ಕುಂದಾನಗರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ: 2200ಕ್ಕೂ ಅಧಿಕ ಪೊಲೀಸರ ನಿಯೋಜನೆ!

Public TV
1 Min Read
Belagavi Kannada Rajyostava

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಅದ್ಧೂರಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ರಾಜ್ಯೋತ್ಸವ ಮೆರವಣಿಗೆ ಭದ್ರತೆಗಾಗಿ 2,200ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಡಿಸಿಪಿ ರೋಹನ್ ಜಗದೀಶ್ (DCP Rohan Jagadish) ಹೇಳಿದ್ದಾರೆ.

Belagavi Kannada Rajyostava 3

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯೋತ್ಸವದ ಭದ್ರತೆಗಾಗಿ ಆಯಕಟ್ಟಿನ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಕಣ್ಗಾವಲು ನಿಗಾವಹಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳಲಾಗಿದೆ ಎಂದರು‌.ಇದನ್ನೂ ಓದಿ: ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದರ ಮಹತ್ವವೇನು?

Belagavi Kannada Rajyostava 2

ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿನ 800 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಹೊರ ಜಿಲ್ಲೆಯಿಂದ ಮೂವರು ಎಸಿಪಿ ದರ್ಜೆಯ ಅಧಿಕಾರಿಗಳು 8 ಎಸಿಪಿಗಳು, 25 ಸಿಪಿಐಗಳು, 55 ಪಿಎಸ್ಐಗಳನ್ನು ನಿಯೋಜನೆ ಮಾಡಲಾಗಿದೆ.

Belagavi Kannada Rajyostava 1

ಅಲ್ಲದೇ 130 ಎಎಸೈಗಳು, 1,300 ಪೊಲೀಸ್ ಕಾನ್‌ಸ್ಟೇಬಲ್‌ಗಳು ಭದ್ರತೆಗೆ ನಿಯೋಜನೆ ಮಾಡಿದ್ದು, ಜನರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಶಾಂತಿಯುತ ಕರ್ನಾಟಕ ರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆನ್ನುನೋವಿನಿಂದ ದಿನವಿಡೀ ವಿಶ್ರಾಂತಿ – ಇಂದು ದರ್ಶನ್ ಆಸ್ಪತ್ರೆಗೆ ದಾಖಲು?

Share This Article