‘ಬುದ್ದ’ನಾಗಿ ಬಂದ ಕನ್ನಡದ ಮಹೇಶ್ ಬಾಬು

Public TV
1 Min Read
FotoJet 1 31

ತ೯ನ್ ಪಿಕ್ಚರ್ಸ್ ಲಾಂಛನದಲ್ಲಿ ಸುರೇಶ್ ಭಾರದ್ವಾಜ್ ಕನಕಪುರ ನಿರ್ಮಿಸುತ್ತಿರುವ, ರಾಮ್ ಪೆರಿಯಸಾಮಿ ನಿರ್ದೇಶನದಲ್ಲಿ ಮಹೇಶ್ ಬಾಬು ಹಾಗೂ ವಿದ್ಯಾರಾಜ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ “ಬುದ್ದ” ಚಿತ್ರದ ಫಸ್ಟ್ ಲುಕ್ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರದ  ಫಸ್ಟ್ ಲುಕ್ ಕನ್ನಡ ಜನತೆಯ ಮೆಚ್ಚುಗೆಯನ್ನು ಗಳಿಸಿದೆ. ಎಂಜಿನಿಯರಿಂಗ್ ವ್ಯಾಸಂಗ ಮಾಡಿ, ಅಭಿನಯದ ಬಗ್ಗೆ ತರಭೇತಿ ಪಡೆದಿರುವ ಮಹೇಶ್ ಬಾಬು ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ.

FotoJet 3 24

ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕಾಶಿಯಲ್ಲಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾಡುವ ಯೋಜನೆಯಿದೆ. “ಬುದ್ದ” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಎಲ್ಲಾ ಚಿತ್ರದಲ್ಲಿ ಕಳೆದು ಹೋದವರನ್ನು ನಾಯಕ ಹುಡುಕಿ ಕೊಡುತ್ತಾನೆ. ಈ ಚಿತ್ರದ ಕಥೆಯಲ್ಲಿ ನಾಯಕನೆ ಕಳೆದು ಹೋಗುತ್ತಾನೆ. ಮುಂದೇನು? ಎಂಬುದೆ ಕುತೂಹಲ. ಎಂದು ಚಿತ್ರದ ಕಥೆಯ ತಿರುಳನ್ನು ಹೇಳಿರುವ ನಾಯಕ ಮಹೇಶ್ ಬಾಬು, ಇದೊಂದು ಕೌಟುಂಬಿಕ ಚಿತ್ರ ಎನ್ನುತ್ತಾರೆ. ಇದನ್ನೂ ಓದಿ: ಪ್ರೇಮಿಗಳ ದಿನದಂದು ಪತ್ನಿಗೆ ರೊಮ್ಯಾಂಟಿಕ್ ಆಗಿ ನಿರ್ಮಾಪಕ ರವೀಂದ್ರ ವಿಶ್

FotoJet 2 33

ಚಿತದಲ್ಲಿ ಐದು ಹಾಡುಗಳಿದೆ. ಒಂದು ಹಾಡನ್ನು ಡಾ||ವಿ.ನಾಗೇಂದ್ರ ಪ್ರಸಾದ್, ನಾಲ್ಕು ಹಾಡುಗಳನ್ನು ಚೇತನ್ ಕುಮಾರ್ ಬರೆಯತ್ತಿದ್ದಾರೆ. ರಾಘವೇಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ನಾಗ ಶೆಟ್ಟಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಮಹೇಶ್ ಬಾಬು, ವಿದ್ಯಾರಾಜ್, ರಾಮಕೃಷ್ಣ (ತಮಿಳು), ತಬಲನಾಣಿ, ಸಿದ್ಲಿಂಗು ಶ್ರೀಧರ್, ಅರುಣಾ ಬಾಲರಾಜ್ ಮುಂತಾದವರು ಈ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟಿ ಪವಿತ್ರ ಲೋಕೇಶ್ ಅವರು ಸಹ ಎರಡನೇ ಹಂತದಲ್ಲಿ ನಟಿಸುವ ಸಾಧ್ಯತೆಯಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *