Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಂ.1 ನಟನೆಂಬ ಅಹಂ ಬಿಟ್ಟುಬಿಡಿ – ಸ್ಟಾರ್ ನಟರಿಗೆ ನಟಿ ರಮ್ಯಾ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಂ.1 ನಟನೆಂಬ ಅಹಂ ಬಿಟ್ಟುಬಿಡಿ – ಸ್ಟಾರ್ ನಟರಿಗೆ ನಟಿ ರಮ್ಯಾ ಮನವಿ

Cinema

ನಂ.1 ನಟನೆಂಬ ಅಹಂ ಬಿಟ್ಟುಬಿಡಿ – ಸ್ಟಾರ್ ನಟರಿಗೆ ನಟಿ ರಮ್ಯಾ ಮನವಿ

Public TV
Last updated: December 20, 2022 10:42 pm
Public TV
Share
4 Min Read
RAMYA
SHARE
– ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನೋದು ನೋಡಿ ಬೇಜಾರಾಗ್ತಿದೆ
– ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನೋ ಅರಿವು ಎಲ್ಲರಿಗೂ ಇರಬೇಕು
– ಫ್ಯಾನ್ಸ್ ವಾರ್ ಬಗ್ಗೆ ದನಿ ಎತ್ತಿದ ರಮ್ಯಾ

ಕನ್ನಡ ಚಿತ್ರರಂಗದಲ್ಲಿ (Kannada Film Industry) ಫ್ಯಾನ್ಸ್‌ಗಳ ನಡುವೆ ವಾರ್ (Fans War) ನಡೆಯುತ್ತಿದೆ. ನೆಚ್ಚಿನ ಕಲಾವಿದರನ್ನ ಹೊಗಳುವ ಭರದಲ್ಲಿ ಮತ್ತೊಬ್ಬ ನಟನಿಗೆ ಬೈಯ್ಯುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇವರ ವಿರುದ್ಧ ಸ್ಯಾಂಡಲ್‌ವುಡ್ (Sandalwood) ಕ್ವೀನ್ ನಟಿ ರಮ್ಯಾ (Actor Ramya) ದನಿ ಎತ್ತಿದ್ದಾರೆ.

Contents
  • – ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನೋದು ನೋಡಿ ಬೇಜಾರಾಗ್ತಿದೆ – ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನೋ ಅರಿವು ಎಲ್ಲರಿಗೂ ಇರಬೇಕು – ಫ್ಯಾನ್ಸ್ ವಾರ್ ಬಗ್ಗೆ ದನಿ ಎತ್ತಿದ ರಮ್ಯಾ
  • Live Tv

RAMYA 1

ಸೋಷಿಯಲ್ ಮೀಡಿಯಾದಲ್ಲಿ (Social Media) ತಮ್ಮ ತಮ್ಮ ಅಭಿಮಾನಿಗಳು ಏನೆಲ್ಲ ಮಾಡುತ್ತಿದ್ದಾರೆ ಎಂಬುದನ್ನು ನಟರು ಗಮನಿಸಬೇಕು. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಸ್ಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕು. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು ಎಂದು ರಮ್ಯಾ ಕರೆ ನೀಡಿದ್ದಾರೆ. ಜೊತೆಗೆ ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಟಿ ಉರ್ಫಿ ಜಾವೇದ್ ಗೆ ‘ಲಾರಿಂಜೈಟಿಸ್’ ಖಾಯಿಲೆ: ಆಸ್ಪತ್ರೆಗೆ ದಾಖಲು

Blocking and turning off comments is frustrating for trolls who so badly want to abuse but have no space to do so. The pressure they must be under 🫤Let off some steam- Meditate. Go for a walk. Do some yoga. Internalise. Eat ice cream. 🤗👻

— Ramya/Divya Spandana (@divyaspandana) December 20, 2022

ರಮ್ಯಾ ಅವರ ಟ್ವೀಟ್‌ನಲ್ಲಿ ಏನಿದೆ?
`ಚಿತ್ರರಂಗದಲ್ಲಿ ಇವತ್ತು ತಲುಪಿರುವ ಹಂತಕ್ಕೆ ಬರಲು ಪ್ರತಿಯೊಬ್ಬರೂ ತಮ್ಮದೇ ಆದ ಸವಾಲುಗಳನ್ನು ಎದುರಿಸಿಕೊಂಡು ಬಂದಿರುತ್ತಾರೆ. ಕೇವಲ ನಾಯಕ ನಟರು ಮತ್ತು ನಾಯಕ ನಟಿಯರಷ್ಟೇ ಅಲ್ಲ, ಸಂಗೀತ ನಿರ್ದೇಶಕರು, ಗಾಯಕರು, ನೃತ್ಯ ನಿರ್ದೇಶಕರು, ಬರಹಗಾರರು, ಫೈಟ್ ಮಾಸ್ಟರ್‌ಗಳು ಮುಂತಾದ ಪ್ರತಿಯೊಬ್ಬ ತಂತ್ರಜ್ಞರೂ ಅನೇಕ ಕಷ್ಟಕರವಾದ ಪರಿಸ್ಥಿತಿಗಳನ್ನು ಎದುರಿಸಿ ಉನ್ನತ ಸ್ಥಾನಕ್ಕೆ ಬಂದಿರುತ್ತಾರೆ. ಕೆಲವರ ಕಷ್ಟಗಳು ಸಾರ್ವಜನಿಕವಾಗಿ ನಮಗೆ ತಿಳಿದಿರುತ್ತೆ, ಮತ್ತಷ್ಟು ತಿಳಿದಿರುವುದಿಲ್ಲ. ಕೆಲವರು ಉನ್ನತ ಸ್ಥಾನಕ್ಕೆ ಏರಿದ್ದರೆ ಅನೇಕರಿಗೆ ದೊಡ್ಡ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲದೆ ಇರಬಹುದು. ಚಿತ್ರರಂಗದಲ್ಲಿ ತಮ್ಮ ಆಸೆಯ ಗೋಪುರ ಕಟ್ಟಿಕೊಂಡು ಬರುವವರ ಹಿನ್ನೆಲೆಗಳು ಬೇರೆಯೇ ಇರಬಹುದು. ಹಲವರಿಗೆ ಎರಡು ಹೊತ್ತು ಊಟ ಗಿಟ್ಟಿಸಿಕೊಳ್ಳುವುದೂ ಕಷ್ಟವಾಗಿದ್ದರೆ, ಹಲವರಿಗೆ ಮೈ ತುಂಬಾ ಸಾಲ ಮಾಡಿಕೊಂಡು ಸಾಧನೆ ಮಾಡಬೇಕು ಅಂತಾ ಬಂದಿರಬಹುದು. ಹಲವರು ಇದ್ದುದೆಲ್ಲವನ್ನು ಬಿಟ್ಟು ಚಿತ್ರರಂಗದಲ್ಲಿ ಸಾಧಿಸಬೇಕೆಂದು ಬಂದದ್ದು ಉಂಟು. ಯಶಸ್ಸು ಬಹಳ ಕಡಿಮೆ ಜನರ ಪಾಲಾಗಿದೆ. ಆದರೆ ಶ್ರಮ ಪಟ್ಟವರ ಸಂಖ್ಯೆ ಎಣಿಸಲಸಾಧ್ಯ.

social media final

ಎಲ್ಲಕ್ಕಿಂತ ಮುಖ್ಯ ಮನುಷ್ಯ ತನ್ನ ಬೇರುಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವುದು ಮತ್ತು ತಾವು ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಿ ಮೇಲೆ ಬಂದ ಬಳಿಕ ತಮ್ಮಂತೆ ಕಷ್ಟಪಟ್ಟು ಶ್ರದ್ಧೆಯಿಂದ ಕೆಲಸ ಮಾಡಲು ಹಂಬಲ ಇರುವ ಪ್ರತಿಭೆಗಳನ್ನು ಹುಡುಕಿ ಸಹಾಯ ಮಾಡುವುದು ಉತ್ತಮ ನಡವಳಿಕೆ. ನಾನು ಯಾವತ್ತಿಗೂ ನಂಬರ್ 1 ಮತ್ತು ಈ ಸ್ಥಾನ ನನಗೆ ಮಾತ್ರ ಧಕ್ಕಬೇಕು ಅನ್ನುವ ಅಹಂ ಬಿಟ್ಟು ನಮ್ಮಲ್ಲಿ ಯಾರೇ ಮೇಲೆ ಬಂದರೂ ಅದನ್ನು ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಯಶಸ್ಸು, ಅಧಿಕಾರ, ಹಣ ಯಾವುದು ಶಾಶ್ವತವಲ್ಲ ಅನ್ನುವ ಸಾಮಾನ್ಯ ಅರಿವು ಎಲ್ಲರಿಗೂ ಇರಬೇಕು. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

ramya 1 1

ಇಂದು ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳು ತೋರುತ್ತಿರುವ ನಡವಳಿಕೆ ಬಹಳ ಚಿಂತಾಜನಕವಾಗಿದೆ. ತಮ್ಮ ಗುಂಪಿನಲ್ಲಿ ಅಥವಾ ಬಣದಲ್ಲಿ ಕಾಣಿಸಿಕೊಳ್ಳದ ಎಲ್ಲರನ್ನೂ ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ತಾಯಿ, ಹೆಂಡತಿ, ಮಗಳು ಅನ್ನುವ ಎಲ್ಲ ಪವಿತ್ರ ಸಂಬಂಧಗಳಿಗೆ ಮಸಿ ಬಳಿಯುವಂತಹ ಬಹಳ ಕೆಟ್ಟ ಮಾತುಗಳು ಆಡುವುದನ್ನು ಕಂಡಲ್ಲಿ ನೋವಾಗುತ್ತದೆ. ನಮ್ಮ ಪ್ರಜ್ಞಾವಂತ ಸಮಾಜ ಯಾವ ಮಟ್ಟಕ್ಕೆ ಇಳಿಯುತ್ತಿದೆ ಅನ್ನುವುದು ನೋಡಿ ಬೇಜಾರಾಗುತ್ತಿದೆ.

RAMYA 1 1

ಮುಂಚಿನಿಂದಲೂ ಅಭಿಮಾನಿ ಸಂಘಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವುದು ನಾವು ಕಂಡಿದ್ದೇವೆ, ಕೇಳಿದ್ದೇವೆ. ರಕ್ತದಾನ ಶಿಬಿರ, ಅನ್ನದಾನ, ವೃದ್ಧಾಶ್ರಮ, ಅನಾಥಾಶ್ರಮದಲ್ಲಿ ಸೇವೆ ಮಾಡುವುದು, ಗಿಡ ನೆಡುವುದು, ಪ್ರಕೃತಿ ಕಾಪಾಡುವುದು, ಬಡವರಿಗೆ ಆಹಾರ ಮತ್ತು ಔಷಧಿ ಹಂಚುವುದು ಮುಂತಾದ ಅನೇಕ ಕಾರ್ಯಗಳನ್ನು ಮಾಡಿಕೊಂಡು ಬಂದಿರುವುದು ಅಭಿಮಾನಿ ಸಂಘಗಳಿಗೆ ಇರುವ ಹೆಗ್ಗಳಿಕೆ, ಆದರೆ ಅಭಿಮಾನಿಗಳು ಅನ್ನುವ ಹೆಸರಿನಲ್ಲಿ ಈಗ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿಜ ರೂಪವನ್ನು, ಹೆಸರನ್ನು ಹಾಕಿಕೊಳ್ಳದೆ ಅನಾಮಧೇಯವಾಗಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯಲ್ಲಿ ಮಾತಾಡುವುದು ವಿಷಾದನೀಯ. ಇಂತಹ ವರ್ತನೆಯನ್ನು ನಮ್ಮ ನಟರು ಖಂಡಿಸಿ ತಮ್ಮ ಅಭಿಮಾನಿಗಳಿಗೆ ತಿಳುವಳಿಕೆ ಹೇಳಿ ಅವರನ್ನು ಸುಸಂಸ್ಕೃತರಾಗಿ ಮಾಡುವ ಜವಾಬ್ದಾರಿ ಹೊರಬೇಕಿದೆ. ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಅಭಿಮಾನಿಗಳು ಮಾಡುವ ಸಮಾಜ ವಿರೋಧಿ ಚಟವಟಿಕೆಗಳಿಗೆ ಬೆಂಬಲ ಕೊಡಬಾರದು.

ramya 1 5

ಕನ್ನಡ ಚಿತ್ರರಂಗ ಇವತ್ತು ದೇಶ-ವಿದೇಶಗಳಲ್ಲಿ ದೊಡ್ಡ ಖ್ಯಾತಿ ಪಡೆದಿದೆ. ಐಎಂಡಿಬಿ ಉನ್ನತ 10 ಚಿತ್ರಗಳ ಪಟ್ಟಿಯಲ್ಲಿ 3 ಕನ್ನಡ ಚಿತ್ರಗಳಿವೆ ಅಂತ ಹೇಳಲು ನಮಗೆಲ್ಲ ಬಹಳ ಹೆಮ್ಮೆ ಆಗಬೇಕಿದೆ. ಕನ್ನಡ ಚಿತ್ರಗಳು ಈ ವರ್ಷ ಕಂಡ ಯಶಸ್ಸು ಬೇರಾವುದೇ ಭಾಷೆಯ ಚಿತ್ರಗಳಿಗೂ ಲಭ್ಯವಾಗಿಲ್ಲ, ಇದಕ್ಕಿಂತ ಹೆಮ್ಮೆಯ ವಿಚಾರ ಮತ್ತು ಸ್ಫೂರ್ತಿ ಬೇಕಿದೆಯೇ? ಕಲಾದೇವಿಯ ಸೇವೆ ಮಾಡಿಕೊಂಡು ಸಮಾಜಕ್ಕೂ, ನಮ್ಮ ಚಿತ್ರರಂಗಕ್ಕೂ ಒಳ್ಳೆಯ ಹೆಸರು ತರುವುದು ನಮ್ಮೆಲ್ಲರ ಗುರಿ ಅಗಿರಬೇಕು. ಇದು ನಮ್ಮೆಲ್ಲರ ಜವಾಬ್ದಾರಿಯೂ ಹೌದು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಮ್ಮ ಅಭಿಮಾನಿಗಳು ಮತ್ತು ಬೆಂಬಲಿಗರನ್ನು ಉತ್ತೇಜಿಸೋಣ. ಪ್ರೀತಿ ಮತ್ತು ವಿಶ್ವಾಸ ತುಂಬಿದ ಉತ್ತಮ ಸಮಾಜ ನಿರ್ಮಿಸೋಣ. ದ್ವೇಷ ಮತ್ತು ಅಸೂಯೆಗಳನ್ನು ದಮನ ಮಾಡೋಣ, ಎಲ್ಲರಿಗೂ ಒಳಿತಾಗಲಿ ಎಂದು ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Actor Ramyakannada actressKannada Film Industrysandalwoodಅಭಿಮಾನಿ ಸಂಘಕನ್ನಡ ಚಿತ್ರರಂಗನಟಿ ರಮ್ಯಾಸಿನಿಮಾ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
9 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
20 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
20 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
42 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
45 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?