ಬೆಂಗಳೂರು: ದಕ್ಷಿಣ ಭಾರತದ ಜವಳಿ ಮಾರಾಟ ಸಂಸ್ಥೆ ಪೋತಿಸ್ ಸಂಸ್ಥೆ ನಗರದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದೆ.
ಪೋತಿಸ್ ಮಳಿಗೆಯನ್ನು ಕೆಂಪು ಮತ್ತು ಹಳದಿ ಬಣ್ಣದಿಂದ ಶೃಂಗರಿಸಿ ಬಟ್ಟೆ ಖರೀದಿಗೆ ಆಗಮಿಸಿದ ಎಲ್ಲ ಗ್ರಾಹಕರಿಗೆ ಸಿಹಿ ನೀಡಿ ಸಂಂಭ್ರಮಾಚರಣೆ ಮಾಡಿದೆ. ಅಷ್ಟೇ ಅಲ್ಲದೇ ಮಧ್ಯಾಹ್ನ 1,500 ಮಂದಿಗೆ ಅನ್ನದಾನ ಸಹ ನಡೆಸಿ ವಿಶಿಷ್ಟವಾಗಿ ರಾಜೋತ್ಸವ ಆಚರಿಸಿದೆ. ಮಳಿಗೆಗೆ ಆಗಮಿಸಿದ ಗ್ರಾಹಕರಿಗೆ ಒಂದು ಸ್ವೀಟ್ ಬಾಕ್ಸ್ ಉಡುಗೊರೆ ನೀಡಿದ್ದು, ಇಡೀ ದಿನ ಮಳಿಗೆಯಲ್ಲಿ ಕನ್ನಡದ ಹಾಡುಗಳನ್ನು ಹಾಕುವ ಮೂಲಕ ಕನ್ನಡ ವಾತಾವರಣವನ್ನು ಸೃಷ್ಟಿಮಾಡಿತ್ತು.
2018ರ ಫೆಬ್ರವರಿಯಲ್ಲಿ ಕೆಂಪೇಗೌಡ ರಸ್ತೆಯಲ್ಲಿ ಮಳಿಗೆ ಉದ್ಘಾಟನೆ ಮಾಡಿತ್ತು. ಅಲ್ಲದೇ ಸಂಸ್ಥೆಯ ರಾಯಭಾರಿಯಾಗಿ ನಟ ಪುನೀತ್ ರಾಜ್ಕುಮಾರ್ ಹಾಗೂ ನಟಿ ತಮನ್ನಾ ಅವರನ್ನ ನೇಮಕ ಮಾಡಿತ್ತು. 95 ವರ್ಷಗಳಿಂದ ಜವಳಿ ಉದ್ಯಮದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಪೋತಿಸ್, ಮಯೂರಿ, ವಸುಂಧರ, ಪರಂಪರಾ, ವಸ್ತ್ರಕಲಾ ಹಾಗೂ ಕಲಾಕ್ಷೇತ್ರದಂತಹ ಬ್ರ್ಯಾಂಡೆಡ್ ರೇಷ್ಮೆ ವಸ್ತ್ರಗಳನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅಲ್ಲದೇ ಕಾಂಚೀಪುರಂ, ಧರ್ಮವರಂ, ಬನಾರಸ್ ರೇಷ್ಮೆ ಉಡುಪುಗಳು, ಫ್ಯಾನ್ಸಿ ಹಾಗೂ ಡಿಸೈನರ್ ಸೀರೆಗಳು ಸೇರಿದಂತೆ ಸಿದ್ದ ಉಡುಪುಗಳನ್ನು ಗ್ರಾಹಕರಿಗೆ ಮಾರಾಟ ಮಾಡುತ್ತಾ ವಿಶ್ವಾಸಗಳಿಸಿದೆ.
ಪೋತಿಸ್ ಶಾಖೆಯಲ್ಲಿ ಕುಟುಂಬದ ಎಲ್ಲಾ ಸದಸ್ಯರಿಗೂ ಒಂದೇ ಕಡೆ ಉಡುಪುಗಳನ್ನು ಖರೀದಿಬಹುದಾಗಿದ್ದ ಮಳಿಗೆಯಾಗಿದ್ದು, ಎಲ್ಲಾ ಸಮಾರಂಭಗಳಿಗೂ ಸೂಕ್ತ ಎನಿಸುವಂಥ ಅತ್ಯುತ್ತಮ ಗುಣಮಟ್ಟದ ವೈವಿಧ್ಯಮಯ ವಸ್ತ್ರಗಳನ್ನು ಒಳಗೊಂಡಿದೆ.
ಕೆಂಪೇಗೌಡ ರಸ್ತೆಯಲ್ಲಿರುವ ಮಳಿಗೆ ಒಂದು ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಹಾಗೂ ಎಂಟು ಅಂತಸ್ತಿನ ಕಟ್ಟದಲ್ಲಿ ನಿರ್ಮಾಣವಾಗಿದ್ದು, ಕುಟುಂಬದ ಎಲ್ಲಾ ಸದಸ್ಯರಿಗೂ ಬೇಕಾದ ವಸ್ತ್ರಗಳನ್ನು ಪ್ರತ್ಯೇಕ ವಿಭಾಗಗಳಲ್ಲಿ ಮಾರಾಟ ಮಾಡುತ್ತಿದೆ. ಅಲ್ಲದೇ ತಮ್ಮ ಮಾರಾಟ ಮಳಿಗೆಗೆ ಬರುವ ಗ್ರಾಹಕರಿಗೆ ಶುಲ್ಕ ರಹಿತ ವಾಹನ ಪಾರ್ಕಿಂಕ್ ವ್ಯವಸ್ಥೆಯನ್ನು ಮಾಡಿದ್ದು, ರಾಷ್ಟ್ರೀಯ ಹಬ್ಬಗಳು ಸೇರಿ ವಿವಿಧ ವಿಶೇಷ ಸನ್ನಿವೇಶದಲ್ಲಿ ರಿಯಾಯಿತಿ ಮಾರಾಟವನ್ನು ಏರ್ಪಡಿಸುತ್ತಾ ಬಂದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv