ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಲಿದೆ.
ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಮೂರು ದಿನಗಳ ಕನ್ನಡ ಅಕ್ಷರ ಜಾತ್ರೆ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳು ಮುಗಿದಿವೆ. ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಈ ಸಮ್ಮೇಳನದ ಅಧ್ಯಕ್ಷರಾಗಿದ್ದು, ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ.
- Advertisement 2
- Advertisement 3
ಮೈಸೂರು ಅರಮನೆಯ ದರ್ಬಾರ್ ಮಾದರಿಯಲ್ಲಿ ಮುಖ್ಯವೇದಿಕೆ ಸಿದ್ಧ ಮಾಡಲಾಗಿದೆ. ಒಟ್ಟು 22 ಗೋಷ್ಠಿಗಳು ನಡೆಯಲಿವೆ. ಪ್ರಧಾನ ವೇದಿಕೆಯಲ್ಲಿ ಸಮ್ಮೇಳನದ ಮೊದಲ ದಿನದ ಸಂಜೆ 5 ಗಂಟೆಗೆ ಮಾಧ್ಯಮ ಮುಂದಿರುವ ಸವಾಲು ಕುರಿತು ಪ್ರಮುಖ ಗೋಷ್ಠಿ ನಡೆಯಲಿದ್ದು, ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
- Advertisement 4
11 ಸಾವಿರ ಪ್ರತಿನಿಧಿಗಳು ಸಮ್ಮೇಳನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು 200 ಕೌಂಟರ್ ತೆರೆಯಲಾಗಿದ್ದು ಊಟಕ್ಕಾಗಿ 2,75 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.