Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

Public TV
Last updated: December 19, 2024 9:09 pm
Public TV
Share
3 Min Read
ChaluvarayaSwamy
SHARE

– ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆ ಪ್ರಭಾವಕ್ಕೆ ಒಳಗಾಗಿಲ್ಲ: ಗೊ.ರು.ಚನ್ನಬಸಪ್ಪ

ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಇಂದು (ಗುರುವಾರ) ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ (Go. Ru. Channabasappa) ಅವರು ಮಂಡ್ಯಕ್ಕೆ ಆಗಮಿಸಿದ್ದಾರೆ.

ಸಾಹಿತ್ಯ ಸಮ್ಮೇಳನ ನಡೆಯಲಿರುವ ಮೂರು ದಿನಗಳ ಕಾಲ ಮಂಡ್ಯ ಕನ್ನಡಾಭಿಮಾನಿಗಳನ್ನು ಆದರದಿಂದ ಸ್ವಾಗತಿಸಲು ಅಕ್ಷರಶಃ ಸಜ್ಜಾಗಿದೆ.

ಯಾರೊಬ್ಬರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಮಂಡ್ಯದ ಸುತ್ತ ಮುತ್ತಲಿನ ಜಿಲ್ಲೆಗಳು ಹಾಗೂ ಬೆಂಗಳೂರಿನಿಂದ ಆಗಮಿಸಲಿರುವ ಸಾಹಿತ್ಯಾಭಿಮಾನಿಗಳಿಗಾಗಿ ವಿಶೇಷ ಬಸ್… pic.twitter.com/f3IcqjyYDn

— N Chaluvarayaswamy (@NCheluvarayaS) December 19, 2024

ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy), ಶಾಸಕರಾದ ಗಣಿಗ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಡಿಸಿ ಡಾ. ಕುಮಾರ್‌ ಅವರು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಬಳಿಕ ಚನ್ನಬಸಪ್ಪನವರು ಡಿಸಿ ಡಾ.ಕುಮಾರ್ ನಿವಾಸಕ್ಕೆ ತೆರಳಿದರು.

ChaluvarayaSwamy 3

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ, ಕನ್ನಡ ತವರು ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿಲ್ಲ. ಆದ್ರೆ ಕನ್ನಡ ಹಲವು ಸಮಸ್ಯೆಗಳನ್ನ ಎದುರಿಸುತ್ತಿದೆ. ಇದರ ಬಗ್ಗೆ ಚಿಂತನೆ ಆಗಬೇಕು. ಆಧುನಿಕತೆಯ ಪ್ರಭಾವ ಕನ್ನಡದ ಮೇಲಿನ ಅಭಿಮಾನ ಕಡಿಮೆಯಾಗಲು ಕಾರಣ ಎಂದರು.

ChaluvarayaSwamy 2

ಮಂಡ್ಯ ಜನರ ಪ್ರೀತಿ ವಿಶ್ವಾಸ ಕಂಡು ಕಣ್ತುಂಬಿಕೊಂಡಿದ್ದೇನೆ. ಎಲ್ಲ ಕಾರ್ಯಕಲಾಪದಲ್ಲಿ ಕನ್ನಡ ಬಂಧುಗಳು ಭಾಗವಹಿಸಬೇಕು. ನನ್ನನ್ನ ಪ್ರೀತಿಯಿಂದ ಆಯ್ಕೆ ಮಾಡಿದ್ದಾರೆ. ಇಂತಹ ಉತ್ಸವದಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಹೆಮ್ಮೆಯ ವಿಚಾರ, ನಿಜಕ್ಕೂ ತುಂಬಾ ಸಂತೋಷವಾಗಿದೆ. ಈ ಬಾರಿ ಸಮಕಾಲಿನ ಸಮಸ್ಯೆ ಬಗ್ಗೆ ಗೋಷ್ಠಿಗಳು ನಡೆಯಲಿವೆ. ನಾನು ಅಧ್ಯಕ್ಷನಾಗಿ ಮಾಡುವುದು ಏನು ಇಲ್ಲ. ಕಸಾಪ ಅಧ್ಯಕ್ಷರು ಕೇಳಿದರೆ ಸಲಹೆ ಕೊಡಬಹುದು ಎಂದು ನುಡಿದರು.

ಶುಕ್ರವಾರದಿಂದ ಮಂಡ್ಯದಲ್ಲಿ 87ನೇ ನುಡಿ ಜಾತ್ರೆ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ ಸಕಲ ಸಿದ್ಧತೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತೊಡಗಿದೆ.

ಮಂಡ್ಯದ ಹೊರ ವಲಯದಲ್ಲಿರುವ ಸ್ಯೋಂಜೋ ಆಸ್ಪತ್ರೆಯ ಹಿಂಭಾದ 130 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಲೇ 80 ಎಕರೆ ಪ್ರದೇಶದಲ್ಲಿ 3 ವಿವಿಧ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆಯ ಮುಖ್ಯ ದ್ವಾರ ಸಿದ್ಧಪಡಿಸಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ. ಇಲ್ಲಿ 50,000ಕ್ಕೂ ಅಧಿಕ ಮಂದಿ ಕೂರಲು ಆಸಗಳ ವ್ಯವಸ್ಥೆ ಮಾಡಲಾಗಿದೆ. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆಗಾಗಿ ಜರ್ಮನ್ ಟೆಂಟ್ ಹಾಕಲಾಗಿದೆ. ವೇದಿಕೆ ಸೇರಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

ಇನ್ನೂ ಸಾಹಿತ್ಯಾಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ನಿರ್ಮಾಣವಾಗಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಸ್ಟಾಲ್‌ಗಳು ರೆಡಿಯಾಗಿವೆ. ಸಾಹಿತ್ಯ ಸಮ್ಮೇಳನಕ್ಕೆ ರಂಗು ತರಲು ಮಂಡ್ಯ ನಗರದಲ್ಲಿ ದಸರಾ ಮಾದರಿಯ ದೀಪಾಲಂಕಾರವನ್ನು ಸಹ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಮ್ಮೇಳನದ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಅವರನ್ನು ಸುಮಾರು 6 ಕಿಮೀ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ಸಮ್ಮೇಳದ ವೇದಿಕೆಗೆ ಕರೆಯಲಾಗುತ್ತದೆ. ನಂತರ ಸಿಎಂ ಸಿದ್ದರಾಮಯ್ಯ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

Mandya Police

4,000 ಪೊಲೀಸ್ ಭದ್ರತೆ
ಮೂರು ದಿನಗಳ ಕನ್ನಡ ನುಡಿ ಜಾತ್ರೆ ಉತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 14 ಜಿಲ್ಲೆಗಳಿಂದ ಸುಮಾರು 4,000 ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತೆಗೆ ನೇಮಕ ಮಾಡಲಾಗಿದೆ. ಎಸ್ಪಿ 4, ಎಎಸ್ಪಿ 6, ಡಿವೈಎಸ್‌ಪಿ 21, ಪಿಐ 63, ಪಿಎಸ್‌ಐ 190, ಎಎಸ್‌ಐ 215, ಪಿಸಿ 1700, ಮಹಿಳಾ ಪೇದೆ 165, ಗೃಹರಕ್ಷಕ ದಳ 1,000, ಕೆಎಸ್ಆರ್‌ಪಿ 12, ಡಿಎಆರ್ 13 ನಿಯೋಜಿಸಲಾಗಿದೆ.

TAGGED:87th Kannada Sahitya SammelanaChaluvaraya SwamyGo.Ru Channabasappamandyaಕನ್ನಡ ಸಾಹಿತ್ಯ ಸಮ್ಮೇಳನಗೊ.ರು ಚನ್ನಬಸಪ್ಪಚಲುವರಾಯಸ್ವಾಮಿಮಂಡ್ಯಮಂಡ್ಯ ಪೊಲೀಸ್
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
4 minutes ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
21 minutes ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
33 minutes ago
Narendra Modi and Chinese President Xi Jinping
Latest

5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

Public TV
By Public TV
37 minutes ago
voters list election
Latest

ಬಿಹಾರದ 56 ಲಕ್ಷ ಜನರನ್ನು ವೋಟರ್‌ ಲಿಸ್ಟ್‌ನಿಂದ ತೆಗೆದ ಚುನಾವಣಾ ಆಯೋಗ

Public TV
By Public TV
53 minutes ago
Koppal Bank manager
Districts

ಕೊಪ್ಪಳ | ಕನ್ನಡ ಭಾಷಾಂತರ ಮಾಡೋಕೆ ಸಿಬ್ಬಂದಿ ಕರೆದ ಬ್ಯಾಂಕ್ ಮ್ಯಾನೇಜರ್ – ವಿಡಿಯೋ ವೈರಲ್

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?