– ಪಟ್ಟಭದ್ರ ಹಿತಾಸಕ್ತಿ ಎಂದ ಕಸಾಪ ಅಧ್ಯಕ್ಷ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (Kannada Sahithya Parishath) ಅಧ್ಯಕ್ಷ ಮಹೇಶ್ ಜೋಶಿಯವರಿಗೆ (Mahesh Joshi) ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಸವಲತ್ತನ್ನು ಸರ್ಕಾರ ಹಿಂಪಡೆದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಚಿವ ದರ್ಜೆ ಸ್ಥಾನಮಾನವನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದರ ಹಿಂದೆ ಕೆಲ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಸಚಿವ ದರ್ಜೆ ಸ್ಥಾನ ಮಾನ ನೀಡಿದ ಮೇಲೆ ಎಲ್ಲಿಯೂ ಅದರ ಗೌರವಕ್ಕೆ ಚ್ಯುತಿ ಬಾರದ ಹಾಗೆ, ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳದ ಹಾಗೆ ಕಾರ್ಯ ನಿರ್ವಹಿಸಿದ್ದೇನೆ ಎಂದಿದ್ದಾರೆ.
ದುರದ್ದೇಶದಿಂದ ಪಟ್ಟಭದ್ರ ಹಿತಾಸಕ್ತಿಗಳು ಸರ್ಕಾರದ ಮೇಲೆ ಒತ್ತಡವನ್ನು ತರುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಬಂದಾಗಲೇ ಸಿಎಂ ಗಮನಕ್ಕೆ ತಂದಿದ್ದೆ ಎಂದು ಅವರು ತಿಳಿಸಿದ್ದಾರೆ.
ಪಿತೂರಿ ಮಾಡಿದವರ ಬಗ್ಗೆ ಅವರು ಪತ್ರದಲ್ಲಿ ಬರೆದಿದ್ದಾರೆ. ಇದು ಪರಿಷತ್ತಿಗೆ ನೀಡಿದ ಸವಲತ್ತಾಗಿದೆ. ಮಹೇಶ್ ಜೋಶಿಗೆ ಅಲ್ಲ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.