Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ

Bengaluru City

ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ

Public TV
Last updated: November 30, 2025 9:36 am
Public TV
Share
3 Min Read
Umesh 2
SHARE

– 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ತನ್ನದೇ ಛಾಪು

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ (MS Umesh) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿರುವ ಉಮೇಶ್‌ ಬಹುತೇಕ ಹಾಸ್ಯ ಪಾತ್ರಗಳಲ್ಲೇ ಮಿಂಚಿದ್ದರು. ತನ್ನ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದರು.

Umesh

ಎಂ. ಎಸ್ ಉಮೇಶ್ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮ್ಮ ಪರಿಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ.

ರಂಗಭೂಮಿ ನಂಟು ಬೆಳೆದಿದ್ದು ಹೇಗೆ?
ಉಮೇಶ್‌ ಅವರ ತಂದೆ ಎ.ಎಲ್ ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸಿದವರು ಉಮೇಶ್. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅವರಿಗೆ ಅಭಿನಯಿಸಲು ಪ್ರಚೋದನೆ ನೀಡಲಾಗುತ್ತಿತ್ತಂತೆ.

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ. ಮಾಸ್ಟರ್‌ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಉಮೇಶ್ ಖ್ಯಾತಿ ಗಳಿಸಿದ್ದರು. ಅವರು ಹಾಡಬಲ್ಲವರು ಕೂಡಾ.

ರಾಜ್‌ ಕಡೇ ಸಿನಿಮಾ ವರೆಗೂ ನಿಲ್ಲದ ಹಾಸ್ಯ
ಮುಂದೆ 1974ರಲ್ಲಿ ಉಮೇಶ್, ಪುಟ್ಟಣ್ಣ ಕಣಗಾಲರ ‘ಕಥಾ ಸಂಗಮ’ ಚಲನ ಚಿತ್ರದ ತಿಮ್ಮರಾಯಿ ಪಾತ್ರಕ್ಕಾಗಿ ಉಮೇಶ್ ಆಯ್ಕೆಯಾದರು. ಇದಾದ ನಂತರ ಅವರ ಚಿತ್ರರಂಗದ ನಂಟು ಬೆಳೆಯುತ್ತಾ ಬಂದಿತು. `ಗೋಲ್ ಮಾಲ್ ರಾಧಾಕೃಷ್ಣ’, `ಗುರು ಶಿಷ್ಯರು’ ಮುಂತಾದ ಚಿತ್ರಗಳಿಂದ ಇತ್ತೀಚಿನ `ವೆಂಕಟ ಇನ್ ಸಂಕಟ’ವರೆಗಿನ ಅವರ ಪಾತ್ರಗಳನ್ನು ಮೆಚ್ಚದಿರುವವರೇ ಇಲ್ಲ. ಇದುವರೆಗೂ 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ಉಮೇಶರದ್ದು.

ಉಮೇಶರು ಹಲವಾರು ಪತ್ರಿಕೆಗಳ ಅಂಕಣ ಬರಹಗಾರರೂ ಹೌದು. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ಉಮೇಶರು ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು `ನಮ್ಮೂರಲ್ಲೊಂದು ನಾಟಕ’, `ಸಮಸ್ಯೆಯ ಸರಮಾಲೆ’, `ರಿಜಿಸ್ಟರ್‌ ಫೋಸ್ಟ್’, `ಅಂಚು-ಸಂಚು’, `ಗೌಡತಿ ಗೌರಮ್ಮ’, `ಸಂಸಾರದಲ್ಲಿ SOMEಕ್ರಾಂತಿ’, `ಜೋಕ್ಸ್‌ಫಾಲ್ಸ್’`, `ಗಲಿಬಿಲಿ ಸಂಸಾರ’ ಮುಂತಾದ ನಾಟಕಗಳಿಂದ ಜನಮನ ಗೆದ್ದಿದ್ದರು.

ಉಮೇಶ್ ಎಂದರೆ ಹಿರಿಯ ನಟರಿಗೂ ಗೌರವ. ರಾಜಕುಮಾರ್ ಅವರ ಕಟ್ಟ ಕಡೆಯ ಚಿತ್ರಗಳವರೆಗೆ ಬಹುತೇಕ ಚಿತ್ರಗಳಲ್ಲಿ ಉಮೇಶ್ ನಟಿಸಿದ್ದರು. ಒಮ್ಮೆ ಉಮೇಶರ ಹುಟ್ಟು ಹಬ್ಬ ಎಂದು ಅರಿತ ವಿಷ್ಣುವರ್ಧನ್‌ ಅವರು ಸಿನಿಮಾ ಸೆಟ್ಟಿನಲ್ಲೇ ಅವರ ಹುಟ್ಟುಹಬ್ಬ ಆಚರಿಸುವ ಏರ್ಪಾಡು ಮಾಡಿ ಈ ನಟನಿಗೆ ಗೌರವ ಸಲ್ಲುವಂತೆ ನಡೆದುಕೊಂಡರು. ʻಅಂದಿನ ಕಪ್ಪು ಬಿಳುಪು ಜಗತ್ತಿನಿಂದ ಇಲ್ಲಿಯವರೆಗಿನ ಕನ್ನಡ ಚಿತ್ರರಂಗದ ಯಾತ್ರೆ ಅದ್ಬುತ. ಈ ಯಶಸ್ಸಿನ ಹಾದಿಯನ್ನು ನೋಡಿರುವ ನಾನೇ ಪುಣ್ಯವಂತʼ ಎಂಬುದು ಉಮೇಶರ ಮಾತು.

TAGGED:Actor Umeshbengalurukannada cinemaMS Umeshprivate hospitalsandalwoodಎಂ.ಎಸ್‌ ಉಮೇಶ್‌ಕನ್ನಡ ಚಿತ್ರರಂಗಬೆಂಗಳೂರು
Share This Article
Facebook Whatsapp Whatsapp Telegram

Cinema news

vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post

You Might Also Like

siddaramaiah
Bengaluru City

ಕರ್ನಾಟಕಕ್ಕೆ ಮಲತಾಯಿ ಧೋರಣೆ ಯಾಕೆ?- ಅಗತ್ಯ ಸಿಲಿಂಡರ್ ಪೂರೈಕೆ ಮಾಡಲಿ: ಕೇಂದ್ರದ ಕಡೆ ಬೊಟ್ಟ ಮಾಡಿದ ಸಿಎಂ

Public TV
By Public TV
6 minutes ago
security forces
Latest

ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸಿದ ಪಾಕ್ ಉಗ್ರನ ಹತ್ಯೆ

Public TV
By Public TV
1 hour ago
lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
1 hour ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
2 hours ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
4 hours ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?