Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!

Bengaluru City

ಕದ್ದುಮುಚ್ಚಿ: ಸ್ಟೀಲ್ ಉದ್ಯಮಿ ಮಂಜುನಾಥ್ ಮನಸಲ್ಲಿದ್ದದ್ದು ಉಕ್ಕಿನಂಥಾ ಸಿನಿಮಾಸಕ್ತಿ!

Public TV
Last updated: February 5, 2019 8:52 pm
Public TV
Share
2 Min Read
kaddu muchchi n
SHARE

ಬೆಂಗಳೂರು: ನಾದಬ್ರಹ್ಮ ಹಂಸಲೇಖ ಸಂಗೀತ ನಿರ್ದೇಶನದ ಸ್ಪರ್ಶದೊಂದಿಗೇ ಕದ್ದುಮುಚ್ಚಿ ಎಂಬ ಹೊಸಬರ ಚಿತ್ರವೊಂದು ಸುದ್ದಿಯಲ್ಲಿದೆ. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಮತ್ತು ಬಿಗ್ ಬಾಸ್ ಫೇಮಿನ ಮೇಘಶ್ರೀ ಅಭಿನಯದ ಈ ಸಿನಿಮಾವೀಗ ಹಾಡುಗಳ ಮೂಲಕವೇ ಪ್ರೇಕ್ಷಕರನ್ನು ಮೆಲುವಾಗಿ ತಾಕಿದೆ. ಬದುಕಿಗೆ ಹತ್ತಿರವಾದ, ಮನೋರಂಜನಾತ್ಮಕ ಅಂಶಗಳನ್ನೂ ಹೊಂದಿರುವ ಈ ಚಿತ್ರವನ್ನು ಅಕ್ಕರಾಸ್ಥೆಯಿಂದಲೇ ನಿರ್ಮಾಣ ಮಾಡಿರುವವರು ವಿ.ಜಿ ಮಂಜುನಾಥ್.

ಸಿನಿಮಾ ಎಂಬುದರ ಸೆಳೆತವೇ ಮಾಯೆಯಂಥಾದ್ದು. ಅದು ಎತ್ತೆತ್ತಲ್ಲಿಂದಲೋ ಮನಸುಗಳನ್ನ ಸೆಳೆದು ಬಿಡುತ್ತದೆ. ಗೊತ್ತೇ ಆಗದಂತೆ ತನ್ನ ಭಾಗವಾಗಿಸಿಕೊಂಡು ಬಿಡುತ್ತದೆ. ಈ ಮಾತಿಗೆ ಹತ್ತಾರು ಉದಾಹರಣೆಗಳಿವೆಯಾದರೂ ಕದ್ದುಮುಚ್ಚಿ ಚಿತ್ರದ ನಿರ್ಮಾಪಕರಾದ ಮಂಜುನಾಥ್ ಅದಕ್ಕೆ ತಾಜಾ ಉದಾಹರಣೆಯಂಥವರು.

kaddu mucchi a

ಆದಿಚುಂಚನಗಿರಿ ಸಮೀಪದ ವಡ್ಡರಹಳ್ಳಿಯವರಾದ ಮಂಜುನಾಥ್ ಅಪ್ಪಟ ರೈತಾಪಿ ವರ್ಗದಿಂದಲೇ ಬಂದವರು. ಈವತ್ತಿಗೂ ಅವರ ಬೇರುಗಳಿರೋದು ಅಲ್ಲಿಯೇ. ಆರಂಭ ಕಾಲದಲ್ಲಿ ಮಂಜುನಾಥ್ ಅವರ ಆಸಕ್ತಿಯಿದ್ದದ್ದು ಶಿಕ್ಷಣ ಕ್ಷೇತ್ರದತ್ತ. ಟಿಸಿಎಚ್ ಸೇರಿದಂತೆ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದ ಅವರು ಅಚಾನಕ್ಕಾಗಿ ಇಂಡಸ್ಟ್ರಿಯಲ್ ವಲಯಕ್ಕೆ ಪಾದಾರ್ಪಣೆ ಮಾಡಿದ್ದ 2000ನೇ ಇಸವಿಯಲ್ಲಿ. ಆದಿತ್ಯ ಬಿರ್ಲಾ ಕಂಪೆನಿಯ ಸ್ಟೀಲ್ ಸರಬರಾಜು ಉದ್ಯಮ ಆರಂಭಿಸಿ ಅದರಲ್ಲಿಯೇ ಪರಿಶ್ರಮ ಪಟ್ಟು ಗೆದ್ದ ಮಂಜುನಾಥ್ ಅವರ ಪ್ರಧಾನ ಕನಸಾಗಿದ್ದದ್ದು ಸಿನಿಮಾ.

Kaddu mucchi Manjunath

ಆರಂಭ ಕಾಲದಿಂದಲೂ ಮಂಜುನಾಥ್ ಅವರಿಗೆ ಸಿನಿಮಾ ಎಂದರೆ ಎಲ್ಲಿಲ್ಲದ ಪ್ರೀತಿ. ಅವರ ಮನೋರಂಜನೆಯ ಮೂಲವಾಗಿದ್ದದ್ದೂ ಕೂಡಾ ಸಿನಿಮಾಗಳೇ. ಅವರೊಬ್ಬ ಉದ್ಯಮಿಯಾಗಿ ಬೆಳೆದ ನಂತರ ಒಂದೊಳ್ಳೆ ಸಿನಿಮಾ ಮಾಡ ಬೇಕೆಂಬ ಹಂಬಲ ತೀವ್ರವಾಗಿತ್ತು. ಮನೋರಂಜನೆಯ ಅಂಶಗಳ ಜೊತೆಗೆ ಈ ಸಮಾಜಕ್ಕೆ ಸಂದೇಶ ಸಾರುವಂಥಾ ಕಥೆಯೊಂದು ಸಿಕ್ಕರೆ ಸಿನಿಮಾ ಮಾಡೋ ನಿರ್ಧಾರದೊಂದಿಗೆ ಮಂಜುನಾಥ್ ಮುಂದುವರೆಯುತ್ತಿದ್ದರು. ಅದೇ ಕಾಲಕ್ಕೆ ಸರಿಯಾಗಿ ನಿರ್ದೇಶಕ ವಸಂತ್ ಮಂಜುನಾಥ್ ಅವರನ್ನು ಸಂಪರ್ಕಿಸಿದ್ದರು.

kaddu mucchi

ವಸಂತ್ ಹೇಳಿದ ಕಥೆ ಇಷ್ಟವಾಗಿ 2016ರಲ್ಲಿ ಅದು ಟೇಕಾಫ್ ಕೂಡಾ ಆಗಿತ್ತು. ಆದರೆ ಎಲ್ಲವೂ ಅಚ್ಚುಕಟ್ಟಾಗಿ ಮೂಡಿ ಬರಬೇಕೆಂಬ ಮನಸ್ಥಿತಿಯ ಮಂಜುನಾಥ್ ಎಲ್ಲದರಲ್ಲಿಯೂ ಅಕ್ಕರಾಸಕ್ತಿಯಿಂದಲೇ ಗಮನ ಹರಿಸಿದ್ದರು. ಆದ್ದರಿಂದಲೇ ಕೊಂಚ ತಡವಾದರೂ ಇಡೀ ಚಿತ್ರ ಚೆಂದಗೆ ಮೂಡಿ ಬಂದಿದೆ ಎಂಬ ಆತ್ಮತೃಪ್ತಿ ಮಂಜುನಾಥ್ ಅವರಲ್ಲಿದೆ.

ನಗರ ಜೀವನದ ಜಂಜಾಟಗಳಿಂದ ರೋಸತ್ತು ಮತ್ಯಾವುದೋ ಮಾಯೆಯ ಬೆಂಬಿದ್ದು ಹೊರಡೋ ಯುವಕನ ಸುತ್ತಾ ಈ ಚಿತ್ರದ ಕಥೆ ಬಿಚ್ಚಿಕೊಳ್ಳುತ್ತದೆಯಂತೆ. ಆ ಹುಡುಕಾಟದಲ್ಲಿಯೇ ಭರ್ಜರಿ ಮನೋರಂಜನೆಯೊಂದಿಗೆ ಬದುಕಿಗೆ ಹತ್ತಿರವಾದ ಅಂಶಗಳೂ ಅನಾವರಣಗೊಳ್ಳುತ್ತಾ ಸಾಗುತ್ತವೆ. ಕಡೆಗೊಂದು ಪರಿಣಾಮಕಾರಿಯಾದ ಸಂದೇಶವನ್ನೂ ನೀಡಲಾಗಿದೆ. ಒಟ್ಟಾರೆಯಾಗಿ ಇದು ಹೊಸಾ ಸಾಧ್ಯತೆಗಳನ್ನು ಕಾಣಿಸುವಂಥಾ ಪಕ್ಕಾ ಕಮರ್ಶಿಯಲ್ ಚಿತ್ರ.

kaddu mucchi B

ಅದೇನೇ ಅಡೆತಡೆಗಳು ಎದುರಾದರೂ ಮಂಜುನಾಥ್ ಯಾವುದಕ್ಕೂ ಕೊರತೆ ಮಾಡದಂತೆ ಕದ್ದುಮುಚ್ಚಿ ಚಿತ್ರವನ್ನ ರೂಪಿಸಿದ್ದಾರೆ. ಇದರಲ್ಲಿ ಕಲಾವಿದರದ್ದೊಂದು ದೊಡ್ಡ ದಂಡೇ ಇದೆ. ಕಾಮಿಡಿಯೂ ಈ ಚಿತ್ರದ ಪ್ರಧಾನ ಅಂಶ. ಚಿಕ್ಕಣ್ಣ, ಹೊನ್ನವಳ್ಳಿ ಕೃಷ್ಣ, ಹಿರಿಯ ನಟ ದೊಡ್ಡಣ್ಣ ಸೇರಿದಂತೆ ಅನೇಕರ ಕಾಮಿಡಿ ಕಮಾಲ್ ಈ ಚಿತ್ರದಲ್ಲಿದೆ. ಇನ್ನುಳಿದಂತೆ ಬಿ.ವಿ ರಾಧಾ, ಸುಚೇಂದ್ರ ಪ್ರಸಾದ್ ಮುಂತಾದವರ ಅದ್ಧೂರಿ ತಾರಾಗಣವನ್ನ ಕದ್ದುಮುಚ್ಚಿ ಚಿತ್ರ ಹೊಂದಿದೆ.

ಈ ಮೂಲಕ ಹೊಸಾ ಅಲೆಯ ಚೆಂದದ್ದೊಂದು ಚಿತ್ರವನ್ನ ನಿರ್ಮಾಣ ಮಾಡಿದ ಖುಷಿ ಮಂಜುನಾಥ್ ಅವರಿಗಿದೆ. ಈಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡಿರೋದರಿಂದ ಇದೇ ತಿಂಗಳ ಇಪ್ಪತ್ತೆರಡನೇ ತಾರೀಕಿನಂದು ಈ ಚಿತ್ರವನ್ನ ತೆರೆಗಾಣಿಸುವ ಯೋಜನೆಯನ್ನೂ ಅವರು ಹಾಕಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Abhijith ThirthahalliAlathi JayaramB V RadhaChikkannacinemadoddannaHonnavalli KrishnajagadeeshkarthikKumaraswamyMeghaShreePrashanth SiddiPublic TVRajesh NatarangaS UmeshsandalwoodSucchendra PrasadVijay Suriyaಕದ್ದು ಮುಚ್ಚಿಚಿಕ್ಕಣ್ಣದೊಡ್ಡಣ್ಣಬಿ.ವಿ.ರಾಧಾಬಿಗ್ ಬಾಸ್ ಮೇಘಶ್ರೀಮಂಜುನಾಥ್ವಿಜಯ್ ಸೂರ್ಯಸುಚೇಂದ್ರ ಪ್ರಸಾದ್ಹಂಸಲೇಖಹೊನ್ನವಳ್ಳಿ ಕೃಷ್ಣ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
5 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
8 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
41 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?