ನೆಲಮಂಗಲ: ಕನ್ನಡ ಪರ ಸಂಘಟನೆಗಳು ‘ತುಕ್ಡೆ ಗ್ಯಾಂಗ್’ ಎಂದ ಸಚಿವ ಸಿ.ಟಿ ರವಿ ವಿರುದ್ಧ ಕನ್ನಡ ಸಂಘಟನೆಗಳು ತಿರುಗಿಬಿದ್ದಿವೆ.
ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಪ್ರವಾಸಿ ಮಂದಿರದ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡರ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವ ಸಿ.ಟಿ ರವಿ ವಿರುದ್ಧ ಘೋಷಣೆಗಳನ್ನು ಕೂಗಿ ಸಚಿವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಪ್ರತಿಭಟಿದ್ದಾರೆ. ಅಲ್ಲದೆ ಈ ಕೂಡಲೇ ರಾಜೀನಾಮೆ ಕೊಟ್ಟು ಕನ್ನಡ ಸಂಘಟನೆಗಳ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ.
ಕನ್ನಡ ಪರ ಸಂಘಟನೆಗಳು ನಾಡು ನುಡಿ ವಿಚಾರದಲ್ಲಿ ಹಾಗೂ ಜನಸಾಮಾನ್ಯರ ಕುಂದುಕೊರತೆಗಳಿಗೆ ನ್ಯಾಯ ಒದಗಿಸಲು ಸಾಕಷ್ಟು ಹೋರಾಟದ ರೂಪದಲ್ಲಿ ಶ್ರಮಿಸಲಾಗುತ್ತಿದೆ. ಹೀಗಿರುವಾಗ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರ ಈ ಮಾತಿನಿಂದ ಕನ್ನಡಕ್ಕೆ ಅಪಮಾನವಾಗಿದೆ. ಹೀಗಾಗಿ ಕೂಡಲೇ ಸಚಿವ ಸಿಟಿ.ರವಿಯವರು ರಾಜೀನಾಮೆ ನೀಡಿ ಕನ್ನಡಿಗರ ಕ್ಷಮೆ ಕೇಳಬೇಕೆಂದು ನೆಲಮಂಗಲ ತಾಲೂಕು ಕರವೇ ಅಧ್ಯಕ್ಷ ಸುರೇಶ್ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ರೆಹಮಾನ್, ಯಶವಂತ್, ಉಮೇಶ್, ಶ್ರೀನಿವಾಸ್, ರವಿ ಇನ್ನಿತರ ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.