Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

87ನೇ ಕನ್ನಡ ಸಾಹಿತ್ಯ ಸಮ್ಮೇಳನ – ಮಂಡ್ಯಕ್ಕೆ ಸಮ್ಮೇಳನಾಧ್ಯಕ್ಷರ ಆಗಮನ, ಗಣ್ಯರಿಂದ ಸ್ವಾಗತ

Public TV
Last updated: December 19, 2024 9:09 pm
Public TV
Share
3 Min Read
ChaluvarayaSwamy
SHARE

– ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆ ಪ್ರಭಾವಕ್ಕೆ ಒಳಗಾಗಿಲ್ಲ: ಗೊ.ರು.ಚನ್ನಬಸಪ್ಪ

ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (87th Kannada Sahitya Sammelana) ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ ಹಿನ್ನೆಲೆ ಇಂದು (ಗುರುವಾರ) ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ (Go. Ru. Channabasappa) ಅವರು ಮಂಡ್ಯಕ್ಕೆ ಆಗಮಿಸಿದ್ದಾರೆ.

ಸಾಹಿತ್ಯ ಸಮ್ಮೇಳನ ನಡೆಯಲಿರುವ ಮೂರು ದಿನಗಳ ಕಾಲ ಮಂಡ್ಯ ಕನ್ನಡಾಭಿಮಾನಿಗಳನ್ನು ಆದರದಿಂದ ಸ್ವಾಗತಿಸಲು ಅಕ್ಷರಶಃ ಸಜ್ಜಾಗಿದೆ.

ಯಾರೊಬ್ಬರಿಗೂ ತೊಂದರೆಯಾಗದಂತೆ ನೋಡಿಕೊಳ್ಳಲು ಪೊಲೀಸ್‌ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ. ಮಂಡ್ಯದ ಸುತ್ತ ಮುತ್ತಲಿನ ಜಿಲ್ಲೆಗಳು ಹಾಗೂ ಬೆಂಗಳೂರಿನಿಂದ ಆಗಮಿಸಲಿರುವ ಸಾಹಿತ್ಯಾಭಿಮಾನಿಗಳಿಗಾಗಿ ವಿಶೇಷ ಬಸ್… pic.twitter.com/f3IcqjyYDn

— N Chaluvarayaswamy (@NCheluvarayaS) December 19, 2024

ಮಂಡ್ಯಕ್ಕೆ ಆಗಮಿಸುತ್ತಿದ್ದಂತೆ ಸಚಿವ ಎನ್. ಚಲುವರಾಯಸ್ವಾಮಿ (Chaluvaraya Swamy), ಶಾಸಕರಾದ ಗಣಿಗ ಪಿ.ರವಿಕುಮಾರ್, ರಮೇಶ್ ಬಂಡಿಸಿದ್ದೇಗೌಡ, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ, ಡಿಸಿ ಡಾ. ಕುಮಾರ್‌ ಅವರು ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಿದರು. ಇದೇ ವೇಳೆ ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ಬಳಿಕ ಚನ್ನಬಸಪ್ಪನವರು ಡಿಸಿ ಡಾ.ಕುಮಾರ್ ನಿವಾಸಕ್ಕೆ ತೆರಳಿದರು.

ChaluvarayaSwamy 3

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮ್ಮೇಳನಾಧ್ಯಕ್ಷ ಗೊ.ರು ಚನ್ನಬಸಪ್ಪ, ಕನ್ನಡ ತವರು ನೆಲದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಖುಷಿ ತಂದಿದೆ. ಮಂಡ್ಯದಲ್ಲಿ ಕನ್ನಡ ಭಾಷೆ ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಿಲ್ಲ. ಆದ್ರೆ ಕನ್ನಡ ಹಲವು ಸಮಸ್ಯೆಗಳನ್ನ ಎದುರಿಸುತ್ತಿದೆ. ಇದರ ಬಗ್ಗೆ ಚಿಂತನೆ ಆಗಬೇಕು. ಆಧುನಿಕತೆಯ ಪ್ರಭಾವ ಕನ್ನಡದ ಮೇಲಿನ ಅಭಿಮಾನ ಕಡಿಮೆಯಾಗಲು ಕಾರಣ ಎಂದರು.

ChaluvarayaSwamy 2

ಮಂಡ್ಯ ಜನರ ಪ್ರೀತಿ ವಿಶ್ವಾಸ ಕಂಡು ಕಣ್ತುಂಬಿಕೊಂಡಿದ್ದೇನೆ. ಎಲ್ಲ ಕಾರ್ಯಕಲಾಪದಲ್ಲಿ ಕನ್ನಡ ಬಂಧುಗಳು ಭಾಗವಹಿಸಬೇಕು. ನನ್ನನ್ನ ಪ್ರೀತಿಯಿಂದ ಆಯ್ಕೆ ಮಾಡಿದ್ದಾರೆ. ಇಂತಹ ಉತ್ಸವದಲ್ಲಿ ಅಧ್ಯಕ್ಷ ಸ್ಥಾನ ಅಲಂಕರಿಸುವುದು ಹೆಮ್ಮೆಯ ವಿಚಾರ, ನಿಜಕ್ಕೂ ತುಂಬಾ ಸಂತೋಷವಾಗಿದೆ. ಈ ಬಾರಿ ಸಮಕಾಲಿನ ಸಮಸ್ಯೆ ಬಗ್ಗೆ ಗೋಷ್ಠಿಗಳು ನಡೆಯಲಿವೆ. ನಾನು ಅಧ್ಯಕ್ಷನಾಗಿ ಮಾಡುವುದು ಏನು ಇಲ್ಲ. ಕಸಾಪ ಅಧ್ಯಕ್ಷರು ಕೇಳಿದರೆ ಸಲಹೆ ಕೊಡಬಹುದು ಎಂದು ನುಡಿದರು.

ಶುಕ್ರವಾರದಿಂದ ಮಂಡ್ಯದಲ್ಲಿ 87ನೇ ನುಡಿ ಜಾತ್ರೆ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಸಜ್ಜಾಗಿದೆ. ಮೂರು ದಶಕಗಳ ಬಳಿಕ ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನ ಸಕಲ ಸಿದ್ಧತೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತೊಡಗಿದೆ.

ಮಂಡ್ಯದ ಹೊರ ವಲಯದಲ್ಲಿರುವ ಸ್ಯೋಂಜೋ ಆಸ್ಪತ್ರೆಯ ಹಿಂಭಾದ 130 ಎಕರೆ ಪ್ರದೇಶದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಲೇ 80 ಎಕರೆ ಪ್ರದೇಶದಲ್ಲಿ 3 ವಿವಿಧ ವೇದಿಕೆಗಳ ನಿರ್ಮಾಣ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂ ಮಾದರಿಯಲ್ಲಿ ಪ್ರಧಾನ ವೇದಿಕೆಯ ಮುಖ್ಯ ದ್ವಾರ ಸಿದ್ಧಪಡಿಸಿದ್ದು ನೋಡುಗರ ಗಮನ ಸೆಳೆಯುತ್ತಿದೆ. ಪ್ರಧಾನ ವೇದಿಕೆಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರು ಇಡಲಾಗಿದೆ. ಇಲ್ಲಿ 50,000ಕ್ಕೂ ಅಧಿಕ ಮಂದಿ ಕೂರಲು ಆಸಗಳ ವ್ಯವಸ್ಥೆ ಮಾಡಲಾಗಿದೆ. ಮಳೆ ಹಾಗೂ ಬಿಸಿಲಿನಿಂದ ರಕ್ಷಣೆಗಾಗಿ ಜರ್ಮನ್ ಟೆಂಟ್ ಹಾಕಲಾಗಿದೆ. ವೇದಿಕೆ ಸೇರಿ ಪ್ರೇಕ್ಷಕರ ಗ್ಯಾಲರಿಯಲ್ಲಿ ಕನ್ನಡ ಬಾವುಟಗಳು ರಾರಾಜಿಸುತ್ತಿವೆ.

ಇನ್ನೂ ಸಾಹಿತ್ಯಾಸಕ್ತರಿಗಾಗಿ 450 ಪುಸ್ತಕ ಮಳಿಗೆಗಳು ನಿರ್ಮಾಣವಾಗಿದ್ದು, 350ಕ್ಕೂ ಹೆಚ್ಚು ವಾಣಿಜ್ಯ ಸ್ಟಾಲ್‌ಗಳು ರೆಡಿಯಾಗಿವೆ. ಸಾಹಿತ್ಯ ಸಮ್ಮೇಳನಕ್ಕೆ ರಂಗು ತರಲು ಮಂಡ್ಯ ನಗರದಲ್ಲಿ ದಸರಾ ಮಾದರಿಯ ದೀಪಾಲಂಕಾರವನ್ನು ಸಹ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಮ್ಮೇಳನದ ಅಧ್ಯಕ್ಷ ಗೋ.ರು.ಚನ್ನಬಸಪ್ಪ ಅವರನ್ನು ಸುಮಾರು 6 ಕಿಮೀ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ಸಮ್ಮೇಳದ ವೇದಿಕೆಗೆ ಕರೆಯಲಾಗುತ್ತದೆ. ನಂತರ ಸಿಎಂ ಸಿದ್ದರಾಮಯ್ಯ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

Mandya Police

4,000 ಪೊಲೀಸ್ ಭದ್ರತೆ
ಮೂರು ದಿನಗಳ ಕನ್ನಡ ನುಡಿ ಜಾತ್ರೆ ಉತ್ಸವಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ದಕ್ಷಿಣ ವಲಯ ಡಿಐಜಿ ಡಾ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 14 ಜಿಲ್ಲೆಗಳಿಂದ ಸುಮಾರು 4,000 ಅಧಿಕಾರಿಗಳು ಹಾಗೂ ಸಿಬ್ಬಂದಿ ಭದ್ರತೆಗೆ ನೇಮಕ ಮಾಡಲಾಗಿದೆ. ಎಸ್ಪಿ 4, ಎಎಸ್ಪಿ 6, ಡಿವೈಎಸ್‌ಪಿ 21, ಪಿಐ 63, ಪಿಎಸ್‌ಐ 190, ಎಎಸ್‌ಐ 215, ಪಿಸಿ 1700, ಮಹಿಳಾ ಪೇದೆ 165, ಗೃಹರಕ್ಷಕ ದಳ 1,000, ಕೆಎಸ್ಆರ್‌ಪಿ 12, ಡಿಎಆರ್ 13 ನಿಯೋಜಿಸಲಾಗಿದೆ.

TAGGED:87th Kannada Sahitya SammelanaChaluvaraya SwamyGo.Ru Channabasappamandyaಕನ್ನಡ ಸಾಹಿತ್ಯ ಸಮ್ಮೇಳನಗೊ.ರು ಚನ್ನಬಸಪ್ಪಚಲುವರಾಯಸ್ವಾಮಿಮಂಡ್ಯಮಂಡ್ಯ ಪೊಲೀಸ್
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
2 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
6 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
1 day ago

You Might Also Like

vijay mallya k.l.rahul
Cricket

ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

Public TV
By Public TV
1 hour ago
BMTC bus hits metro pillar more than 10 injured in Bengaluru
Bengaluru City

ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾದ ಬಿಎಂಟಿಸಿ ಬಸ್ – 10ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
1 hour ago
Narendra Modi in Fintech Fest 2024
Latest

`ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಸದಾ ಕಾಡಲಿದೆ: ಮೋದಿ

Public TV
By Public TV
3 hours ago
Vijay Mallya
Cricket

‘ಎಣ್ಣೆ’ ಪ್ರಚಾರಕ್ಕಾಗಿ ಆರ್‌ಸಿಬಿ ಖರೀದಿಸಿದೆ: RCB ಬಗ್ಗೆ ವಿಜಯ್‌ ಮಲ್ಯ ಹೇಳಿದ್ದೇನು?

Public TV
By Public TV
3 hours ago
Money 1
Crime

50 ಸಾವಿರ ಸರ್ಕಾರಿ ನೌಕರರಿಗೆ 6 ತಿಂಗಳಿಂದ ವೇತನವೇ ಇಲ್ಲ – 230 ಕೋಟಿ ವಂಚನೆ!

Public TV
By Public TV
4 hours ago
Bilawal Bhutto Zardari
Latest

ಹಫೀಜ್ ಅಬ್ದುರ್ ರೌಫ್ ಉಗ್ರನಲ್ಲ, ಧರ್ಮಗುರು – ವಿಶ್ವಸಂಸ್ಥೆಯಲ್ಲಿ ಪಾಕ್‌ ಮಾಜಿ ಸಚಿವನ ಮೊಂಡುವಾದ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?