತ್ರದ ರಾಜಕೀಯ ದಾಳ ಅಂತ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *