Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಾರಿಗೆ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಾರಿಗೆ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ

Bengaluru City

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಾರಿಗೆ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನ

Public TV
Last updated: August 23, 2021 8:10 pm
Public TV
Share
3 Min Read
METRO KANNDA
SHARE

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಾರಿಗೆ ವಲಯದಲ್ಲಿ ಕನ್ನಡ ಬಳಕೆ ಜಾಗೃತಿ ಅಭಿಯಾನಕ್ಕೆ ಶಾಂತಿನಗರದಲ್ಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕರ ಕಚೇರಿಯಲ್ಲಿ ಇಂದು ಚಾಲನೆ ನೀಡಲಾಯಿತು.

METRO KANNDA 1

ಶಾಂತಿನಗರದಲ್ಲಿರುವ ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕರ ಕಚೇರಿಯಲ್ಲಿ ಚಾಲನೆ ನೀಡಿದ ಬಳಿಕ ಬೈಯಪ್ಪನಹಳ್ಳಿಯಲ್ಲಿರುವ ಮೆಟ್ರೋ ಆಡಳಿತ ಕಚೇರಿಗೂ ಭೇಟಿ ನೀಡಲಾಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಮೆಟ್ರೋ ಸಂಸ್ಥೆಯಲ್ಲಿ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆಗಬೇಕಾದ ಕಾರ್ಯಗಳು ಹಾಗೂ ಹಕ್ಕೋತ್ತಾಯ ಪತ್ರಗಳನ್ನು ಬಿ.ಎಂ.ಆರ್.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಬೈಯಪ್ಪನಹಳ್ಳಿಯಲ್ಲಿರುವ ಮೆಟ್ರೋ ಆಡಳಿತ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸಲ್ಲಿಸಲಾಯಿತು. ಇದನ್ನೂ ಓದಿ: ಕನ್ನಡ ಭಾಷಾ ಕಲಿಕೆ ಪರಿಣಾಮಕಾರಿ ಅನುಷ್ಠಾನವಾಗಲಿ – ಶಿಕ್ಷಣ ಸಚಿವರಿಗೆ ಮನವಿ

METRO KANNADA 1

ಮೆಟ್ರೋ ನಿಲ್ದಾಣಗಳಲ್ಲಿ ಕನ್ನಡ ಪುಸ್ತಕ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡುವುದು. ಸಾರ್ವಜನಿಕ ದೂರುಗಳು, ಸಲಹೆಗಳ ನಮೂನೆಗಳು ಮತ್ತು ಅರ್ಜಿಗಳು ಕನ್ನಡದಲ್ಲಿರಬೇಕು. ನಿಲ್ದಾಣಗಳಲ್ಲಿ ಮತ್ತು ಕಚೇರಿಗಳಲ್ಲಿ ನಿರ್ವಹಣೆ ಮಾಡುವ ದಾಖಲಾತಿ ಪುಸ್ತಕಗಳನ್ನು ಕನ್ನಡದಲ್ಲಿ ನಿರ್ವಹಣೆ ಮಾಡುವುದು. ಸಂಸ್ಥೆ ನೀಡುವ ಗುರುತಿನ ಚೀಟಿಯಲ್ಲಿ ಕನ್ನಡ ಭಾಷೆ ಬಳಸುವುದು. ಮಾನವ ಸಂಪನ್ಮೂಲ ಕೇಂದ್ರ ಕಚೇರಿಯ ಉದ್ಯೋಗಕ್ಕೆ ಸಂಬಂಧಿಸಿದ ಕಚೇರಿ ಆದೇಶಗಳಲ್ಲಿ ಕನ್ನಡ ಬಳಕೆ ಮಾಡುವುದು. ಮೆಟ್ರೋ ರೈಲುಗಳಲ್ಲಿ ಪ್ರದರ್ಶನಗೊಳ್ಳುವ 31 ಜಿಲ್ಲೆಗಳ ವಿಶೇಷತೆ, ಪ್ರಸಿದ್ಧ ಸ್ಥಳಗಳ ಮಾಹಿತಿ ನಿಲ್ದಾಣಗಳಲ್ಲಿಯೂ ಇರಬೇಕು. ಅಗ್ನಿ ಅವಘಡ ಸೇರಿದಂತೆ ಇತರೆ ತುರ್ತು ಸಂದರ್ಭಗಳ ಬಗ್ಗೆ ಮಾಹಿತಿ ನೀಡುವ ನಾಮಫಲಕಗಳು ಕನ್ನಡದಲ್ಲಿರಬೇಕು. ಕನ್ನಡ ಕಲಿಕಾ ತರಬೇತಿ ಕೇಂದ್ರ ನಿರಂತರವಾಗಿ ನಡೆಸಬೇಕೆಂದು ಮೆಟ್ರೋ ಸಂಸ್ಥೆಗೆ ನೀಡಿದ ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಐರ್ಲೆಂಡ್‍ನಲ್ಲಿದ್ದರೂ ಬಿಡದ ನಂಟು- ಮಕ್ಕಳಿಗೆ ನಿರಂತರ ಕನ್ನಡ ಪಾಠ

KANNADA medium

ಸಾರಿಗೆ ವಲಯದ ಮುಖೇನ ಇಂದು ತೀವ್ರಗತಿಯಲ್ಲಿ ರಾಜ್ಯದ ಹೊರಗಿನ ಜನತೆಯ ಆಗಮನ-ನಿರ್ಗಮನ, ವಲಸೆ ಹೆಚ್ಚುತ್ತಿದೆ. ಸಾರಿಗೆ ವಲಯದಲ್ಲೂ ಕನ್ನಡ ಭಾಷೆಯ ಬಳಕೆ ಕುಂದದೇ ಗಟ್ಟಿಯಾಗಿ ನೆಲೆಯಾಗಬೇಕು. ಟಿಕೆಟ್, ಬಸ್, ಮೆಟ್ರೋದಂತಹ ಬೆರಳೆಣಿಕೆಯ ಪದಗಳನ್ನು ಬಿಟ್ಟರೆ ಉಳಿದ ಕಡೆ ಕನ್ನಡ ಪದಗಳನ್ನು ಬಳಸಬೇಕು. ಈ ಸದುದ್ದೇಶಕ್ಕಾಗಿ ಕನ್ನಡಿಗರೆಲ್ಲರೂ ಬದ್ಧರಾಗಿರಬೇಕು. ಕರ್ನಾಟಕವೆಂದು ನಾಮಕರಣ ಮಾಡಿದ, ಹಿಂದುಳಿದ ವರ್ಗಗಳ ಆಶಾಕಿರಣ, ಉಳುವವನಿಗೆ ಭೂಮಿ ಕೊಡಿಸಿದ, ನಾಡಿನ ಜನಪ್ರಿಯ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮದಿನದ ಸಂದರ್ಭ ಸಾರಿಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಸಾರಿಗೆ ವಲಯ ಅಂದರೆ ಕರಾರಸಾಸಂ(ಕೆಎಸ್‍ಆರ್‍ ಟಿಸಿ), ಬೆಂಮಸಾಸಂ(ಬಿಎಂಟಿಸಿ), ಮೆಟ್ರೋ, ಬೇಂದ್ರೆ ಸಾರಿಗೆ ಮತ್ತು ವಿಮಾನ ನಿಲ್ದಾಣಗಳಲ್ಲಿ ಮೂರು ದಿನಗಳ ಕಾಲ ಕನ್ನಡ ಬಳಕೆ ಜಾಗೃತಿ ಅಭಿಯಾನವನ್ನು ಪ್ರಾಧಿಕಾರವು ಹಮ್ಮಿಕೊಂಡಿದೆ. ಕನ್ನಡನಾಡಿನಲ್ಲಿ ನೆಲೆಸಿದವರು ಕನ್ನಡದಲ್ಲೇ ಮಾತು, ಸಂವಹನ ನಡೆಸುವಷ್ಟು ಕನ್ನಡ ಕಲಿತು, ಮಾತನಾಡಬೇಕು. ಈ ಸದಾಶಯ, ಸದುದ್ದೇಶವೇ ನಮ್ಮ ಹಕ್ಕೊತ್ತಾಯ ಮತ್ತು ಮನವಿ ಎಂದು ಮೆಟ್ರೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಹಕ್ಕೊತ್ತಾಯ ಹಾಗೂ ಮನವಿ ಪತ್ರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಲ್ಲಿಸಲಾಯಿತು.

METRO KANNADA

ಇದೇ ಸಂದರ್ಭದಲ್ಲಿ ಮೆಟ್ರೋ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಮ್ ಪರ್ವೇಜ್ ಅವರು ನಮ್ಮ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿರುವ ಅನ್ಯರಾಜ್ಯದ ಸಿಬ್ಬಂದಿ ಕನ್ನಡ ಕಲಿಯಲು ಉತ್ಸುಕರಾಗಿದ್ದು, ಇವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಕನ್ನಡ ತರಬೇತಿ ಶಿಬಿರ ಅಥವಾ ಜಾಲತಾಣ ಕನ್ನಡ ಕಲಿಕೆ ಕುರಿತು . ಪೋರ್ಟಲ್‍ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಮಾಡಿದರು.

ಬೈಯಪ್ಪನಹಳ್ಳಿ ಮೆಟ್ರೋ ಆಡಳಿತ ಕಚೇರಿಯ ಎಲ್ಲ ವಿಭಾಗಗಳಿಗೂ ಭೇಟಿ ನೀಡಿ ಮೆಟ್ರೋ ರೈಲಿನ ಒಳಭಾಗದಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕದ ವಿಶೇಷತೆಗಳ ಪ್ರದರ್ಶನ, ಕನ್ನಡದ ದಿಕ್ಸೂಚಿ, ಸೂಚನಾ ಫಲಕಗಳು, ಸಿಬ್ಬಂದಿಯು ಪ್ರಯಾಣಿಕರೊಂದಿಗೆ ಕನ್ನಡದಲ್ಲಿ ವ್ಯವಹರಿಸಲು ಅನುಕೂಲವಾಗುವಂತೆ ತರಬೇತಿ ಕಾರ್ಯಕ್ರಮಗಳು ಹಾಗೂ ತಾಂತ್ರಿಕ ನಲೆಗಟ್ಟಿನಲ್ಲಿ ಕನ್ನಡದ ಬಳಕೆಗೆ ಅನುಕೂಲವಾಗುವಂತೆ ಈಗಾಗಲೇ ಕೈಗೊಂಡಿರುವ ಶ್ಲಾಘನೀಯ ಕ್ರಮಗಳನ್ನು ಪರಿವೀಕ್ಷಿಸಲಾಯಿತು. . ಇದನ್ನೂ ಓದಿ: ಡೇವಿಡ್ ವಾರ್ನರ್ ಕನ್ನಡ ಪ್ರೀತಿಗೆ ಕನ್ನಡಿಗರು ಫಿದಾ

ಈ ಸಂದರ್ಭದಲ್ಲಿ ಬೈಯಪ್ಪನಹಳ್ಳಿಯಲ್ಲಿರುವ ಮೆಟ್ರೋ ಆಡಳಿತ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎ.ಎಸ್.ಶಂಕರ್, ಕನ್ನಡ ಕೋಶ ಬೆಂಗಳೂರು ಮೆಟ್ರೋ ಮುಖ್ಯಸ್ಥರಾದ ಮಧುಶ್ರೀ, ಮೆಟ್ರೋ ಸಾರ್ವಜನಿಕಾ ಸಂಪರ್ಕಾಧಿಕಾರಿ ಭಾರತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಡಾ.ಸಂತೋಷ ಹಾನಗಲ್ಲ ಮತ್ತಿತರರು ಹಾಜರಿದ್ದರು.

TAGGED:buskannadalanguagemetroPublic TVtrainಕನ್ನಡಕನ್ನಡ ಅಭಿವೃದ್ಧಿ ಪ್ರಾಧಿಕಾರಪಬ್ಲಿಕ್ ಟಿವಿಬಸ್ಭಾಷೆಮೆಟ್ರೋರೈಲು
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
3 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
3 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
4 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
4 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
5 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?