ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Thangadagi) ಕನ್ನಡ ಬರೆಯಲು ಪರದಾಡಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ
Advertisement
ಶನಿವಾರ ಕೊಪ್ಪಳ (Koppal) ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಶಿವರಾಜ ತಂಗಡಗಿ ಭೇಟಿ ನೀಡಿದ್ದರು. ಈ ವೇಳೆ ಅಂಗನವಾಡಿ ಮಕ್ಕಳಿಗೆ `ಶುಬವಾಗಲಿ’ ಎಂದು ಬರೆದಿದ್ದರು. ಬಳಿಕ ಬೆಂಬಲಿಗರು ತಿಳಿಸಿದ್ದಕ್ಕೆ ಸರಿಯಾಗಿ `ಶುಭವಾಗಲಿ’ ಎಂದು ತಿದ್ದುಪಡಿ ಮಾಡಿದರು.
Advertisement
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕನ್ನಡ ಬರೆಯಲು ಪರದಾಡಿದ ಸಚಿವರು ಎಂದು ವೈರಲ್ ಆಗುತ್ತಿದೆ. ಸಚಿವರ ಕನ್ನಡ ಭಾಷಾ ಜ್ಞಾನದ ಬಗ್ಗೆ ಎಲ್ಲೆಡೆ ಚರ್ಚೆ ಶುರುವಾಗಿದೆ.ಇದನ್ನೂ ಓದಿ: ಚರ್ಚ್ನಲ್ಲಿ ಪಾದ್ರಿ ಮೇಲೆ ಭಿನ್ನಮತೀಯ ಗುಂಪಿನಿಂದ ಹಲ್ಲೆ
Advertisement
Advertisement