ರಕ್ಷಾ ಬಂಧನದ (ಆ.19) ಹಿನ್ನೆಲೆಯಲ್ಲಿ ವಿಶೇಷ ಫೋಟೋಗಳನ್ನು ನಟಿ ಶ್ರುತಿ (Actress Shruthi) ಹಂಚಿಕೊಂಡಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆರನ್ನು (Veerendra Heggade) ಭೇಟಿಯಾಗಿ ಶ್ರುತಿ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ಈ ಕುರಿತು ನಟಿ ವಿಶೇಷ ನೋಟ್ ಅನ್ನು ಕೂಡ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
- Advertisement -
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಹಾಗೂ ಪೂಜ್ಯರ ಆಶೀರ್ವಾದ ಪಡೆದು, ರಕ್ಷಾ ಬಂಧನದ ದಿನ ಅವರಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದ ನಾವು ಧನ್ಯ. ಶ್ರೀ ಮಂಜುನಾಥ ನಿಮ್ಮೆಲರಿಗೂ ಒಳ್ಳೆಯದು ಮಾಡಲಿ ಎಂದು ನಟಿ ಬರೆದುಕೊಂಡಿದ್ದಾರೆ.
- Advertisement -
View this post on Instagram
ಮಗಳು ಗೌರಿ (Gowri) ಜೊತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ನಟಿ ರಾಖಿ ಕಟ್ಟಿ ಆಶೀರ್ವಾದ ಪಡೆದಿದ್ದಾರೆ. ಇದನ್ನೂ ಓದಿ:ರವಿವರ್ಮ ಪೇಂಟಿಂಗ್ ಥೀಮ್ನಲ್ಲಿ ಮೂಡಿ ಬಂದ ಹರ್ಷಿಕಾ ಪ್ರೆಗ್ನೆನ್ಸಿ ಫೋಟೋಶೂಟ್
- Advertisement -
- Advertisement -
ಇನ್ನೂ ಸಿನಿಮಾ ವಿಚಾರಕ್ಕೆ ಬರೋದಾದ್ರೆ, ‘ಕಾಟೇರ’ (Kaatera) ಸಿನಿಮಾ ಸಕ್ಸಸ್ ನಂತರ ಶ್ರುತಿ ‘ಗಿಚ್ಚಿ ಗಿಲಿ ಗಿಲಿ’ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಗಳು ಗೌರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ಮಗಳು ಸಿನಿಮಾಗೆ ಬರುವ ಬಗ್ಗೆ ನಟಿ ಅಧಿಕೃತವಾಗಿ ತಿಳಿಸಿದ್ದಾರೆ. ಸಿನಿಮಾ ಕುರಿತು ಮಾಹಿತಿ ಮುಂದಿನ ದಿನಗಳಲ್ಲಿ ಸಿಗಲಿದೆ.