ಮತ್ತೆ ಶುರುವಾಯಿತು ಚಾಮರಾಜಪೇಟೆ ಮೈದಾನ ಫೈಟ್ – ಈದ್ಗಾದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು

Public TV
1 Min Read
EDGA MAIDAN 3

ಬೆಂಗಳೂರು: ಚಾಮರಾಜಪೇಟೆ (Chamrajpet)  ಆಟದ ಮೈದಾನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಸ್ವಾತಂತ್ರ್ಯೋತ್ಸವ ಆಯ್ತು, ಗಣೇಶೋತ್ಸವ ವಿವಾದವು ಮುಗಿತು. ಈಗ ಕನ್ನಡ ರಾಜೋತ್ಸವದ (Kannada Rajyotsava) ಸರದಿ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Idgah Maidan) ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡುವಂತೆ ಕೂಗು ಕೇಳಿ ಬಂದಿದೆ.

KANNADA

ಸ್ವಾತಂತ್ರ್ಯ ದಿನಾಚರಣೆಯ ರೀತಿಯೇ ಕನ್ನಡ ರಾಜ್ಯೋತ್ಸವ ಆಚರಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಕೋರ್ಟ್ ಆದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಎರಡಕಷ್ಟೇ ಅನುಮತಿ ನೀಡಲಾಗಿತ್ತು. ಹೀಗಾಗಿ ಇದೀಗ ಸರ್ಕಾರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ಕೋರಿ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ ಇದೆ. ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ 2 ಲಕ್ಷ ಜನರನ್ನು ಸೇರಿಸಲು ಬಿಜೆಪಿ ನಿರ್ಧಾರ

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ, ಈಗಾಗಲೇ ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ (R.Ashok) ನಮ್ಮ ಜೊತೆ ಮಾತನಾಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಚರಿಸುವಂತೆ ಸಲಹೆ ನೀಡಿದ್ದಾರೆ. ಒಕ್ಕೂಟದ ಕಡೆಯಿಂದ ಕನ್ನಡ ಸಾಹಿತ್ಯ ಪರಿಷತ್‍ನಿಂದ ಆಚರಣೆಗೆ ಒಪ್ಪಿಗೆ ಇದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರ ಜೊತೆಗೂ ಚರ್ಚೆ ಮಾಡಿದ್ದೇವೆ. ಸರ್ಕಾರ ಅನುಮತಿ ನೀಡಿದ್ರೆ ನಾಡಹಬ್ಬದ ರೀತಿ ಆಚರಣೆಗೆ ಸಲಹೆ ಬಂದಿದೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಸರ್ಕಾರ ಕೋರ್ಟ್ ಮೊರೆ ಹೋಗಿ ಕನ್ನಡ ರಾಜ್ಯೋತ್ಸವಕ್ಕೆ ಅನುಮತಿ ಕೇಳುವ ನಿರೀಕ್ಷೆಯಿದೆ ಎಂದರು. ಇದನ್ನೂ ಓದಿ: ಉದ್ಘಾಟನೆಗೊಂಡ ನಾಲ್ಕೇ ದಿನಕ್ಕೆ ಗುಂಡಿ ಬಿದ್ದ 18 ಕೋಟಿಯ ಮೇಲ್ಸೇತುವೆ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *