ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರು ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್ನಲ್ಲಿ (Chhatrapati Shivaji Maharaj) ನಟಿಸೋದಾಗಿ ಅನೌನ್ಸ್ ಮಾಡಿದ ಬೆನ್ನಲ್ಲೇ ತೀವ್ರ ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿದೆ. ಕರ್ನಾಟಕದ ಪಾಲಿಗೆ ಶಿವಾಜಿ ದಾಳಿಕೋರ, ಕರ್ನಾಟಕಕ್ಕೆ ಶಿವಾಜಿ ಕೊಡುಗೆ ಏನು ಅಂತ ಪ್ರಶ್ನಿಸಿ ಫ್ಯಾನ್ಸ್ ರಿಷಬ್ ಶೆಟ್ಟಿಗೆ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ:ದರ್ಶನ್ ಸೂಚನೆ ಮೇರೆಗೆ ಕಿಡ್ನಾಪ್ – ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ: ವಕೀಲರ ವಾದ
ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು , ಕುಮಟಾ ವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ.
ನಮ್ಮೂರಿನ… pic.twitter.com/Yd8n9ppssg
— Kiran Kodlady | ಕಿರಣ್ ಕೊಡ್ಲಾಡಿ (@kodlady) December 3, 2024
ಭಾರತದ ಮಹಾನ್ ಯೋಧ, ರಾಜ ಶಿವಾಜಿಯ ಜೀವನಚರಿತ್ರೆಯನ್ನು ತೆರೆಗೆ ತರುತ್ತಿರುವುದು ನಮ್ಮ ಗೌರವ ಹಾಗೂ ಹೆಮ್ಮೆ. ಇದು ಬರೀ ಸಿನಿಮಾ ಅಲ್ಲ, ದುಷ್ಟರ ವಿರುದ್ಧ ಹೋರಾಡಿ ಮೊಘಲ್ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ವೀರ ಯೋಧನ ಕಥೆ. ತೆರೆಮೇಲೆ ಅದ್ಭುತ ಆ್ಯಕ್ಷನ್ ಡ್ರಾಮಾ ನೋಡಲು ಸಿದ್ಧರಾಗಿ ಎಂದು ರಿಷಬ್ ಸಿನಿಮಾ ಪೋಸ್ಟರ್ ಹಂಚಿಕೊಂಡ ಬೆನ್ನಲ್ಲೇ ಕೆಲ ಕನ್ನಡಿಗರಿಂದ ಅಸಮಾಧಾನ ವ್ಯಕ್ತವಾಗಿದೆ.
ಬಸ್ರೂರಿನ ಮೇಲೆ ದಾಳಿ ಮಾಡಿದ್ದು, ಲೂಟಿ ಮಾಡಲು. ಧನ, ಸಂಪತ್ತನ್ನು ತನ್ನೂರಿಗೆ ಕೊಂಡೊಯ್ಯಲು.
ಪೋರ್ಚಿಗೀಸರ ಜೊತೆ ಕಾದಾಡಲು ಬಂದಿದ್ದರೆ, ಹಬ್ಬದ ದಿನ ರಾತ್ರಿದಾಳಿ ಮಾಡಿ, ಸ್ಥಳೀಯ ವ್ಯಾಪಾರಸ್ಥರನ್ನು ಕೊಳ್ಳೆ ಹೊಡೆಯುವ ಉದ್ದೇಶ ಇರುತ್ತಿರಲಿಲ್ಲ.
ಪೋರ್ಚುಗೀಸರ ಬದಲು ಕೆಳದಿ ನಾಯಕರ ಹಿಡಿತದಲ್ಲಿ ಬಸ್ರೂರು ಇದ್ದಿದ್ದರೂ, ಆ ದಿನ ಶಿವಾಜಿ… pic.twitter.com/jxYvAreAAB
— Kiran Kodlady | ಕಿರಣ್ ಕೊಡ್ಲಾಡಿ (@kodlady) December 3, 2024
ರಿಷಬ್ ಶೆಟ್ಟಿ ಅವರೇ, ನಮ್ಮ ಕುಂದಾಪುರದ ಬಸ್ರೂರು ಒಂದು ಕಾಲದಲ್ಲಿ ಪ್ರಮುಖ ಒಳನಾಡ ಬಂದರಾಗಿತ್ತು ಎಂಬುದು ನಮ್ಮೆಲ್ಲರಿಗೂ ತಿಳಿದಿದೆ. ನಮ್ಮ ಬಸ್ರೂರರನ್ನು , ಕುಮಟಾ ವನ್ನು ಶಿವಾಜಿ ಮತ್ತು ಆತನ ಸೇನೆ ಲೂಟಿ ಮಾಡಿತ್ತು, ಅಪಾರವಾದ ಹತ್ಯೆ ಕೂಡ ಮಾಡಿತ್ತು ಎಂದು ಇತಿಹಾಸದ ದಾಖಲೆಗಳು ಹೇಳುತ್ತವೆ. ಅದೂ ಕೂಡ ಮಹಾ ಶಿವರಾತ್ರಿಯ ದಿನ. ನಮ್ಮೂರಿನ ಭೂತ, ಕೋಲವನ್ನು ಜಗತ್ಪçಸಿದ್ಧ ಮಾಡಿದವರು ನೀವು. ನಮ್ಮ ಹಿರಿಯರನ್ನು ದಂಡಿಸಿ, ಲೂಟಿ ಮಾಡಿದವರನ್ನು ನೀವು ವಿಜೃಂಭಿಸುವುದು ಸರಿಯೇ? ಹೇಳಲು ಹತ್ತಾರು ಕತೆಗಳಿವೆ. ಕನ್ನಡ ನಾಡಿನ ರಾಜರದ್ದೇ ಕತೆಗಳು ನೂರಾರು ಇವೆ. ಒಮ್ಮೆ ಯೋಚಿಸಿ ಎಂದು ಅಭಿಮಾನಿಯೊಬ್ಬ ಎಕ್ಸ್ನಲ್ಲಿ ರಿಷಬ್ಗೆ ಪ್ರಶ್ನಿಸಿದ್ದಾರೆ.
ಎಂಟು ಹೆಂಡಿರ ಗಂಡ ಅದು ಹೇಗೆ ಆದರ್ಶ ಪ್ರಾಯ ಅಂತ ರಿಷಭ್ ಅವರೇ ಹೇಳಬೇಕು! ಅವನೇನು ರಾಮನೇ?
ಕನ್ನಡಿಗರನ್ನು ಲೂಟಿ ಹೊಡೆದ ರಾಜ. ಬೆಳವಡಿ ಮಲ್ಲಮ್ಮನ ಮುಂದೆ ಸೋತು ಶರಣಾದ ರಾಜ ಯಾವ ರೀತಿಯ ಶೂರನೋ ತಿಳಿಯದು!
ಇನ್ನೂ ಈತನ ಸೈನ್ಯದ ಮುಖಂಡರು ಮುಸಲ್ಮಾನರು ಆಗಿದ್ದರು ಆದರೆ ಈತ ಹೇಗೆ ಹಿಂದೂಗಳ ಹೆಮ್ಮಯೋ ಕಾಣೆ @shetty_rishab https://t.co/lxpMLOcDsk pic.twitter.com/g9bCMjMXVa
— ಚಂದನವನ | Chandanavana (@Chandana_vana) December 3, 2024
ಶಿವಾಜಿ ಮಹಾರಾಜ್ ಕುರಿತ ಈ ಸಿನಿಮಾವನ್ನು ಕೈಬಿಡಿ ಎಂದು ರಿಷಬ್ಗೆ ಅನೇಕರು ಮನವಿ ಮಾಡಿದ್ದಾರೆ. ನಮ್ಮ ಮಣ್ಣಿನ ಕಥೆಯನ್ನು ಹೇಳಿ ಎಂದು ರಿಷಬ್ ವಿರುದ್ಧ ಪರ ಮತ್ತು ವಿರೋಧ ಚರ್ಚೆ ನಡೆಯುತ್ತಿದೆ. ಛತ್ರಪತಿ ಶಿವಾಜಿ ಮಹಾರಾಜ್ ಬಯೋಪಿಕ್ ಮಾಡಿರುವ ಬಗ್ಗೆ ಕನ್ನಡಿಗರು ರಿಷಬ್ ಮೇಲೆ ಸಿಟ್ಟಾಗಿದ್ದಾರೆ. ಇದಕ್ಕೆಲ್ಲಾ ರಿಷಬ್ ಉತ್ತರ ನೀಡುತ್ತಾರಾ? ಸ್ಪಷ್ಟನೆ ಕೊಡುತ್ತಾರಾ? ಎಂದು ಕಾದು ನೋಡಬೇಕಿದೆ.
ಅಂದಹಾಗೆ, ಬಾಲಿವುಡ್ ಡೈರೆಕ್ಟರ್ ಸಂದೀಪ್ ಸಿಂಗ್ ಅವರ ಹಿಸ್ಟೋರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್ ಲುಕ್ನಲ್ಲಿ ಖಡ್ಗ ಹಿಡಿದು ರಿಷಬ್ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿತ್ತು.
View this post on Instagram
ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್ ಸಿನಿಮಾವು 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಕೂಡ ಚಿತ್ರತಂಡ ಅನೌನ್ಸ್ ಮಾಡಿದೆ.