Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

Bengaluru City

ದೇಶಕ್ಕೆ ಕನ್ನಡಿಗರ ಕೊಡುಗೆ ಅಪಾರ: ಬೊಮ್ಮಾಯಿ

Public TV
Last updated: May 28, 2022 6:30 pm
Public TV
Share
3 Min Read
CM Basavaraja Bommai
SHARE

ಬೆಂಗಳೂರು: ಕನ್ನಡಿಗರು ಪ್ರಗತಿಪರ ಚಿಂತಕರು. ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ದೇಶಕ್ಕೆ ಕನ್ನಡಿಗರ ಕೊಡುಗೆ ಬಹಳಷ್ಟಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ಬೊಮ್ಮಾಯಿ ಅವರು ಇಂದು ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ’ವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ಪರಂಪರೆಯ ಮೂಲಕ ಭಾರತ ಪರಂಪರೆಗೆ ನಾಂದಿ ಹಾಡಬೇಕಿದೆ. ನವಕರ್ನಾಟಕದಿಂದ ನವಭಾರತ ನಿರ್ಮಾಣದ ಚಿಂತನೆಯನ್ನು ಸರ್ಕಾರ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾದ ಭಾರತದ 5 ಟ್ರಿಲಿಯನ್ ಆರ್ಥಿಕತೆಯಲ್ಲಿ ಕರ್ನಾಟಕದ ಕೊಡುಗೆ ದೊಡ್ಡ ಪ್ರಮಾಣದಲ್ಲಿದೆ. ದೂರದೃಷ್ಟಿಯ ಚಿಂತನೆಯಿಂದ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಜನರಿಗೆ ಸಿದ್ದರಾಮಯ್ಯ ಅವಶ್ಯಕತೆ ಇದೆ, ಅವರೇ ಸಿಎಂ ಆಗಬೇಕು: ಬೈರತಿ ಸುರೇಶ್ 

ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡಿನ ಅಪೂರ್ವ ಕೊಡುಗೆ
ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ 75 ವರ್ಷ ಮಹತ್ವದ ಕಾಲಘಟ್ಟ. ಸ್ವಾತಂತ್ರ್ಯ ಪೂರ್ವದಲ್ಲಿ ಹುಟ್ಟಿದವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಮಡಿದವರಿದ್ದಾರೆ. ರಾಜರಿಂದ ಪ್ರಾರಂಭವಾದ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳಲ್ಲಿ ಸ್ವಾತಂತ್ರ್ಯ ಚಳುವಳಿಯ ರೂಪ ಪಡೆಯಿತು.

ಇಂದು ಬೆಂಗಳೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ "ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನ"ವನ್ನು ಉದ್ಘಾಟಿಸಿ ಮಾತನಾಡಿದೆನು.#ಅಮೃತಭಾರತಿಗೆಕನ್ನಡದಾರತಿ pic.twitter.com/bR7RfDz2nk

— Basavaraj S Bommai (@BSBommai) May 28, 2022

1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ, ಕರ್ನಾಟಕದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಎದೆಗಾರಿಕೆ ಇದೆಯೆಂಬುದನ್ನು ನಿರೂಪಿಸಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡ ನಾಡು ಅಪೂರ್ವ ಕೊಡುಗೆ ನೀಡಿದೆ. ಮೈಲಾರ ಮಾಹದೇವಪ್ಪ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.

ತ್ಯಾಗಬಲಿದಾನಗಳ ನಂತರ ದೊರೆತ ಸ್ವತಂತ್ರ ದೇಶದ ಏಕತೆ, ಅಖಂಡತೆ ಕಾಯ್ದುಕೊಂಡು ಪ್ರಬಲ ಹಾಗೂ ಸಶಕ್ತ ರಾಷ್ಟ್ರ ನಿರ್ಮಾಣದ ಚಿಂತನೆ ಎಲ್ಲ ಭಾರತೀಯರಲ್ಲಿ ಇರಬೇಕು ಎಂದು ಕರೆ ಕೊಟ್ಟರು.

CM Basavaraja Bommai

ಎಲ್ಲರಿಗೂ ಸ್ವಾಭಿಮಾನ, ಸಮಾನತೆಯ ಬದುಕು ನೀಡುವ ಸ್ವತಂತ್ರ ಭಾರತ ವಿಶ್ವಮಾನ್ಯ ರಾಷ್ಟ್ರವಾಗಿದೆ. ಸಾವಿರ ವರ್ಷಗಳಿಂದ ಮೊಘಲರು, ಬ್ರಿಟೀಷರ ಆಕ್ರಮಣದಲ್ಲಿ ಸ್ವಾಭಿಮಾನವನ್ನು ಅದುಮಿಟ್ಟು ಬದುಕುವ ಪರಿಸ್ಥಿತಿಯಿಂದ ಸ್ವಾತಂತ್ರ್ಯ ದೊರಕಿದೆ. ದೇಶದ ಜನರೆಲ್ಲರೂ ಒಗ್ಗಟ್ಟಾಗಬೇಕು. ಮೋದಿ ಅವರು ಬಲಿಷ್ಟ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದರು.

ಜನರ ಏಳಿಗೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು 25 ವರ್ಷಗಳ ಅಮೃತ ಕಾಲ ಮಾಡಬೇಕೆಂದು ಕರೆ ನೀಡಿದರು. ಒಬ್ಬ ಮುತ್ಸದ್ದಿಯ ಕಣ್ಣು ಮುಂದಿನ ಜನಾಂಗದ ಮೇಲಿರುತ್ತದೆ. ನಾವು ಹುಟ್ಟಿದ ಜನ್ಮಭೂಮಿ ಶ್ರೇಷ್ಠ ಭಾರತವಾಗಬೇಕೆಂಬ ಗುರಿಯನ್ನು ಹೊಂದಿರುವ ನಾಯಕ ಮೋದಿ ಅವರು ಎಂದು ಪ್ರಶಂಸಿದರು.

ವೀರ್ ಸಾವರ್ಕರ್ ದಿಟ್ಟ, ಧೀಮಂತ ನಾಯಕ
ಮೊದಲನೇ ಸ್ವಾತಂತ್ರ್ಯ ಹೋರಾಟವನ್ನು ಲೋಕಮಾನ್ಯ ತಿಲಕ, ವೀರಸಾವರ್ಕರ್ ಅವರಿಂದ ಪ್ರಾರಂಭವಾಯಿತು. ವೀರ್ ಸಾವರ್ಕರ್ 1883ರ ಜೂನ್ 28 ರಲ್ಲಿ ಜನಿಸಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿನ ಕಾರಾಗೃಹದಲ್ಲಿ ಕಾಲಾಪಾನಿ ಶಿಕ್ಷೆಯನ್ನು ಅನುಭವಿಸಿದ್ದರು.

ದೇಶಕ್ಕಾಗಿ ತ್ಯಾಗ ಮಾಡಲು ಸಿದ್ಧರಾಗಿದ್ದ ವೀರ್ ಸಾವರ್ಕರ್ ಅವರು ದಿಟ್ಟ, ಧೀಮಂತ ನಾಯಕರಾಗಿದ್ದರು. ಸ್ವಾತಂತ್ರ್ಯ ನನ್ನ ಜನ್ಮಸಿದ್ಧ ಹಕ್ಕು ಎಂದ ಲೋಕಮಾನ್ಯ ತಿಲಕರ ಚಿಂತನೆ, ಯೋಚನಾಶಕ್ತಿ ವಿಶಿಷ್ಟವಾದುದಾಗಿತ್ತು. ಸ್ವಾತಂತ್ರ್ಯ ಹೊರತುಪಡಿಸಿ, ಮಿಕ್ಕೆಲ್ಲವೂ ನಗಣ್ಯ ಎಂದ ಈ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ನನ್ನ ಪ್ರಥಮ ನಮಸ್ಕಾರಗಳು ಎಂದು ನಮಿಸಿದರು. ಇದನ್ನೂ ಓದಿ:  ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು 

CM Basavaraja Bommai 1

ಮಹನೀಯರ ಚಿಂತನೆ, ತ್ಯಾಗದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ
ಲಾಹೋರ್‌ನಲ್ಲಿ ಲಾಲ್ ಲಜಪತ್ ರಾಯ್ ನೇತೃತ್ವದಲ್ಲಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ವೇಗ ದೊರಕಿತು. ಇದೇ ಹಾದಿಯಲ್ಲಿ ಭಗತ್ ಸಿಂಗ್, ಚಂದ್ರಶೇಖರ್ ಅಜಾದ್ ನಡೆದರು. ಈ ಹೋರಾಟಕ್ಕೆ ಅಂತರರಾಷ್ಟ್ರೀಯ ಸ್ವರೂಪವನ್ನು ಸುಭಾಷ್ ಚಂದ್ರ ಬೋಸರು ನೀಡಿದರು. ಈ ಎಲ್ಲ ಹೋರಾಟಕ್ಕೆ ಆಧ್ಯಾತ್ಮಿಕ ಶಕ್ತಿಯನ್ನು ಸ್ವಾಮಿ ವಿವೇಕಾನಂದರು ತುಂಬಿದರು ಎಂದು ಸ್ಪೂರ್ತಿ ತುಂಬಿ ಮಾತನಾಡಿದರು.

ಹಲವಾರು ಮಹನೀಯರ ಚಿಂತನೆ, ಹೋರಾಟ ತ್ಯಾಗದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಮಹಾತ್ಮಾ ಗಾಂಧಿ ಅವರಿಂದ ಸ್ಪೂರ್ತಿ ಹೊಂದಿ ಸಹಸ್ರಾರು ದೇಶಭಕ್ತರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ. ಇಂತಹ ಅನೇಕ ಮಹನೀಯರು ದೇಶಕ್ಕಾಗಿ ತ್ಯಾಗ ಮಾಡಿದವರಿಗೆ ನನ್ನ ನಮಸ್ಕಾರಗಳು ಎಂದರು.

ಬ್ರಿಟಿಷರು ವಿರುದ್ಧ ದುಡಿಯುವ ವರ್ಗದ ಹೋರಾಟ
ಮಹಾತ್ಮಾಗಾಂಧಿ ಅವರ ಸ್ವದೇಶಿ ಚಳುವಳಿಯಲ್ಲಿ ಮಹಿಳೆಯರೂ ಪಾಲ್ಗೊಂಡರು. ಕ್ವಿಟ್ ಇಂಡಿಯಾ ಚಳುವಳಿ, ಬಾರ್ಡೋಲಿಯಲ್ಲಿ ರೈತರ ಸತ್ಯಾಗ್ರಹ, ಪಶ್ಚಿಮ ಬಂಗಾಳದಲ್ಲಿ ಇಂಡಿಗೋ ಚಳವಳಿಗಳ ಮೂಲಕ ದುಡಿಯುವ ವರ್ಗ ಬ್ರಿಟಿಷರು ವಿರುದ್ಧ ನಡೆಸಿದ ಹೋರಾಟವನ್ನು ಸಿಎಂ ಸ್ಮರಿಸಿದರು.

TAGGED:britishCM Basavaraj BommaiIndependenceKannada heritageKannadigaruಕನ್ನಡ ಪರಂಪರೆಕನ್ನಡಿಗರುಬ್ರಿಟಿಷರುಸಿಎಂ ಬಸವರಾಜ ಬೊಮ್ಮಾಯಿಸ್ವಾತಂತ್ರ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
3 minutes ago
Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
1 hour ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
1 hour ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
3 hours ago
Karnataka Second PUC Exam
Bengaluru City

ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿ – 96.87% ಹಾಜರಾತಿ ದಾಖಲು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?