ಚಿಕ್ಕಬಳ್ಳಾಪುರ: ಚೀನಾದಲ್ಲಿ ಸಾವಿರಾರು ಮಂದಿಯನ್ನು ಬಲಿ ಪಡೆದುಕೊಂಡ ಕೊರೊನಾ ವೈರಸ್ ಭೀತಿಯಿಂದ 10 ಮಂದಿ ಕನ್ನಡಿಗರು ಚೀನಾದಿಂದ ಕರ್ನಾಟಕಕ್ಕೆ ವಾಪಾಸ್ಸಾಗಿದ್ದಾರೆ.
ಜಿಲ್ಲೆಯ ಶಿಡ್ಡಘಟ್ಟ ಪಟ್ಟಣದ ದಂಪತಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ, ಶಿಡ್ಲಘಟ್ಟ ತಾಲೂಕಿನ ಇ ತಿಮ್ಮಸಂದ್ರ ಗ್ರಾಮದ ನಾಲ್ವರು ಸೇರಿದಂತೆ ಚಿಕ್ಕಬಳ್ಳಾಪುರ ತಾಲೂಕು ಪೇರೇಸಂದ್ರ ಗ್ರಾಮದ ಮೆಡಿಕಲ್ ವಿದ್ಯಾರ್ಥಿನಿ ಹಾಗೂ ತಿಮ್ಮನಹಳ್ಳಿ ಗ್ರಾಮದ ಮೆಡಿಕಲ್ ವಿದ್ಯಾರ್ಥಿಯೊರ್ವ ರಾಜ್ಯಕ್ಕೆ ವಾಪಾಸ್ಸಾಗಿದ್ದಾರೆ.
ತವರಿಗೆ ವಾಪಾಸ್ಸಾದ ಹಿನ್ನೆಲೆಯಲ್ಲಿ 10 ಮಂದಿಯ ಮೇಲೆ ಆರೋಗ್ಯ ಇಲಾಖಾಧಿಕಾರಿಗಳು ತೀವ್ರ ನಿಗಾ ವಹಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರತಿನಿತ್ಯ ಅವರ ಆರೋಗ್ಯದ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಳು ತಿಳಿಸಿದ್ದಾರೆ.
ಸದ್ಯ ಚೀನಾದಿಂದ ವಾಪಾಸ್ಸಾದ 10 ಮಂದಿಗೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಲ್ಲರೂ ಆರೋಗ್ಯವಾಗಿದ್ದು, ಕೊರೊನಾ ವೈರಸ್ ಸೋಂಕು ತಗುಲಿಲ್ಲ ಎಂದು ಡಿಎಚ್ಒ ಸ್ಪಷ್ಟನೆ ನೀಡಿದ್ದಾರೆ.